ಉಡುಪಿ, ಫೆ.02 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆವರಣದ ನೂತನ ಕಟ್ಟಡದ ಉದ್ಘಾಟನೆಯು ಕುತ್ಪಾಡಿ ಉದ್ಯಾವರದಲ್ಲಿ ಜ.31ರಂದು ನಡೆಯಿತು.
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಆಯುರ್ವೇದದಲ್ಲಿ ಯಾವುದೇ ಕಾಯಿಲೆಗೆ ಔಷಧಿ ಇಲ್ಲ ಎಂದು ಹೇಳಿಲ್ಲ. ಆದರೆ, ಆಧುನಿಕ ವೈದ್ಯ ಪದ್ಧತಿಗಳ ಆಕರ್ಷಣೆಯಿಂದ ಆಯುರ್ವೇದವನ್ನು ಮರೆಯುತ್ತಿದ್ದೇವೆ.ಆಯುರ್ವೇದವು ಅತ್ಯಂತ ಪುರಾತನವಾದ ವೈದ್ಯಕೀಯ ವ್ಯವಸ್ಥೆಯಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ, ಮತ್ತು ಇದು ರೋಗಗಳನ್ನು ಅವುಗಳ ಮೂಲದಲ್ಲಿಯೇ ಚಿಕಿತ್ಸೆ ನೀಡುತ್ತದೆ. ಎಂದರು.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಾ.ಶ್ರೀನಿವಾಸ್ ಪ್ರಸಾದ್ ಬೂದೂರು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಉಪಸ್ಥಿತರಿದ್ದರು.