Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    Subscribe to Updates

    Get the latest creative news from FooBar about art, design and business.

    What's Hot

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಪ್ರಿಲ್ 24 ರಿಂದ ಮೇ 18 ವರೆಗೆ ಉಳ್ಳಾಲ ದರ್ಗಾ ಉರೂಸ್
    Local News

    ಎಪ್ರಿಲ್ 24 ರಿಂದ ಮೇ 18 ವರೆಗೆ ಉಳ್ಳಾಲ ದರ್ಗಾ ಉರೂಸ್

    adminBy adminApril 23, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ. 23 : ಉಳ್ಳಾಲ ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಇದರ 22 ನೇ ಪಂಚವಾರ್ಷಿಕ 432 ನೇ ವಾರ್ಷಿಕ ಉರೂಸ್ ಸಮಾರಂಭವು ಖಾಝಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಎಪ್ರಿಲ್ 24 ರಿಂದ ಮೇ 18 ವರೆಗೆ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪ್ರಿಲ್ 24 ರಂದು ಅಸರ್ ನಮಾಝ್ ಬಳಿಕ ವಾರ್ಷಿಕ ದ್ವಿಕ್ಸ್ ಮಜಿಸ್ ಹಾಗೂ ಉರೂಸ್ ಉದ್ಘಾಟನೆ ನಡೆಯಲಿದೆ. ಉಳ್ಳಾಲ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುವ ಉರೂಸ್ ಕಾರ್ಯಕ್ರಮವನ್ನು ಸಯ್ಯದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಬಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಯ್ಯದ್ ಅಲಿ ಬಾಫಕಿ ತಂಬಳ್, ಇಬ್ರಾಹಿಂ ಖಲೀಲ್ ತಂಜಳ್ ಕಡಲುಂಡಿ, ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಶರೀಅತ್ ಕಾಲೇಜು ಪ್ರಾಂಶುಪಾಲ ಪ್ರೊ.ಅಹ್ಮದ್ ಕುಟ್ಟಿ ಸಖಾಫಿ, ಅತ್ತಾವುಲ್ಲ ತಂಜಳ್ ಉದ್ಯಾವರ, ವಸತಿ ಸಚಿವ ಝಮೀರ್ ಅಹಮ್ಮದ್, ಸ್ಪೀಕರ್ ಯುಟಿ ಖಾದರ್, ಯೆನೆಪೋಯ ಅಬ್ದುಲ್ಲಾ ಕುಂಞ ಹಾಜಿ, ಬಿ.ಎಂ.ಫಾರೂಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

    ಎಪ್ರಿಲ್ 25 ರಿಂದ ಮೇ 14ವರೆಗೆ ಪ್ರಮುಖ ಧಾರ್ಮಿಕ ಮುಖಂಡರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ.ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಸಯ್ಯದ್ ಮದನಿ ಗ್ರಾಂಡ್ ಮಸೀದಿಗೆ ಶಿಲಾನ್ಯಾಸ ನೆರವೇರಲಿದ್ದು, ಎಪಿ ಅಬೂಬಕ್ಕರ್ ಮುಸ್ಲಿಯಾರ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅದೇ ದಿನ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ  ಸಮಾವೇಶ ದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಕ್ಸ್ ಸಚಿವ ಝಮೀರ್ ಅಹ್ಮದ್, ಪೌರಾಡಳಿತ ಸಚಿವ ರಹೀಮ್ ಖಾನ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
    ಉರೂಸ್ ಆರಂಭ ಆಗುವ ತಿಂಗಳ ಮೊದಲೇ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು,ಸಯ್ಯದ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಬರುತ್ತಾರೆ ಎಂದು ಅವರು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ಮುಕ್ಕಚೇರಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 15, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    Local News July 13, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Film News July 10, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    Local News July 9, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    Comments are closed.

    Demo
    Don't Miss
    State news July 16, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    ಬೆಂಗಳೂರು, ಜು. 16 : ನಗರದ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಎಂಬಾತನ ಹತ್ಯೆ…

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025

    ಬೆಳ್ತಂಗಡಿ: ಶಾಲಾ ಶಿಕ್ಷಕಿ ಆತ್ಮಹತ್ಯೆ

    July 13, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.