ಮಂಗಳೂರು, ಮೇ11 : ಎಂ.ಸಿ.ಸಿ. ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಮೇ 10, ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಶ್ರೀ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಲಾಯಿತು. ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತಾದ ಸಾಕ್ಷಚಿತ್ರವನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು.
ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ವಾಗತ ಭಾಷಣದಲ್ಲಿ ಶ್ರೀ ಅನಿಲ್ ಲೋಬೊ ಅವರುಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಬ್ಯಾಂಕಿನ ಸಮಾನತೆಯನ್ನು ವಿವರಿಸಿದರು. ವಂ. ಫಾ| ಡೆನಿಸ್ ಡೆಸಾ ಅವರ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅವರನ್ನೂ ಸ್ಪೂರ್ತಿಯ ಮೂಲ ಮತ್ತು ವೃತ್ತಿಪರತೆಯ ಸಂಕೇತವೆಂದು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ವಂ.ಫಾ| ಡೆನಿಸ್ ಡೆಸಾ ಮಾತನಾಡಿ, ಎಂ.ಸಿ. ಸಿ. ಬ್ಯಾಂಕು ಪ್ರಗತಿಯತ್ತ ಸಾಗಲು ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಕಾರಣವಾಗಿರುತ್ತಾರೆ. ಸಿಬ್ಬಂದಿಗಳು ಗ್ರಾಹಕರೊಂದಿಗೆ ನಗುಮೊಗದಲ್ಲಿ ಸೇವೆ ಸಲ್ಲಿಸಬೇಕೆಂದು ಅವರು ಒತ್ತಾಯಿಸಿದರು.
ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸಂಸ್ಥಾಪಕ ಶ್ರೀ ಪಿ.ಎಫ್. ಎಕ್ಸ್ ಸಲ್ಡಾನ್ಹಾರವರ ಕುಟುಂಬದ ಸದಸ್ಯರು ಮತ್ತು ವೇದಿಕೆಯಲ್ಲಿರುವ ಗಣ್ಯರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಪಾನೀರ್ ನ ದಿ ಮರ್ಸಿಡ್ ಅನಾಥಾಶ್ರಮ ಮತ್ತು ಕಂಕನಾಡಿಯ ಶಾಲೋಮ್ ಟ್ರಸ್ಟ್ಗೆ ಈ ಸಂದರ್ಭದಲ್ಲಿ ದೇಣಿಗೆಯನ್ನು ವಿತರಿಸಲಾಯಿತು. ವಂ.ಸಿ| ಕ್ಲಾರಾ ಮಿನೇಜಸ್ರವರು ಬ್ಯಾಂಕಿನ ಪ್ರಗತಿಯನ್ನು ತೋರಿಸುವ ಬುಲೆಟಿನ್ ಅನ್ನು ಬಿಡುಗಡೆ ಮಾಡಿದರು. ಹೊಸದಾಗಿ ಸಿಎ ಪರೀಕ್ಷೇಯಲ್ಲಿ ಉತ್ತೀರ್ಣರಾದ ಗ್ರಾಹಕರ ಮಕ್ಕಳಾದ ಚಾರ್ಟರ್ಡ್ ಅಕೌಂಟೆಂಟ್ ಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಂತ ಅಲೋಶಿಯಸ್ ಕಾಲೇಜಿನ ಪ್ರೊಫೆಸರ್ ಮತ್ತು ಎಂಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾದ ಡಾ| ಎಡ್ಮಂಡ್ ಜೆ.ಬಿ. ಫ್ರಾಂಕ್ ಮತ್ತು ಎಂ.ಸಿ.ಸಿ. ಬ್ಯಾಂಕಿನ ಮಾಜಿ ನಿರ್ದೇಶಕರು ಮತ್ತು ಬರಹಗಾರ ಶ್ರೀ ಮಾರ್ಸೆಲ್ ಎಂ. ಡಿಸೋಜ, ಮಂಗಳೂರು ಕೊOಕಣ್ಸ್ ದುಬಾಯ್ ಅಧ್ಯಕ್ಷ ಸ್ಟೇಫನ್ ಮಿನೇಜಸ್ ಅವರನ್ನು ಸನ್ಮಾನಿಸಲಾಯಿತು.ಕಳೆದ 50 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಜ್ಞ ಕೌನ್ಸೆಲಿಂಗ್ ಸೆಂಟರ್ನ ನಿರ್ದೇಶಕಿ ಪ್ರೊ. ಹಿಲ್ಡಾ ರಾಯಪ್ಪನ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪಿಆರ್ ಒ ವಂ. ಫಾ| ಡೆನಿಸ್ ಡೆಸಾ, ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತಿಯ ಸುಪಿರೀಯರ್ ವಂ. ಸಿ| ಕ್ಲಾರ ಮಿನೇಜಸ್, ಯುಎಫ್ಸಿ,ಪ್ರಜ್ಞ ಕೌನ್ಸೆಲಿಂಗ್ ಸೆಂಟರ್ ನ ನಿರ್ದೇಶಕಿ ಪ್ರೊ. ಹಿಲ್ಡಾ ರಾಯಪ್ಪನ್, ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್, ಸಿಎ ಲಯ್ನಾಲ್ ನೋರೊನ್ಹಾ, ಬ್ಯಾಂಕಿನ ನಿರ್ದೇಶಕರಾದ ಅನಿಲ್ ಪತ್ರಾವೊ, ಅಂಡ್ರು ಡಿಸೋಜ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಡಾ| ಜೆರಾಲ್ಡ್ ಪಿಂಟೊ, ಮೆಲ್ವಿನ್ ವಾಸ್, ಸಿ.ಜಿ.ಪಿಂಟೊ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ. ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿ ಕ್ರುಜ್ , ಆಲ್ವಿನ್ ಪಿ. ಮೊಂತೇರೊ ಉಪಸ್ಥಿತರಿದ್ದರು. ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿ, ಗ್ರೀಶ್ಮಾ ಸಲ್ಡಾನ್ಹಾ, ನೀರ್ಮಾರ್ಗ ನಿರೂಪಿಸಿದರು.