ಬೆಳ್ತಂಗಡಿ, ಜೂ. 24 : ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಬಾದ್ಯಾರ್ ಬಳಿ ನಡೆದಿದೆ. ಸಹಪ್ರಯಾಣಿಕ ಗಾಯಗೊಂಡಿದ್ದಾನೆ.
ಮೃತರನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಚಾಲಕ ಎಂದು ಗುರುತಿಸಲಾಗಿದೆ.
ಆಟೋ ರಿಕ್ಷಾ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಸಂಚರಿಸುತ್ತಿದ್ದಾಗ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಾನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆ ದ್ದರು. ಆದಾಗಲೇ ಅವರು ಮೃತಪಟ್ಟಿದ್ದರು.
ಆಟೋ ರಿಕ್ಷಾದಲ್ಲಿದ್ದ ಸಹಪ್ರಯಾಣಿಕ ಶಿವರಾಜ್ ಕೂಡ ಗಾಯಗೊಂಡಿದ್ದು, ಸದ್ಯ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ