ಮಂಗಳೂರು, ಜು. 10 : ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ,ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ ಎಂದರು..
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾ ಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ ಎಂದು ಅವರು ಹೇಳಿದರು..
ಪತ್ರಿಕಾಗೋಷ್ಟಿಯಲ್ಲಿ ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನೇಹಾ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆಗೊಳ್ಳಲಿದೆ.