ಮಂಗಳೂರು, ಆ. 27 : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆ.29, ಶುಕ್ರವಾರ ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಾಯಕ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆತ್ತರಕೆರೆ ಸಿನಿಮಾ ತುಳು ಭಾಷೆಯಲ್ಲಿ ಮಾತ್ರವಲ್ಲದೆ ಇತರ ಭಾಷೆಯಲ್ಲೂ ಸಂಚಲನ ಮೂಡಿಸುವ ನಿರೀಕ್ಷೆ ಇದೆ, ಈ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ ಎಂದರು.
ಚಿತ್ರವು ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ಚಿತ್ರದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪ್ರಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ಧಕಟ್ಟೆ, ಮನೀಶ್ ಶೆಟ್ಟಿ ಉಪ್ಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ, ಅಭಿನಯಿಸಿದ್ದಾರೆ.
ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ಮರಾಜ್ ಶೆಟ್ಟಿ, ಕ್ಯಾಮರಾ ಉದಯ ಬಲ್ಲಾಳ್, ಸಂಗೀತ ವಿನೋದ್ ರಾಜ್ ಕೋಕಿಲಾ, ಸಂಕಲನ ಗಣೇಶ್ ನೀರ್ಚಾಲ್, ಟೈಗರ್ ಶಿವ, ಸಾಹಸ ಮಾಸ್ ಮಾದ, ಲೈನ್ ಪ್ರೊಡ್ಯುಸರ್ ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್ ರಾಜೇಶ್ ಕುಡ್ಲ ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ, ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ ಚೇತನ್, ಆರ್ಟ್ ವಿಪಿನ್ ಎಕ್ಸಿಟಿವ್ ಪ್ರೊಡ್ಯುಸರ್ ಯತೀಶ್ ಪೂಜಾರಿ ಆಗಿರುತಾರೆ ಎಂದರು.
ಮಂಗಳೂರಿನಲ್ಲಿ ಪಿವಿಆರ್. ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ರಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನೆತ್ತರಕೆರೆ ಸಿನಿಮಾ ತೆರೆ ಕಾಣಲಿದೆ.
ಪತ್ರಿಕಾಗೋಷ್ಠಿಯಲ್ಲಿ ಅಸ್ತ್ರ ಗ್ರೂಪ್ನ ಸಿಇಒ ಲಂಚುಲಾಲ್ ಕೆ.ಎಸ್.,ನಟಿ ದಿಶಾಲಿ ಪೂಜಾರಿ, ಯುವ ಶೆಟ್ಟಿ, ಗಣೇಶ್ ನೀರ್ಚಾಲ್, ಸಚಿನ್ ಎಸ್. ಉಪ್ಪಿನಂಗಡಿ ಉಪಸ್ಥಿತರಿದ್ದರು.