Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    September 7, 2025

    ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025

    September 6, 2025

    ಮಂಗಳೂರಿನಲ್ಲಿ ರೆಸ್ಟೊಲೆಕ್ಸ್, ನೋವಾ ಸ್ಲೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಶುಭಾರಂಭ

    September 5, 2025

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    September 7, 2025

    ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025

    September 6, 2025

    ಮಂಗಳೂರಿನಲ್ಲಿ ರೆಸ್ಟೊಲೆಕ್ಸ್, ನೋವಾ ಸ್ಲೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಶುಭಾರಂಭ

    September 5, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025
    Uncategorized

    ಅಕ್ಟೋಬರ್ 5 ರಂದು ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- 2025

    adminBy adminSeptember 6, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ. 5 : ರಚನಾ ಪ್ರಶಸ್ತಿ ಪ್ರದಾನ- 2025 ಕಾರ್ಯಕ್ರಮ ಅಕ್ಟೋಬರ್ 5 ರಂದು ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆಯಲಿದೆ ಎಂದು ರಚನಾ ಸಂಸ್ಥೆಯ ಅಧ್ಯಕ್ಷರು ಜೊನ್ ಬಿ. ಮೊಂತೇರೊ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

    ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ 2025ನೇ ಸಾಲಿನ ಪ್ರಶಸ್ತಿಗಾಗಿ ರಚನಾ ಉದ್ಯಮಿ ಆಸ್ಟಿನ್ ರೋಚ್, ಬೆಂಗಳೂರು, ರಚನಾ ವೃತ್ತಿಪರ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರು,ರಚನಾ ಕೃಷಿಕ ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್ಡಿ, ಬೆಳ್ವಾಯಿ, ಮಂಗಳೂರು,ರಚನಾ ಅನಿವಾಸಿ ಉದ್ಯಮಿ ಪ್ರತಾಪ್ ಮೆಂಡೋನ್ಸಾ, ದುಬಾಯ್, ರಚನಾ ಮಹಿಳಾ ಸಾಧಕಿ ಶೋಭಾ ಮೆಂಡೋನ್ಸಾ, ದುಬಾಯ್ ಈ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದ. ಎಂದು ತಿಳಿಸಿದರು.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮವು 2025ರ ಅಕ್ತೋಬರ್ 5 ರಂದು ಭಾನುವಾರ ಸಂಜೆ 6.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ, ಮಂಗಳೂರಿನ ಬಿಷಪ್ ಅತೀ ಡಾ| ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕದ ಇಂಧನ ಇಲಾಖೆಯ ಮಾನ್ಯ ಸಚಿವರು ಕೆ. ಜೆ. ಜಾರ್ಜ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು.

    ವಿಧಾನ ಪರಿಷತ್ ಶಾಸಕರು ಐವನ್ ಡಿಸೋಜಾ,ಯುಎಇಯ ಬುರ್ಜೀಲ್ ಹೋಲ್ಡಿಂಗ್ಸ್ನ ಸಮೂಹ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಾನ್ ಸುನಿಲ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಡೀನ್ ಮತ್ತು ನಿರ್ದೇಶಕಿ ಡಾ. ಸಿಂಥಿಯಾ ಮಿನೇಜಸ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೊ,ಉಪಾಧ್ಯಕ್ಷರು ನವೀನ್ ಲೋಬೊ, ಖಜಾಂಚಿ ನೆಲ್ಸನ್ ಮೊಂತೇರೊ , ಸಂಘಟಕರು ಯುಲಾಲಿಯಾ ಡಿಸೋಜಾ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized August 16, 2025

    ದ.ಕ. ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

    Local News August 1, 2025

    ಆ.3: ಮಂಗಳೂರಿನ ಉರ್ವ ಸ್ಟೋರ್ ನ ಲ್ಲಿರುವ ಅಂಬೇಡ್ಕರ್ ಭವನದಲ್ಲಿ ‘ಕುಂದಾಪ್ರ ಕನ್ನಡ ಹಬ್ಬ’

    Local News July 28, 2025

    ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ ಬ್ರಹ್ಮಸ್ಥಾನಂ- ಕ್ಷೇತ್ರ:ಪ್ರಮೋದ್ ಮಧ್ವರಾಜ್

    Uncategorized July 20, 2025

    ಧರ್ಮಸ್ಥಳ ಪ್ರದೇಶದಲ್ಲಿ ಸರಣಿ ಹತ್ಯೆ ಆರೋಪ : ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಸರಕಾರ ಆದೇಶ

    Uncategorized June 23, 2025

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Comments are closed.

    Demo
    Don't Miss
    Local News September 7, 2025

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    ಮಂಗಳೂರು, ಸೆ. 07 : ಧರ್ಮಸ್ಥಳ ಪ್ರದೇಶದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ದೂರುದಾರ ಸಿಎನ್ ಚಿನ್ನಯ್ಯ…

    ಮಂಗಳೂರಿನಲ್ಲಿ ರೆಸ್ಟೊಲೆಕ್ಸ್, ನೋವಾ ಸ್ಲೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಶುಭಾರಂಭ

    September 5, 2025

    ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

    September 5, 2025

    ಬೆಳ್ತಂಗಡಿ: ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

    September 4, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.