Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪಡುಬಿದ್ರೆ : ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

    October 6, 2025

    ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ರಚನಾ ಪ್ರಶಸ್ತಿ ಪ್ರದಾನ

    October 5, 2025

    ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

    October 4, 2025

    Subscribe to Updates

    Get the latest creative news from FooBar about art, design and business.

    What's Hot

    ಪಡುಬಿದ್ರೆ : ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

    October 6, 2025

    ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ರಚನಾ ಪ್ರಶಸ್ತಿ ಪ್ರದಾನ

    October 5, 2025

    ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

    October 4, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪಡುಬಿದ್ರೆ : ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ
    Local News

    ಪಡುಬಿದ್ರೆ : ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

    adminBy adminOctober 6, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪಡುಬಿದ್ರೆ,ಅ.06 : ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ವೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ವೇ ಟ್ರಸ್ಟ್ ಪಡುಬಿದ್ರೆ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವಿವಾರ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರಿ ಸಂಸ್ಥೆಗಳು ಜನರ ಅಭಿವೃದ್ಧಿಗೆ ಸಹಕಾರಿಯಾಗಿವೆ.ಸಹಕಾರಿ ಸಂಸ್ಥೆಗಳು ಜನರಿಗೆ ಸರಳೀಕೃತವಾಗಿ ಸಾಲ ನೀಡುವ ವ್ಯವಸ್ಥೆಯಿರುವ ಸಂಸ್ಥೆಯಾಗಿದೆ ಎಂದರು.

    ಎಮ್.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಅವರು ಸಿರಿಮುಡಿ ದತ್ತಿನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.

    ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರು ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ ಉದ್ಘಾಟಿಸಿದರು. ಅವರು ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯ ನಿತರಿಸಿದರು.

    ಭದ್ರತಾ ಕೊಠಡಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಸಿರಿಮುಡಿ ಉಳಿತಾಯ ಖಾತೆ ಪಾಸ್ ಪುಸ್ತಕವನ್ನು ಹೇರಂಭಾ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕನ್ಯಾನ ಸದಾಶಿವ ಶೆಟ್ಟಿ ವಿತರಿಸಿದರು. ನಿರಖು ಠೇವಣಿ ಪತ್ರವನ್ನು ವಿ.ಕೆ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಎಮ್.ಶೆಟ್ಟಿ ಬಿಡುಗಡೆಗೊಳಿಸಿದರು. ನಾನಾ ಸವಲತ್ತು ಗಳನ್ನು ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ವಿತರಿಸಿದರು.

    ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಮತ್ತು ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರನ್ನು ಪಡುಬಿದ್ರೆ ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಂಟಾಶ್ರಯ ಯೋಜನೆಗೆ 5 ಲಕ್ಷ ರೂ.ದೇಣಿಗೆ ನೀಡಿದ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ತು ದಂಪತಿಯನ್ನು ಗೌರವಿಸಲಾಯಿತು. ನಾನಾ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

    ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
    ಪಡುಬಿದ್ರೆ ಬಂಟರ ಸಂಘದ ವತಿಯಿಂದ 2026 ಜನವರಿ 18ರಂದು ಪಡುಬಿದ್ರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಂಟ ಕಲೋತ್ಸವ “ತುಳುವ ಐಸಿರಿ-2026ರ ಕರಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.ಅಶಕ್ತರಿಗೆ, ವಿಶಿಷ್ಟಚೇತನರಿಗೆ, ಅನಾರೋಗ್ಯ ಪೀಡಿತರಿಗೆ, ವಿಧವೆಯರಿಗೆ, ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು. ಸಿರಿಮುಡಿ ದತ್ತಿನಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿ ಒಟ್ಟು ರೂ.17 ಲಕ್ಷ ಸಹಾಯಧನ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ವೈ.ಎನ್.ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಬಿ.ಶೆಟ್ಟಿ, ಯುವ ಬಂಟರ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಶ್ರೀನಾಥ್ ಹೆಗ್ಡೆ, ನಿರ್ದೇಶಕರಾದ ವೈಶಶಿಧರ್ ಶೆಟ್ಟಿ, ರವೀಂದ್ರನಾಥ ಜಿ.ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್‌ಚಂದ್ರ ಜೆ.ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ.ಶೆಟ್ಟಿ, ಶೋಭಾ ಜೆ.ಶೆಟ್ಟಿ ಉಪಸ್ಥಿತರಿದ್ದರು.

    ಬಂಟರ ಸಂಘದ ಸಿರಿಮುಡಿ ದತ್ತಿನಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಜಯ ಶೆಟ್ಟಿ ಪದ್ರ ಮತ್ತು ವಿತಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ತು ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 5, 2025

    ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ರಚನಾ ಪ್ರಶಸ್ತಿ ಪ್ರದಾನ

    Local News October 3, 2025

    ಮಂಗಳೂರು ದಸರಾ : ಶಾರದೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

    Local News October 1, 2025

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ

    Local News September 30, 2025

    ಮಂಗಳೂರು  : ರೋಹನ್ ಕಾರ್ಪೊರೇಶನ್ ವತಿಯಿಂದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

    Local News September 30, 2025

    ಮಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

    Local News September 29, 2025

    ಅ.1ರಂದು ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ವತಿಯಿಂದ ಪಿಲಿನಲಿಕೆ ಸ್ಪರ್ಧೆ

    Comments are closed.

    Demo
    Don't Miss
    Local News October 6, 2025

    ಪಡುಬಿದ್ರೆ : ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

    ಪಡುಬಿದ್ರೆ,ಅ.06 : ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ವೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ವೇ ಟ್ರಸ್ಟ್…

    ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ರಚನಾ ಪ್ರಶಸ್ತಿ ಪ್ರದಾನ

    October 5, 2025

    ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

    October 4, 2025

    ಮಂಗಳೂರು ದಸರಾ : ಶಾರದೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

    October 3, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.