ಮಂಗಳೂರು, ಜ. 29 : ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವನ್ನು ಜನವರಿ 31 ಹಾಗೂ ಫೆಬ್ರವರಿ 1 ರಂದು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು ಪ್ರಸಿದ್ದ ಕೊಂಕಣಿ ನಾಟಕಗಳ ಪ್ರದರ್ಶನ ನಡೆಯಲಿದೆ. ಮೊದಲ ದಿನ ಸಂಜೆ 5.00 ರಿಂದ 6.00 ಗಂಟೆಯ ತನಕ ಮಂಗಳೂರು ಸಾಧನಾ ಬಳಗ ಪ್ರಕಾಶ್ ಶೆಣೈ ನೇತೃತ್ವದ ಮಕ್ಕಳ ಕಲಾತಂಡದವರು “ಭಕ್ತ ಪುರಂದರ” ಯೆಂಬ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.ಅಂದು ಸಂಜೆ 7.00 ರಿಂದ 8.00 ಗಂಟೆ ತನಕ ಮಂಗಳೂರಿನ ರಂಗ ಅಧ್ಯಯನ ಕೇಂದ್ರ ತಂಡದವರು ಅಭಿನಯಿಸುವ ಜನಪ್ರಿಯ “ಚಿಕೆ ರಾಬ್” ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಎರಡನೆಯ ದಿನದಂದು ಸಂಜೆ ಗಂಟೆ 5.00 ರಿಂದ 6.00ರ ತನಕ ಗೋವಾದ ನಟರಂಗ ಕ್ರಿಯೇಶನ್ಸ್ ತಂಡದವರಿಂದ “ಹೆಡೋನಿಸ್ಟ್ ಕೊಂಕಣಿ ನಾಟಕವು ಪ್ರದರ್ಶನಗೊಳ್ಳಲಿದೆ . 6.00 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಹಿರಿಯ ಕೊಂಕಣಿ ರಂಗಕರ್ಮಿ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ ಅವರು,ಈ ಬಾರಿಯ” ಡಾ|ಪಿ.ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪ್ರಶಸ್ತಿ”ಸ್ವೀಕರಿಸಲಿದ್ದಾರೆ. ಹಿರಿಯ ಕೊಂಕಣಿ ಅನುವಾದಕಿ ಮಾಯಾ ಅನಿಲ್ ಖರಂಗಟೆ ಅವರು ಈ ವರ್ಷದ “ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪ್ರಶಸ್ತಿ” ಸ್ವೀಕರಿಸಲಿದ್ದಾರೆ. ಸಂಜೆ 7.00 ರಿಂದ 8.00 ಗಂಟೆಯ ತನಕ ನಾಟ್ಯ ನಿಕೇತನ ಕೊಲ್ಯದ ವತಿಯಿಂದ ಕರ್ನಾಟಕ ಕಲಾಶ್ರೀ ಗುರು ರಾಜಶ್ರೀ ಉಳ್ಳಾಲ ಇವರ ತಂಡದವರಿಂದ “ಪಾರಿಜಾತ ಫೂಲ್” ಗೀತ ನೃತ್ಯ ನಾಟಕವೂ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ ಕಸ್ತೂರಿ ಮೋಹನ್ ಪೈ ,ಗೋವಿಂದ್ ,ರತ್ನಾಕರ್,ಎಂ. ಆರ್.ಕಾಮತ್ ಮುಂತಾದವರು ಉಪಸ್ಥಿತರಿದ್ದರು .











