ಮಂಗಳೂರು,ಫೆ.26 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು.
ನಂತರ ಮಾತನಾಡಿದ ಶಾಸಕರು, ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್ ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದೆ. ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಶಿವಾಜಿ ರಾವ್, ಶೈಲೇಶ್, ಶಿವಾನಂದ, ಪ್ರಕಾಶ್, ಅಚ್ಯುತ್ ಸಾಲ್ಯಾನ್, ಸೇರಿದಂತೆ ವಾರ್ಡಿನ ಕಾರ್ಯಕರ್ತರು, ಪರಿಸರದ ನಿವಾಸಿಗಳು ಉಪಸ್ಥಿತರಿದ್ದರು.











