ಮಂಗಳೂರು, ಮಾ.27 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ12ರ ತನಕ ವಿವಿಧ ವೈದಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಆಶಿಕ್ ಬಲ್ಲಾಳ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ತಿವೊಡಲು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12 ಆದಿತ್ಯವಾರ ಪೂ. 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನ ಸುಮುಹೂರ್ತದಲ್ಲಿ ನೆರವೇರಲಿದೆ. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6 ರಿಂದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. ಅದರೊಂದಿಗೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜಿಸಲಾಗಿವೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕೇಸ್ತರಾದ ಡಾ.ನರೇಶ್ ರೈ,ದೆಪ್ಪುಣಿಗುತ್ತು ,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ವಿಠಲ ಆಳ್ವ, ದೀಪಕ್ ಪೂಜಾರಿ, ಸದಸ್ಯರಾದ ಜಗದೀಶ್ ಶೆಟ್ಟಿ ಮುರ ಮೊದಲಾದವರು ಉಪಸ್ಥಿತರಿದ್ದರು.











