ಮಂಗಳೂರು, ಜು.02 : ಬಂಟರ ಸಂಘ ಬಜಪೆ ವಲಯದ ಬಂಟರ ಭವನಕ್ಕೆ ಶಿಲಾನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ಜುಲೈ 5ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ವಲಯ ಅಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ ಅವರು ಜೂ.16,ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬಂಟರ ಭವನ ವು ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಈ ಬಂಟರ ಭವನದ ಶಿಲಾನ್ಯಾಸವನ್ನು ಎಂಆರ್ಜಿ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ನೆರವೇರಿಸುವರು. ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಸರ್ವಿಸಸ್ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಕೆ. ಶೆಟ್ಟಿ ದೀಪ ಪ್ರಜ್ವಲನೆ ಮಾಡುವರು. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸುವರು. ವಿಕೆ ಗ್ರೂಪ್ ಆಫ್ ಕಂಪೆನೀಸ್ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ನೀಲನಕ್ಷೆ ಬಿಡುಗಡೆ ಮಾಡುವರು. ಪೂನಾ ಬಂಟರ ಸಂಘ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು ಪ್ರತಿಭಾ ಪುರಸ್ಕಾರ ವಿತರಣೆ ಮಾಡುವರು. ಬೆಂಗಳೂರಿನ ಯುನಿವರ್ಸಲ್ ಗ್ರೂಪ್ ಆಫ್ ಇನ್ಸಿಟ್ಯೂಶನ್ ಸ್ಥಾಪಕ ಮತ್ತು ಚೇರ್ಮನ್ ಆರ್. ಉಪೇಂದ್ರ ಶೆಟ್ಟಿ ವಿದ್ಯಾರ್ಥಿ ಸಹಾಯಧನ ವಿತರಣೆ ಮಾಡುವರು ಎಂದರು.
ಈ ಸಂದರ್ಭ ದಾನಿಗಳಾದ ಮುಂಬೈ ಹೇರಂಭ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕನ್ಯಾನ ಸದಾಶಿವ ಶೆಟ್ಟಿ, ಬರೋಡದ ಶಶಿ ಕೇಟರಿಂಗ್ ಸರ್ವಿಸಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ, ಮುಂಬೈನ ಭವಾನಿ ಶಿಪ್ಪಿಂಗ್ ಸರ್ವಿಸ್ ಅಧ್ಯಕ್ಷ ಮತ್ತು ಸ್ಥಾಪಕ ಕುಸುಮೋದರ ಡಿ. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್, ಡಾ. ವೈ.ಭರತ್ ಶೆಟ್ಟಿ, ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಶಿವಪ್ರಸಾದ್ ರೈ, ಕುಸುಮಾಧರ ಶೆಟ್ಟಿ, ಮಹಿಳಾ ವಿಭಾಗ ಅಧ್ಯಕ್ಷೆ ಪ್ರೀತಿ ಹರೀಶ್ ಶೆಟ್ಟಿ, ಯುವ ವಿಭಾಗ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಅಜಿತ್ಕುಮಾರ್ ಶೆಟ್ಟಿ, ಸುಕೇಶ್ ಶೆಟ್ಟಿ, ಉಪಸ್ಥಿತರಿದ್ದರು.











