ಮಂಗಳೂರು, ಫೆ. 22 : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆ. 24 ಹಾಗೂ ಫೆ. 25ರವರೆಗೆ ಚುನಾವಣೆ ನಡೆಯಲಿದೆ.
ಅದ್ದರಿಂದ ಫೆ.24ರ ಬೆಳಿಗ್ಗೆ 6 ಗಂಟೆಯಿಂದ ಫೆ.25ರ ಸಂಜೆ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಈ ಭಾಗಗಳಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.