ಕಾಸರಗೋಡು, ಮಾ. 02 : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಬುಧವಾರ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮೃತ ಮಹಿಳೆಯನ್ನುಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಎಂದು ಗುರುತಿಸಲಾಗಿದೆ. ಇವರು ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿಯಾಗಿದ್ದಾರೆ.
ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣದ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಂಜೇಶ್ವರ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.