ಮಂಗಳೂರು, 25:ಮಂಗಳೂರಿನ ಮಾತಾ ಅಮೃತಾನಂದಮಯಿ ಮಠ ಬೋಳೂರು ವತಿಯಿಂದ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ ‘ಅಮೃತೋತ್ಸವ 2024′ ಕಾರ್ಯಕ್ರಮ ನಗರದ ಸಂಘನಿಕೇತನದಲ್ಲಿ ಸೆ.29ರಂದು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪ ತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9ಗಂಟೆಯಿಂದ ಮಠದ ಮುಖ್ಯಸ್ಥೆ ಸ್ವಾಮಿನಿ ಮಂಗಳಾಮೃತ’ ಪ್ರಾಣ ಅವರ ಸಾರಥ್ಯದಲ್ಲಿ ಶ್ರೀ ಗುರುಪಾದುಕಾ ಪೂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಥಾಮೃತ ಎಂಬ ವಿಶೇಷ ಹರಿಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಠದ ಮಾನವೀಯ ಸೇವಾ ಯೋಜನೆಗಳ ಅನ್ವಯ ವಸ್ತ್ರದಾನ ಹಾಗೂ ಅಮೃತ ಆರೋಗ್ಯ ಸೇವೆಗಳ ವಿತರಣೆ ನಡೆಯಲಿದೆ. ಮಾತಾ ಅಮೃತಾನಂದಮಯಿ ಸೇವಾ ಸಮಿತಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನೂತನ ಸೇವಾ ಸಮಿತಿಗಳ ಪದಗ್ರಹಣ ಕಾರ್ಯಕ್ರಮ ಜರಗಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅದಾನಿ ಸಂಸ್ಥೆಗಳ ಅಧ್ಯಕ್ಷ ಕಿಶೋರ್, ಆಳ್ವ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪ ತ್ರಿಕಾಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಸುರೇಶ್ ಅಮೀನ್, ಉಡುಪಿ ಸಮಿತಿಯ ಅಧ್ಯಕ್ಷ ಯೋಗೀಶ್ ಕೊಡವೂರು, ಕೋಶಾಧಿಕಾರಿ ರಾಮನಾಥ ನಾಯಕ್, ವೈದ್ಯಕೀಯ ಪ್ರಕೋಷ್ಠಾದ ಡಾ| ದೇವದಾಸ್ ಪುತ್ರನ್ ಉಪಸ್ಥಿತರಿದ್ದರು.