Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    March 20, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    March 20, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಾ.1-14 : ಅಡ್ಯಾರ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ
    Local News

    ಮಾ.1-14 : ಅಡ್ಯಾರ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ

    adminBy adminJanuary 28, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜ.28 : ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಊರ ಪರವೂರ ಭಕ್ತರ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ ಆಡಳಿತದೊಂದಿಗೆ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದ್ದು, ಮಾರ್ಚ್ 1 ರಿಂದ 14ರವರೆಗೆ ತನಕ ತಂತ್ರಿವರೇಣ್ಯರಾದ ವಾಮಂಜೂರು ಶ್ರೀ ಅನಂತ ಉಪಾಧ್ಯಾಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ ಧ್ವಜಾರೋಹಣ ಆಗಿ ಮಾರ್ಚ್ 14ರ ತನಕ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ವಿವಿಧ ಧಾರ್ಮಿಕ ಕ್ಷೇತ್ರಗಳ ಮಠಾಧೀಶರು ಆಶೀರ್ವಚನ ನೀಡಲಿದ್ದು ಬೇರೆ ಬೇರೆ ಕ್ಷೇತ್ರಗಳ ಸಾಧಕರು,ರಾಜಕೀಯ ನಾಯಕರು, ಕೊಡುಗೈ ದಾನಿಗಳು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

    ಪತ್ರಿಕಾಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟ್ ನ ದಿವಾಕರ ದಾಸ್ ಮಲ್ಲಿ, ದೇವಳದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಎನ್.ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ನಾಯ್ಕ್ ಅಡ್ಯಾರು, ಪುನರ್ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಶೆಟ್ಟಿ ಭಂಡಾರಿಂಜ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧ್ಯಕ್ಷ ದೇವಿಪ್ರಸಾದ್ ಸಾಮಾನಿ ಅಡ್ಯಾರುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ.ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 20, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    Local News March 19, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    Local News March 17, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    Local News March 16, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    Comments are closed.

    Demo
    Don't Miss
    Local News March 20, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    ಮಂಗಳೂರು, ಮಾ. 20 : ರಂಜಾನ್ ಮಾಸದ ಅಂತ್ಯದ ಅಂಗವಾಗಿ ಮುಸ್ಲಿಂ ಬಾಂಧವರು ಶುಕ್ರವಾರ ನಗರದ ವಿವಿಧ ಮಸೀದಿಗಳು ಮತ್ತು…

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.