Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    January 1, 2026

    ಸಂಸದ ಬ್ರಿಜೇಶ್ ಚೌಟ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳದ ಫಲಿತಾಂಶ

    January 1, 2026

    Subscribe to Updates

    Get the latest creative news from FooBar about art, design and business.

    What's Hot

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    January 1, 2026

    ಸಂಸದ ಬ್ರಿಜೇಶ್ ಚೌಟ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳದ ಫಲಿತಾಂಶ

    January 1, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಫೆ. 22-23 : ರಾಮ ಕ್ಷತ್ರಿಯ ಮಂಗಳೂರು ಇದರ ನೇತೃತ್ವದಲ್ಲಿ ಪಾಲೆಮಾರ್ ಗಾರ್ಡನ್ ನಲ್ಲಿ   “ಕ್ಷಾತ್ರ ಸಂಗಮ -3”
    Local News

    ಫೆ. 22-23 : ರಾಮ ಕ್ಷತ್ರಿಯ ಮಂಗಳೂರು ಇದರ ನೇತೃತ್ವದಲ್ಲಿ ಪಾಲೆಮಾರ್ ಗಾರ್ಡನ್ ನಲ್ಲಿ   “ಕ್ಷಾತ್ರ ಸಂಗಮ -3”

    adminBy adminFebruary 19, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಫೆ.19 : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ಇದರ ನೇತೃತ್ವದಲ್ಲಿ ಫೆ.22 ಮತ್ತು 23, 2025 ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ಎಂಬ ರಾಮಕ್ಷತ್ರಿಯರ ಸಮಾವೇಶ ನಡೆಯಲಿದೆ ಎಂದು ಸಂಚಾಲಕರಾದ ಜೆ.ಕೆ.ರಾವ್ ನಗರದ ಪಾಲೆಮಾರ್ ಗಾರ್ಡನ್ ನಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಸಮಾಜವನ್ನು ಒಟ್ಟುಗೂಡಿಸುವುದು ಮತ್ತು ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಆಚರಣೆ, ಪರಂಪ ರೆಯನ್ನು ತಿಳಿಯಪಡಿಸುವುದು ಸಮಾವೇಶದ ಮುಖ್ಯ ವಿಷಯವಾಗಿದೆ. ಈ ಸಮಾವೇಶದಲ್ಲಿ ರಾಮಕ್ಷತ್ರಿಯ ಸಮಾಜದ ಎಲ್ಲಾ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವ ಸಮುದಾಯ, ಮಹನೀಯರು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ ಸುಮಾರು 52 ಸಂಘಗಳ ಪ್ರತಿನಿಧಿ ಗಳು ಮತ್ತು ಸದಸ್ಯರು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ ಎಂದರು.

    ಫೆ. 22 ರಂದು ಬೆಳಗ್ಗೆ ಗಂಟೆ 9ರಿಂದ ರಾಮತಾರಕ ಯಜ್ಞ ಮತ್ತು ಜಪ ನಡೆಯಲಿದೆ. ತದನಂತರ “ಹನುಮಾನ್ ಚಾಲೀಸ” ಕಂಠಪಾಠ ಸ್ಪರ್ಧೆ, ಪುಷ್ಪ ಜೋಡಣೆ, ರಂಗವಲ್ಲಿ ಸ್ಪರ್ಧೆಗಳು ನಡೆಯಲಿದೆ. ಇದರ ಜೊತೆ ವಧುವರ ಅನ್ವೇಷಣೆ ಮತ್ತು ಉದ್ದಿಮೆದಾರರ ಸಮಾವೇಶ ಕೂಡಾ ಇರಲಿದೆ. ಸಂಜೆ ಗಂಟೆ 4ರಿಂದ ಉದ್ಘಾಟನಾ ಸಮಾರಂಭ ನಡೆಯಲಿದೆ.  ಕೃಷ್ಣ ಜೆ. ಪಾಲೆಮಾರ್ ಉದ್ಘಾಟನೆ ನೆರವೇರಿಸಲಿರುವರು. ಸಂಘದ ಅಧ್ಯಕ್ಷ ಮುರಳೀಧರ್ ಸಿ.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರಿಂದ ದಿಕ್ಕೂಚಿ ಭಾಷಣ ನಡೆಯಲಿದ್ದು ತದನಂತರ ರಾಮಕ್ಷತ್ರಿಯ ಸೇವಾ ಸಂಘ(ರಿ), ಮಂಗಳೂರು ಇದರ ಮಹಿಳಾ ಮತ್ತು ಯುವ ವೃಂದದ ಸದಸ್ಯರಿಂದ ‘ಕರ್ನಾಟಕ ವೈಭವ’ ಎನ್ನುವ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಫೆ. 23 ರಂದು ರಾಮಕ್ಷತ್ರಿಯ ಸಮಾಜದ ಊರ, ಪರವೂರ ವಿವಿಧ ಸಂಘಗಳ ಸದಸ್ಯರಿಂದ ಪ್ರತಿಭಾ ಸ್ಪರ್ಧೆ ನಡೆಯ ಲಿದೆ. ಇದರ ಜೊತೆಯಲ್ಲಿ ರಾಮಕ್ಷತ್ರಿಯರ ಪಾರಂಪರಿಕ ಸಸ್ಯಹಾರಿ ಆಹಾರೋತ್ಸವ ಸ್ಪರ್ಧೆ ಕೂಡಾ ನಡೆಯಲಿ ಎಂದು ತಿಳಿಸಿದರು.

    ಮಧ್ಯಾಹ್ನ ಗಂಟೆ 2 ರಿಂದ ಯುವ ಮತ್ತು ಮಹಿಳಾ ಸಮ್ಮೇಳನ, ಗಂಟೆ 3.00 ರಿಂದ ವಿಚಾರ ಗೋಷ್ಠಿ ನಡೆಯಲಿದೆ. ಸಂಜೆ ಗಂಟೆ 5 ರಿಂದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣ ಜೆ .ಪಾಲೆಮಾರ್ ವಹಿಸಲಿರುವರು. ಈ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಮೈಸೂರು ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹಾಗೂ ಸಂಸದರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಮತ್ತು ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಉಮನಾಥ್ ಕೋಟ್ಯಾನ್, ಶಾಸಕರು, ಮುಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಭಾಗವಹಿಸಲಿದ್ದಾರೆ. ಇದರೊಂದಿಗೆ ಊರ ಪರವೂರ ಅನೇಕ ಗಣ್ಯರ ಘನ ಉಪಸ್ಥಿತಿ ಇರಲಿದ್ದಾರೆಂದು. ಅಂದು ರಾಮಕ್ಷತ್ರಿಯ ಸಮಾಜದ ಅತೀ ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕೆಲವು ಗಣ್ಯರನ್ನು ಸನ್ಮಾನಿಸ ಲಾಗುವುದು. ಈ ಹಿಂದೆ 2014 ಮತ್ತು 2016 ರಲ್ಲಿ 2 ಬಾರಿ “ಕ್ಷಾತ್ರ ಸಂಗಮ”ವು ವಿಜೃಂಭಣೆಯಿಂದ ನಡೆದಿತ್ತು ಇದು ಮೂರನೇ ವರ್ಷದ ಕಾರ್ಯಕ್ರಮವಾಗಿದೆ ಎಂದರು,

    ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ಎಂಬ ರಾಮಕ್ಷತ್ರಿಯರ ಸಮಾವೇಶ ರಾಮ ಕ್ಷತ್ರಿಯ ಸಮಾಜಬಾಂಧವರನ್ನು ಒಗ್ಗೂಡಿಸುವ ಸಲುವಾಗಿ ಈ ಉತ್ತಮ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಶಾಸಕರಾದ ಕೃಷ್ಣಜೆ ಪಾಲೆಮಾರ್ ಅವರು ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಜೆ.ಕೆ ರಾವ್, ಮುರಳಿಧರ್,ರವೀಂದ್ರ ಕೆ,ರವೀಂದ್ರ ರಾವ್, ಕೃಷ್ಣ ಮುರಳಿ ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 1, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    Local News January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    Local News January 1, 2026

    ಸಂಸದ ಬ್ರಿಜೇಶ್ ಚೌಟ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳದ ಫಲಿತಾಂಶ

    Local News December 28, 2025

    ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತ – ಬಿ.ವೈ.ವಿಜಯೇಂದ್ರ

    Local News December 27, 2025

    ಡಿ.30 : ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ

    Local News December 27, 2025

    ಮಂಗಳೂರು : ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದ 9ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ

    Comments are closed.

    Demo
    Don't Miss
    Local News January 1, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    ಮಂಗಳೂರು,ಜ.01 : ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಅವರು ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ…

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    January 1, 2026

    ಸಂಸದ ಬ್ರಿಜೇಶ್ ಚೌಟ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳದ ಫಲಿತಾಂಶ

    January 1, 2026

    ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತ – ಬಿ.ವೈ.ವಿಜಯೇಂದ್ರ

    December 28, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.