Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಾ. 23 : ಮೈಸೂರಿನಲ್ಲಿ2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ
    Local News

    ಮಾ. 23 : ಮೈಸೂರಿನಲ್ಲಿ2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ

    adminBy adminMarch 13, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಮಾ.13: ಕರ್ನಾಟಕ ಕೊಂಕಣಿ ಸಾಹಿತ್ಯ ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಮೈಸೂರು ಸಹಯೋಗದೊಂದಿಗೆ 23 ಮಾರ್ಚ್ 2025, ಆದಿತ್ಯವಾರ ಸಂಜೆ 5.00 ಗಂಟೆಗೆ ಕೊಂಕಣ್ ಭವನ್, ವಿಜಯನಗರ್ 2nd ಸ್ಟೇಜ್,ಮೈಸೂರಿನಲ್ಲಿ2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಜರುಗಲಿರುವುದು ಎಂದು ಸ್ಟಾನಿ ಅಲ್ವಾರಿಸ್ ಅವರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ 2024 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹಾನಿಯರನ್ನು ಆಯ್ಕೆ ಮಾಡಲಾಗಿದೆ.

    2024ನೇ ಸಾಲಿನ ಗೌರವ ಪ್ರಶಸ್ತಿ:

    ಕೊಂಕಣಿ ಸಾಹಿತ್ಯ : ಮಂಗಳೂರಿನ ಶ್ರೀ ಎಂ. ಪ್ಯಾಟ್ರಿಕ್ ಮೊರಾಸ್, ಕೊಂಕಣಿ ಕಲೆ : ಮಂಗಳೂರಿನ ಶ್ರೀ ಜೊಯಲ್ ಪಿರೇರಾ, ಕೊಂಕಣಿ ಜಾನಪದ : ಹಳಿಯಾಳದ ಶ್ರೀಮತಿ ಸೊಬೀನಾ ಮೊತೇಶ್ ಕಾಂಬ್ರೆಕರ್,

    2024ನೇ ಸಾಲಿನ ಪುಸ್ತಕ ಪುರಸ್ಕಾರ :
    ಕೊಂಕಣಿ – ಕವನ ಪುಸ್ತಕ : “ಪಾಲ್ವಾ ಪೊಂತ್” – ದೆರೆಬೈಲ್ ನ ಶ್ರೀಮತಿ ಫೆಲ್ಸಿ ಲೋಬೊ, ಕೊಂಕಣಿ ಲೇಖನ ಪುಸ್ತಕ : ಶೆತಾಂ ಭಾಟಾಂ ತೊಟಾಂನಿ – ಕಾರ್ಕಳದ ಶ್ರೀ ಕಾರ್ಕಳದ ಶ್ರೀ ವಲೇರಿಯನ್ ಸ್ವಿಕೇರ.

    ಗೌರವ ಪ್ರಶಸ್ತಿಯು ರೂ.50,000/-ನಗದು,ಪ್ರಮಾಣ,ಪತ್ರ, ಶಾಲು, ಹಾರ, ಪೇಟ, ಸ್ಮರಣಿಕೆ, ಫಲಪುಷ್ಪಗಳನ್ನು, ಒಳಗೊಂಡಿದೆ. ಪುಸ್ತಕ ಪುರಸ್ಕಾರವು ರೂ.25,000/- ನಗದು, ಪ್ರಮಾಣ ಪತ್ರ, ಶಾಲು, ಹಾರ, ಸ್ಮರಣಿಕೆ ಫಲಪುಷ್ಪಗಳನ್ನು ಒಳಗೊಂಡಿದೆ.

    ಕರ್ನಾಟಕ ಕೊಂಕಣಿ ಸಾಹಿತ್ಯ ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಮೈಸೂರು ಸಹಯೋಗದೊಂದಿಗೆ
    23 ಮಾರ್ಚ್ 2025, ಆದಿತ್ಯವಾರ ಸಂಜೆ 5.00 ಗಂಟೆಗೆ ಕೊಂಕಣ್ ಭವನ್, ವಿಜಯನಗರ್ 2nd ಸ್ಟೇಜ್,
    ಮೈಸೂರಿನಲ್ಲಿ ಜರುಗಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡ ನೆರವೇರಿಸಲಿರುವರು.

    ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರ ಅಧ್ಯಕ್ಷತೆಯಲ್ಲಿ, ವಿಧಾನಪರಿಷತ್
    ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ
    ಭಾಗಿಯಾಗಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
    ವಿಜೇತರಾದ ಶ್ರೀ ವಲೇರಿಯನ್ ಡಿಸೋಜ(ವಲ್ಲಿ ವಗ್ಗ),ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರುವಿಭಾಗದ ಜಂಟಿ ನಿರ್ದೇಶಕರಾದ ಶ್ರೀ ವಿ ಎನ್ ಮಲ್ಲಿಕಾರ್ಜುನ ಸ್ವಾಮಿ- ಗೌರವ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

    ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿದ್ದಿ ಸಮುದಾಯದ ಸಾಂಸ್ಕೃತಿಕ ನೃತ್ಯ, ಬ್ರಾಸ್ ಬ್ಯಾಂಡ್, ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿರುವುದು.ಕೊಂಕಣಿ ಜಿ.ಎಸ್.ಬಿ. ಸಭಾ, ಮೈಸೂರು ಮತ್ತು ಮುರುಡೇಶ್ವರ ನವಾಯತ್ ಅಸೋಸಿಯೇಶನ್ ಮೈಸೂರು ಇವರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದ್ದಾರೆ ಎಂದು ಸ್ಟಾನಿ ಅಲ್ವಾರಿಸ್ ಅವರು ಹೇಳಿದರು.

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರತಿಕಾ ಗೋಷ್ಟಿಯಲ್ಲಿ
    ಅಧ್ಯಕ್ಷರು ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಸದಸ್ಯರು ಶ್ರೀ ನವೀನ್ ಕೆನ್ಯುಟ್ ಲೋಬೊ, ಸದಸ್ಯರು ಶ್ರೀ ಸಮರ್ಥ ಭಟ್, ಸದಸ್ಯರು ಶ್ರೀ ರೊನಾಲ್ಡ್ ಕ್ರಾಸ್ತಾ ಹಾಗೂ ಶ್ರೀ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 10, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    Local News May 8, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    Local News May 7, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    Local News May 6, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    Local News May 5, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    Film News May 4, 2026

    ಮೇ 8 : “ಮಂಗಮಾಯ” ಕನ್ನಡ ಚಲನಚಿತ್ರ ಬಿಡುಗಡೆ

    Comments are closed.

    Demo
    Don't Miss
    National or International news May 11, 2026

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    ಚೆನ್ನೈ, ಮೇ. 11 : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ…

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    May 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.