ನವದೆಹಲಿ, ಮಾ.28 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿದ ದಿನ ತಾರೀಕು ಏ.14 ರಂದು ದೇಶದಲ್ಲಿರುವ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ರಜೆಯನ್ನು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ರಜೆಯನ್ನು ಘೋಷಿಸಲಾಗಿದೆ. ಗೌರವಾನ್ವಿತ ಪ್ರಧಾನಿ ಜಿ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ದೇಶದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏ. 14 ರ ಸೋಮವಾರ ರಜೆ ಇರಲಿದೆ. ಈ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.