Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    January 8, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    January 7, 2026

    Subscribe to Updates

    Get the latest creative news from FooBar about art, design and business.

    What's Hot

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    January 8, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    January 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೋಹನ್ ಕಾರ್ಪೊರೇಶನ್ ನ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆ ಕಾರ್ಯಕ್ರಮ
    Local News

    ರೋಹನ್ ಕಾರ್ಪೊರೇಶನ್ ನ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆ ಕಾರ್ಯಕ್ರಮ

    adminBy adminApril 19, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ.೧೯ : ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ ನೆರವೇರಿತು.ಫಾ.ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ವಂ|ಫಾ|ರಿಚಾರ್ಡ್ ಕುವೆಲ್ಲೊ ಅವರು ಆಶೀರ್ವದಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡು ಜನರ ಬಳಕೆಗೆ ಶೀಘ್ರ ಸಿಗುವಂತಾಗಲಿ ಎಂದರು.

    ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಕಳೆದೊಂದು ತಿಂಗಳಲ್ಲೇ ರೋಹನ್ ಸಂಸ್ಥೆಯ ನಾಲ್ಕು ಪ್ರಮುಖ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಾಗಿದೆ, ಬಹುತೇಕ ಎಲ್ಲ ಫ್ಲಾಟ್‌ಗಳೂ ಮಾರಾಟಗೊಂಡಿವೆ, ಕಂಕನಾಡಿಯ ಪ್ರಮುಖ ಆಯಕಟ್ಟಿನ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಇಥೋಸ್ನ ಉಳಿದ ಫ್ಲಾಟ್‌ಗಳೂ ಕೂಡಾ ಶೀಘ್ರ ಮಾರಾಟಗೊಳ್ಳಲಿವೆ, ಜನರ ಅಭಿರುಚಿಗೆ ತಕ್ಕಂತೆಯೇ ಕಟ್ಟಡಗಳನ್ನು ನಿರ್ಮಿಸುವ ಕಾರಣ ಇದು ಸಾಧ್ಯವಾಗಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಅವರು ಮಾತನಾಡಿ, ಕಂಕನಾಡಿ ಪ್ರದೇಶದಲ್ಲಿ ಈಗ ನಿರ್ಮಾಣಗೊಳ್ಳಲಿರುವ ರೋಹನ್ ಇಥೋಸ್   ಆಕರ್ಷಕ  ಫ್ಲಾಟ್‌ ಆಗಿ ಮೂಡಿಬರಲಿದೆ. ರೋಹನ್ ಮೊಂತೇರೊ ಅವರ  ಪ್ರಾಮಾಣಿಕತೆ  ಅವರು  ಇಷ್ಟು ಎತ್ತರಕ್ಕೇರಲು  ಕಾರಣ ಎಂದರು.

    ಮಾಜಿ ಶಾಸಕ ಜೆ.ಆರ್.ಲೋಬೊ, ಪತ್ರಕರ್ತ ವಾಲ್ಟರ್ ನಂದಳಿಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ಗಳಾದ ಎಂ.ಶಶಿಧರ ಹೆಗ್ಡೆ, ಭಾಸ್ಕರ್ ಕೆ, ನಿಕಟಪೂರ್ವ ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಜೆಸಿಂತಾ ಆಲ್ಪ್ರೆಡ್, ವಕೀಲ ಜಗದೀಶ್ ಶೇಣವ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಭಾಸ್ಕರ್, ರೋಹನ್ ಕಾರ್ಪೊರೇಷನ್ ನಿರ್ದೇಶಕ ಡಿಯೊನ್ ಮೊಂತೆರೊ ಉಪಸ್ಥಿತರಿದ್ದರು. ಸಾಹಿಲ್ ಝಹೀರ್ ನಿರೂಪಿಸಿದರು, ರೋಹನ್ ಮೊಂತೇರೊ ವಂದಿಸಿದರು.

    ರೋಹನ್ ಇಥೋಸ್ ವಿಶೇಷತೆಗಳು :-
    ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿಯ ನಿವೇಶನದಲ್ಲಿ ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ.
    ೧೫ ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ ೩, ೪ ಬಿಎಚ್‌ಕೆಯ ಫ್ಲಾಟ್‌ಗಳಿದ್ದು ಒಟ್ಟು ೨೮ ಅಪಾರ್ಟ್‌ಮೆಂಟ್‌ಗಳಿರಲಿವೆ.

    ಇನ್‌ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್‌ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿರಲಿವೆ.
    ಅಪಾರ್ಟ್‌ಮೆಂಟ್‌ಗಳು ವಾಸ್ತು ಪ್ರಕಾರವಾಗಿದ್ದು ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವಿರಲಿವೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ. ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.
    ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. https://rohancorporation.in/

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 9, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    Local News January 8, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    Local News January 7, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    Local News January 6, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    Local News January 5, 2026

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    Local News January 4, 2026

    ಮಂಗಳೂರು : ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಭವ್ಯ ಮೆರವಣಿಗೆ

    Comments are closed.

    Demo
    Don't Miss
    Local News January 9, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    ಮಂಗಳೂರು, ಜ.09 : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜ. 11ಕ್ಕೆ ಮಂಗಳೂರಲ್ಲಿ ನಡೆಯಲಿದೆ…

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    January 8, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    January 7, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    January 6, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.