ಕೇದಾರನಾಥ, ಜೂ. 15 : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ್ ಪ್ರದೇಶದ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ನಲ್ಲಿದ್ದ 7 ಮಂದಿ ಸಾವಪ್ಪಿನದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್ನಲ್ಲಿ ಪೈಲಟ್ ಸೇರಿದಂತೆ 7 ಜನರಿದ್ದರು ಎನ್ನಲಾಗಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್ನದು ಎಂದು ಹೇಳಲಾಗುತ್ತಿದೆ.
ಪೈಲೆಟ್, 23 ತಿಂಗಳ ಮಗು ಸೇರಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಟ್ಟ ಹವಾಮಾನವೇ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.ಗೌರಿಕುಂಡ್ ಮೇಲೆ ಹುಲ್ಲು ಕಡಿಯುತ್ತಿದ್ದ ನೇಪಾಳಿ ಮೂಲದ ಮಹಿಳೆಯರು ಹೆಲಿಕಾಪ್ಟರ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನವಾಗಿರುವುದನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ದೃಢಪಡಿಸಿದ್ದಾರೆ.
ಸಾವಪ್ಪಿದವರೆಲ್ಲರೂ ಮಹಾರಾಷ್ಟ್ರದ ಜೈಸ್ವಾಲ್ ಕುಟುಂಬಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯ ಬೆನ್ನಲ್ಲೇ ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಕೆಟ್ಟ ಹವಾಮಾನದಿಂದಾಗಿ, ರಕ್ಷಣಾ ಕಾರ್ಯವು ತೊಂದರೆಗಳನ್ನು ಎದುರಿಸುತ್ತಿದೆ.