ಕಾಸರಗೋಡು, ಜೂ. 16 : ಬಾಲಕನೊಬ್ಬ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಕೊಕ್ಕೆಜಾಲ್ ನ ಸಾದತ್ ಎಂಬುವವರ ಪುತ್ರ ಸುಲ್ತಾನ್ (7) ಎಂದು ಗುರುತಿಸಲಾಗಿದೆ.
ಮನೆ ಸಮೀಪ ಆಟವಾಡುತ್ತಿದ್ದ ಸುಲ್ತಾನ್ ನಾಪತ್ತೆಯಾಗಿ ದ್ದು, ಮನೆಯವರು ಶೋಧ ನಡೆಸಿದರೂ ಬಾಲಕನ ಸುಳಿವು ಪತ್ತೆಯಾಗಲಿಲ್ಲ.
ಬಳಿಕ ಘಟನಾ ಸ್ಥಳಕ್ಕೆ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಹಾಗೂ ಸ್ಥಳೀಯರು ಶೋಧ ನಡೆಸಿ, ಮನೆಯಿಂದ 500 ಮೀಟರ್ ದೂರದ ತೋಡಿನ ಬದಿಯ ಪೊದೆಯಲ್ಲಿ ಬಾಲಕ ಸಿಲುಕಿರುವುದು ಪತ್ತೆಯಾಗಿದೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ..
ಮನೆ ಸಮೀಪವೇ ತೋಡು ಹಾದುಹೋಗುತ್ತಿದ್ದು, ಆಕಸ್ಮಿಕವಾಗಿ ಬಾಲಕ ತೋಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.