ಮಂಗಳೂರು, ಜೂ.23 : ಕೊಂಕಣಿ ಕವಿ ಎಚ್. ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಅನ್ನು ಶುಕ್ರವಾರ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ ಶ್ರೀ ಮೈಕಲ್ ಡಿ ಸೊಜಾ ಅಧ್ಯಕ್ಷತೆ ವಹಿಸಲಿರುವರು. ಅಖಿಲ ಭಾರತೀಯ ಕೊಂಕಣಿ ಪರಿಷದ್ ಪ್ರಧಾನ ಕಾರ್ಯದರ್ಶಿ ಸ್ನೇಹಾ ಸಬನೀಸ ಮತ್ತು ಕವಿತಾ ಟ್ರಸ್ಟ್ ಅಧ್ಯಕ್ಷ ಕಥೆಗಾರ ಕಿಶೂ, ಬಾರ್ಕೂರ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ಎಚ್.ಎಮ್. ಪೆರ್ನಾಲ್ ಸದ್ಯ ಕಿಟಾಳ್ ಅಂತರ್ಜಾಲ ಸಾಹಿತ್ಯ ಪತ್ರಿಕೆಯ ಸಂಪಾದಕ, ಆರ್ಸೊ ಕೊಂಕಣಿ ಸಾಹಿತ್ಯ ಪತ್ರಿಕೆಯ ಪ್ರಕಾಶಕ ಮತ್ತು ಮೈಕಲ್ ಡಿಸೊಜಾ ವಿಶನ್ ಕೊಂಕಣಿ ಪುಸ್ತಕ ಅನುದಾನ ಯೋಜನೆಯ ಪ್ರಧಾನ ಸಂಪಾದಕರಾಗಿದ್ದಾರೆ.