ಮಂಗಳೂರು, ಜೂ. 27 : ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ಈ ಚಟುವಟಿಕೆಗಳು ನಡೆಯುತ್ತವೆ.
ಕಾರ್ಯಕ್ರಮದ ಕುರಿತು ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು.
ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ, ಕುಂದಾಪುರದ ಸೈಂಟ್ ಮೇರಿ ಶಾಲೆ, ಕುಂದಾಪುರದ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆ ಮತ್ತುಕೊಸ್ಮೊಪೊಲಿಟನ್ ಹಿರಿಯ ಪ್ರಾಥಮಿಕ ಶಾಲೆ, ಮಂಗಳೂರಿನ ಕೂಳೂರು ಪ್ರೌಢಶಾಲೆ, ಬಿಜೈಯ ಸೈಂಟ್ ಅಂಜೆಲಾ ಹೋಂ, ಡಿ ಮರ್ಸಿಡ್ ಅನಾಥಾಶ್ರಮ, ಪಾನೀರ್, ಪಾಲಡ್ಕದ ಸೈಂಟ್ ಇಗ್ನೇಷಿಯಸ್ ಲೊಯೊಲಾ ಶಾಲೆ, ಜೆಪ್ಪುವಿನ ಸೈಂಟ್ ರೀಟಾ ಹಿರಿಯ ಪ್ರಾಥಮಿಕ ಶಾಲೆ, ಉರ್ವಾದ ಲೇಡಿಹಿಲ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪುತ್ತೂರಿನ ಮಾಯ್ ದೆ ದೆವೂಸ್ ಹಿರಿಯ ಪ್ರಾಥಮಿಕ ಶಾಲೆಯ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾ ಬ್ಯಾಗ್ ಮತ್ತು ಕೊಡೆಗಳನ್ನು ವಿತರಣೆ ಮಾಡಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು.
ಬ್ಯಾಂಕಿನ ಈ ಉದಾತ್ತ ಕಾರ್ಯಕ್ಕೆ ಮೇಲ್ಕಂಡ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾ ಸಂಸ್ಥೆಗಳಲ್ಲಿ ಓದುತ್ತಿರುವ ಬಡ ಮಕ್ಕಳು ಮತ್ತು ಆಶ್ರಮದ ನಿವಾಸಿಗಳ ಬಗ್ಗೆ ಕಾಳಜಿಯನ್ನು ತೋರಿಸಿದ್ದಕ್ಕಾಗಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್ಬುಕ್ಗಳ ವಿತರಣೆಯು ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯವಾದ ಬೆಂಬಲವನ್ನು ನೀಡುವುದಲ್ಲದೆ, ಕೃತಜ್ಞತೆ ಮತ್ತು ಪರಿಶ್ರಮದ ಸಂಸ್ಕೃತಿಯನ್ನು ಪ್ರೇರೇಪಿಸಿತು.
ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ, ಎಲ್ರೊಯ್ ಕಿರಣ್ ಕ್ರಾಸ್ಟೊ, ಸುಶಾಂತ್ ಸಲ್ಡಾನಾ, ಶರ್ಮಿಳಾ ಮಿನೇಜಸ್, ಐರಿನ್ ರೆಬೆಲ್ಲೊ, ರೋಶನ್ ಡಿಸೋಜಾ, ಹೆರಾಲ್ಡ್ ಜೆ. ಮಾಂತೆರೊ, ಜೆ.ಪಿ. ರೋಡ್ರಿಗಸ್, ಅಂಡ್ರೂ ಡಿ’ಸೋಜ ಮತ್ತು ಕುಂದಾಪುರ, ಬ್ರಹ್ಮಾವರ, ಅಶೋಕನಗರ, ಕಂಕನಾಡಿ, ಮೋರ್ಗನ್ಸ್ ಗೇಟ್, ಪುತ್ತೂರು ಮತ್ತು ಉಳ್ಳಾಲ ಶಾಖೆಗಳ ಶಾಖಾ ವ್ಯವಸ್ಥಾಪಕ ಕೂಡ ಭಾಗವಹಿಸಿದ್ದರು.