ಬೆಳ್ತಂಗಡಿ, ಜೂ. 28 : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್ ತಗುಲಿದ ಪರಿಣಾಮ ಮದ್ದು ಸಿಂಪಡನೆ ಮಾಡುತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಅರಸಿನಮಕ್ಕಿ ಎಂಜಿರ ಎಂಬಲ್ಲಿ ನಡೆದಿದೆ.
ಮೃತರನ್ನು ಉಡೈರೆ ಕೃಷ್ಣಪ್ಪ ಕುಲಾಲ್ (49) ಎಂದು ಗುರುತಿಸಲಾಗಿದೆ.
ವಿದ್ಯುತ್ ಆಘಾತಕ್ಕೆ ಈಡಾದ ಕೃಷ್ಣಪ್ಪ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎನ್ನಲಾಗಿದೆ .