ಪಡುಬಿದ್ರೆ,ಅ.06 : ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ವೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ವೇ ಟ್ರಸ್ಟ್ ಪಡುಬಿದ್ರೆ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವಿವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರಿ ಸಂಸ್ಥೆಗಳು ಜನರ ಅಭಿವೃದ್ಧಿಗೆ ಸಹಕಾರಿಯಾಗಿವೆ.ಸಹಕಾರಿ ಸಂಸ್ಥೆಗಳು ಜನರಿಗೆ ಸರಳೀಕೃತವಾಗಿ ಸಾಲ ನೀಡುವ ವ್ಯವಸ್ಥೆಯಿರುವ ಸಂಸ್ಥೆಯಾಗಿದೆ ಎಂದರು.
ಎಮ್.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಅವರು ಸಿರಿಮುಡಿ ದತ್ತಿನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.
ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರು ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ ಉದ್ಘಾಟಿಸಿದರು. ಅವರು ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯ ನಿತರಿಸಿದರು.
ಭದ್ರತಾ ಕೊಠಡಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಸಿರಿಮುಡಿ ಉಳಿತಾಯ ಖಾತೆ ಪಾಸ್ ಪುಸ್ತಕವನ್ನು ಹೇರಂಭಾ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕನ್ಯಾನ ಸದಾಶಿವ ಶೆಟ್ಟಿ ವಿತರಿಸಿದರು. ನಿರಖು ಠೇವಣಿ ಪತ್ರವನ್ನು ವಿ.ಕೆ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಎಮ್.ಶೆಟ್ಟಿ ಬಿಡುಗಡೆಗೊಳಿಸಿದರು. ನಾನಾ ಸವಲತ್ತು ಗಳನ್ನು ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ವಿತರಿಸಿದರು.
ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಮತ್ತು ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರನ್ನು ಪಡುಬಿದ್ರೆ ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಂಟಾಶ್ರಯ ಯೋಜನೆಗೆ 5 ಲಕ್ಷ ರೂ.ದೇಣಿಗೆ ನೀಡಿದ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ತು ದಂಪತಿಯನ್ನು ಗೌರವಿಸಲಾಯಿತು. ನಾನಾ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಪಡುಬಿದ್ರೆ ಬಂಟರ ಸಂಘದ ವತಿಯಿಂದ 2026 ಜನವರಿ 18ರಂದು ಪಡುಬಿದ್ರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಂಟ ಕಲೋತ್ಸವ “ತುಳುವ ಐಸಿರಿ-2026ರ ಕರಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.ಅಶಕ್ತರಿಗೆ, ವಿಶಿಷ್ಟಚೇತನರಿಗೆ, ಅನಾರೋಗ್ಯ ಪೀಡಿತರಿಗೆ, ವಿಧವೆಯರಿಗೆ, ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು. ಸಿರಿಮುಡಿ ದತ್ತಿನಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿ ಒಟ್ಟು ರೂ.17 ಲಕ್ಷ ಸಹಾಯಧನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ವೈ.ಎನ್.ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಬಿ.ಶೆಟ್ಟಿ, ಯುವ ಬಂಟರ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಶ್ರೀನಾಥ್ ಹೆಗ್ಡೆ, ನಿರ್ದೇಶಕರಾದ ವೈಶಶಿಧರ್ ಶೆಟ್ಟಿ, ರವೀಂದ್ರನಾಥ ಜಿ.ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್ಚಂದ್ರ ಜೆ.ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ.ಶೆಟ್ಟಿ, ಶೋಭಾ ಜೆ.ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಸಂಘದ ಸಿರಿಮುಡಿ ದತ್ತಿನಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಜಯ ಶೆಟ್ಟಿ ಪದ್ರ ಮತ್ತು ವಿತಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ತು ವಂದಿಸಿದರು.