ಮಂಗಳೂರು, ಅ.08 : ಅಲ್ ನಜೀಂ ಉಸ್ ಸಕೀಬ್ ಪರ್ಫಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಫಮ್ ಬ್ರಾಂಡ್ ತುಝರ್ ಇದರ ಬಿಡುಗಡೆ ಕಾರ್ಯಕ್ರಮವು ಅ. 9, ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂದೂರ್ ವೆಲ್ ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ ನಲ್ಲಿ ನಡೆಯಲಿದೆ ಎಂದು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಎಂಡಿ ಅಬ್ದುಲ್ ಹಮೀದ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ಸ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಞ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ರಾಷ್ಟ್ರೀಯ ಆಯೋಗದ ಅಧ್ಯಕ್ಷ (ಆಲೈಡ್ ಮತ್ತು ಹೆಲ್ತ್ ಕೇರ್ ಪ್ರೊಫೆಷನ್ಸ್) ಡಾ. ಯು. ಟಿ. ಇಪ್ತಿಖಾರ್ ಫರೀದ್, ಅಲ್ ಮುಝನ್ ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಹಾಜಿ ಜಕರಿಯಾ ಜೋಕಟ್ಟೆ, ರೋಹನ್ ಕಾರ್ಪೊರೇಶನ್ ಅಧ್ಯಕ್ಷ ರೋಹನ್ ಆರ್. ಮೊಂತೆರೋ, ವೈದ್ಯಕೀಯ ತಜ್ಞ ಪ್ರೊ. ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಎಸ್ಎಂ ಆ ಗ್ರೂಪ್ ಅಧ್ಯಕ್ಷ ಎಸ್. ಎಂ. ರಶೀದ್ ಹಾಜಿ, ಉದ್ಯಮಿ ರಿಯಾಜ್ ಬಾವಾ, ಎ.ಕೆ. ಗ್ರೂಪ್ ಅಧ್ಯಕ್ಷ ಎ. ಕೆ. ನಿಯಾಝ್, ಬೆಂಡೋರ್ ಚರ್ಚ್ ಸಹಪಾದ್ರಿ ರೆವ್. ಡಾ. ಒಸ್ಮಂಡ್ ರೋಷನ್ ಡಿ’ಸೋಜಾ, ಪ್ಲಾಸ್ಟಿಕ್ ಲ್ಯಾಂಡ್ ಗ್ರೂಪ್ ಅಧ್ಯಕ್ಷ ಅಸ್ಕರ್ ಅಲಿ, ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮೊಹಮ್ಮದ್ ಕುಂಹಿ, ಕಣ್ಣೂರು ಮತ್ತು ಕಾಲಿಕಟ್ ವಿಶ್ವವಿದ್ಯಾಲಯಗಳ ಮಾಜಿ ಕುಲಪತಿ ಪ್ರೊ. ಡಾ. ಅಬ್ದುಲ್ ರಹೀಮಾನ್, ಮಂಗಳೂರು ಮಹಾನಗರಪಾಲಿಕೆಯ ಮಾಜಿ ಸದಸ್ಯ ಕಿಶೋರ್ ಕೊಟ್ಟಾರಿ, ಪಿ.ಸಿ. ಗ್ರೂಪ್ ಅಧ್ಯಕ್ಷ ಹಶೀರ್ ಪಿ.ಸಿ. ಹಾಗೂ ವರ್ಲ್ಡ್ ವೈಡ್ ಗ್ರೂಪ್ ಅಧ್ಯಕ್ಷ ಮೊಯಿದಿನ್, ಶ್ರೀ ಮಂಗಲಾದೇವಿ ದೇವಾಲಯದ ಅನುವಂಶಿಕ ಮೊಕ್ರೇಶ್ವರರು ಶ್ರೀ ಹರೀಶ್ ಇಥಲ್, ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಾಯೀಲ್ ರೈ, ಸಫಿಹ ಅಹ್ಮದ್, ಕೃತಿ ಶೆಟ್ಟಿ, ನಬಿಲ್ ಮೊಹಮ್ಮದ್, ಪೃಥ್ವಿ ಶೆಟ್ಟಿ, ಅರಾಫತ್ ಉಪಸ್ಥಿತರಿದ್ದರು.











