Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026

    ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ

    July 14, 2026

    ಮೈಸೂರು  : ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

    July 12, 2026

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026

    ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ

    July 14, 2026

    ಮೈಸೂರು  : ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

    July 12, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ
    Local News

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    adminBy adminOctober 14, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುಳ್ಯ , ಅ. 14 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸುಳ್ಯ ತಾಲೂಕಿನ ಗುತ್ತಿಗಾರು ಶಾಖೆ ಗುತ್ತಿಗಾರು ಮುಖ್ಯ ರಸ್ತೆಯ ರಾಘವೇಂದ್ರ ಕಾಂಪ್ಲೆಕ್ಸ್ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಶಾಖೆಯ ಉದ್ಘಾಟನೆ ಹಾಗೂ ಎಟಿಎಂ ಉದ್ಘಾಟನೆ ಸೋಮವಾರ ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಹೇಳಿದರು.

    ಎಸ್‌ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ರಿಬ್ಬನ್ ಕತ್ತರಿಸಿ ಶಾಖೆ ಉದ್ಘಾಟಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಠೇವಣಿಪತ್ರ ವಿತರಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಭದ್ರತಾ ಕೋಶ ಉದ್ಘಾಟಿಸಿದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಗ್ರಾಹಕರಿಗೆ ಲಾಕರ್ ಕೀ ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳ ಉದ್ಘಾಟಿಸಿದರು. ಅತಿಥಿಗಳು ವಾಹನ ಸಾಲಪತ್ರ ವಿತರಿಸಿದರು.

    ಕಾರ್ಯಕ್ರಮದಲ್ಲಿ ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ ಯು., ಕಟ್ಟಡ ಮಾಲಕ ಅನಿಲ್ ಕುಮಾರ್, ಶಾಖೆಯ ಉದ್ಘಾಟನಾ ಮೇಲ್ವಿಚಾರಣಾ ಜವಬ್ದಾರಿ ವಹಿಸಿದ್ದ ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬ್ಯಾಂಕಿನ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಬ್ಯಾಂಕ್ನ ವಲಯ ಮೇಲ್ವಿಚಾರಕರಾದ ಮನೋಜ್ ಎಮ್.ಸಿ., ಸುಬ್ರಹ್ಮಣ್ಯ ಭಟ್, ಆದರ್ಶ ಬಿ. ಅವರನ್ನು ಸಮ್ಮಾನಿಸಲಾಯಿತು. ರತನ್ ಕೆ.ಎಸ್., ಪ್ರದೀಪ್ ಕುಮಾರ್, ವಿನಯಕುಮಾರ್ ಪಿ., ನವೋದಯ ವಲಯದ ಶ್ರೀಧರ್ ಎಂ., ಹೇಮಂತ್, ದಾಮೋದರ್, ಗಂಗಾಧರ್, ಪ್ರಕಾಶ್, ಸವಿತಾ ಎಸ್.ಟಿ., ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಪ್ರಮುಖರಾದ ಭರತ್ ಮುಂಡೋಡಿ, ಕೇಶವ ಭಟ್ ಮುಳಿಯ, ಪಿ.ಸಿ.ಜಯರಾಮ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು.

    ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 16, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    Local News July 9, 2026

    ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ- 6 ಮಂದಿಗೆ ಗಾಯ

    Local News July 8, 2026

    ಬೋಳಂಗಡಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು

    Local News July 6, 2026

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News July 5, 2026

    ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

    Local News July 4, 2026

    ಕೂಳೂರು : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವು

    Comments are closed.

    Demo
    Don't Miss
    Local News July 16, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    ಬಂಟ್ವಾಳ, ಜು. 16 : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ…

    ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ

    July 14, 2026

    ಮೈಸೂರು  : ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

    July 12, 2026

    ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು

    July 11, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.