ಉಡುಪಿ, ಡಿ. 11 : ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆಯಲ್ಲಿನ ಗುಂಡಿಗೆ ಬಿದ್ದು, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಬುಧವಾರ ನಡೆದಿದೆ.
ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್(26) ಎಂದು ಗುರುತಿಸಲಾಗಿದೆ. ಈ ಟಿಪ್ಪರ್ ನಿಟ್ಟೂರಿನ ರಂಜನ್ ಶೆಟ್ಟಿ ಅವರಿಗೆ ಸೇರಿದ್ದಾಗಿದೆ.
ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಟಿಪ್ಪರ್ ಸಂಚರಿಸುತ್ತಿದ್ದಾಗ, ರಸ್ತೆಯ ತಿರುವಿನಲ್ಲಿ ಇದ್ದ ಗುಂಡಿಗೆ ಬಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆಯ ಬಲ ಬದಿಯ ದೊಡ್ಡ ಮರಕ್ಕೆ ಢಿಕ್ಕಿ ಹೊಡೆದು, ಶ್ರೀಕಾಂತ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











