ಬೆಳ್ತಂಗಡಿ, ಡಿ. 18 : ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎರಡನೇ ಬಾರಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.
ಮಹೇಶ್ ಶೆಟ್ಟಿಅವರನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಸಹಾಯಕ ಆಯುಕ್ತರು ಮರು ಪರಿಶೀಲನೆ ಮಾಡಿ ಇದೀಗ ಮತ್ತೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ಈ ಸಂದರ್ಭ ಮಹೇಶ್ ಶೆಟ್ಟಿಅವರು ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.











