Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
    Local News

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    adminBy adminSeptember 8, 2026
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಸೆ.08 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ, ಮಹಾಗಣಯಾಗವು ಸೆಪ್ಟೆಂಬರ್ 14ರಿಂದ 16ರವರೆಗೆ ಮಂಗಳೂರಿನ ಬಂಟ್ಸ್ ಹಾಸ್ಟೇಲ್ನ ಓಂಕಾರ ನಗರದಲ್ಲಿ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಸೆ.13ರಂದು ಸಂಜೆ 5.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲಿನ ಓಂಕಾರ ನಗರಕ್ಕೆ ಬರಮಾಡಿಕೊಳ್ಳುವುದು ಎಂದರು.

    ಸೆ.14ರಂದು ಬೆಳಿಗ್ಗೆ 8.00 ಗಂಟೆಗೆ ಮೂರ್ತಿ ಪ್ರತಿಷ್ಠೆ ,9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣೆ ಕಾರ್ಯಕ್ರಮ ನಡೆಯಲಿರುವುದು. ಸಂಜೆ 3.00ರಿಂದ ಪಾಂಚಜನ್ಯ ಪ್ರತಿಷ್ಠಾನ ಕುಡ್ಲ ಇದರ ಕಲಾವಿದರಿಂದ ‘ಶ್ರೀ ಮಂಗಳಪುರದ ಮಂಗಳಾಂಬಿಕೆ’ ಪೌರಾಣಿಕ ನೃತ್ಯ ನಾಟಕ ನಡೆಯಲಿರುವುದು. ಸಂಜೆ 5.00 ರಿಂದ 7.00 ರ ತನಕ ಧಾರ್ಮಿಕ ಸಭಾ ಕಾರ್ಯಕ್ರಮ, ಸನ್ಮಾನ ನಡೆಯಲಿರುವುದು.ರಾತ್ರಿ 7.30ರಿಂದ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 8.00ರಿಂದ ‘ಬಂಟಕಲಾ ಸಂಗಮ-2026’, ವಿವಿಧ ಬಂಟರ ಸಂಘಗಳಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಜರಗಲಿರುವುದು ಎಂದು ತಿಳಿಸಿದರು.

    ಸೆ. 15ರಂದು ಬೆಳಿಗ್ಗೆ 11.30ರಿಂದ ಮೂಡಪ್ಪ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಯಾಗದ ಯಾಗ ಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಶುದ್ಧಿ, ವಾಸ್ತು ರಾಕ್ಷೋಘ್ನ ಹವನ, ಮಹಾಪೀಠದಲ್ಲಿ ಕಲಶ ಸ್ಥಾಪನೆ, ಮಹಾಗಣಯಾಗದ ಸೇವಾರ್ಥಿಗಳಿಂದ ಸಂಕಲ್ಪ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.ಸಂಜೆ 5.00ರಿಂದ 7.00ರವರೆಗೆ ಧಾರ್ಮಿಕ ಸಭೆ. ಸನ್ಮಾನ ಕಾರ್ಯಕ್ರಮ, ರಾತ್ರಿ 7.30ರಿಂದ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯುವುದು. 8.00ರಿಂದ ಸ್ವರಲಯ ಸಿಂಪೋನಿ ಕಲಾಶಾಲೆಯ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು.

    ಸೆ. 16ರಂದು ಬೆಳಿಗ್ಗೆ 8.30ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭಗೊಂಡು 11.00 ಗಂಟೆಗೆ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿರುವುದು.ಸಂಜೆ 3.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂರ್ವ ಪೂಜೆ ನಡೆದು ಗಣ್ಯರ ಉಪಸ್ಥಿತಿಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು. ಶೋಭಾಯಾತ್ರೆಯು ಓಂಕಾರನಗರದಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳ ಸೇವೆಯೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿ.ವಿ.ಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದು ತಿಳಿಸಿದರು..

    ಪತ್ರಿಕಾ ಗೋಷ್ಠಿಯಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಹಾಗೂ ರಾಮ್ ಮೋಹನ್ ರೈ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Local News September 5, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Comments are closed.

    Demo
    Don't Miss
    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಮಂಗಳೂರು, ಸೆ.08 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ…

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.