Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.18ರಂದು ‘ಅಮರ್ಥ’ ಕನ್ನಡ ಚಿತ್ರ ಬಿಡುಗಡೆ

    September 16, 2026

    ಬಂಟ್ಸ್ ಹಾಸ್ಟೆಲ್ : ಗಣೇಶೋತ್ಸವ ಉದ್ಘಾಟನೆ

    September 15, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    September 14, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.18ರಂದು ‘ಅಮರ್ಥ’ ಕನ್ನಡ ಚಿತ್ರ ಬಿಡುಗಡೆ

    September 16, 2026

    ಬಂಟ್ಸ್ ಹಾಸ್ಟೆಲ್ : ಗಣೇಶೋತ್ಸವ ಉದ್ಘಾಟನೆ

    September 15, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    September 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ನಗರ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ – ವೇದವ್ಯಾಸ್ ಕಾಮತ್
    Local News

    ಮಂಗಳೂರು: ನಗರ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ – ವೇದವ್ಯಾಸ್ ಕಾಮತ್

    adminBy adminApril 28, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಏ.28: ನಗರದ ಅಟಲ್ ಸೇವಾ ಕೇಂದ್ರದಲ್ಲಿ ಏ.24 ಸೋಮವಾರ ವೇದವ್ಯಾಸ ಕಾಮತ್ ಅವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿಯ ಕಾರ್ಯಗಳ “ಅಭಿವೃದ್ಧಿ ಪಥ” ಪುಸ್ತಕ ವನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿ, ಶಾಸಕನಾಗಿ ಕಳೆದ ಐದು ವರ್ಷಗಳ ಅವಧಿಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದೇನೆ. 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣಗೊಂಡಿದೆ ಎಂದರು.
    ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದೆ. ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಕಾರ್ಯಯೋಜನೆಗೊಂಡು 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ದಕ್ಷಿಣ ವಿಧಾನಸಭಾ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
    ಈ ಐದು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 792 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ನೀರಿನ ಪೈಪ್ ಗಳಲ್ಲಿ ಲೋಪ ಕಂಡು ಬಂದಲ್ಲಿ ಅದನ್ನು ತಕ್ಷಣ ಪರಿಹರಿಸಲು ಪಾಲಿಕೆಯಲ್ಲಿ ಕಂಪ್ಯೂಟರಿಕೃತ ವ್ಯವಸ್ಥೆಯ ಮೂಲಕ ಕ್ರಮ ಕೈಗೊಳ್ಳುವ ವಿಶೇಷ ವ್ಯವಸ್ಥೆ ಮಾಡಲಾಗುವುದು. 300 ಕೋಟಿ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.


    250 ಆಕ್ಸಿಜನ್ ಬೆಡ್, 50 ಕೋಟಿ ವೆಚ್ಚದಲ್ಲಿ ಸರ್ಜಿಕಲ್ ಬ್ಲಾಕ್, ಆಕ್ಸಿಜನ್ ಪ್ಲಾಂಟ್, 30 ಕೋಟಿ ರೂ ವೆಚ್ಚದಲ್ಲಿ ಲೇಡಿಗೋಶನ್ ಆಸ್ಪತ್ರೆ ನವೀಕರಣ,ತಾಯಿ-ಮಗು ವಿಶೇಷ ಚಿಕಿತ್ಸಾ ಕ್ರಮದ ಅಭಿವೃದ್ಧಿ, ನಾಲ್ಕು ನಮ್ಮ ಕ್ಲಿನಿಕ್ ಕೂಡ ವ್ಯವಸ್ಥೆಗೊಳಿಸಲಾಗಿದೆ.
    ಕ್ರೀಡಾಳುಗಳಿಗೆ ಮಂಗಳಾ ಕ್ರೀಡಾಂಗಣದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯ ಮತ್ತು ಉನ್ನತೀಕರಣ, ಬಂದರು ಮತ್ತು ಮೀನುಗಾರಿಕಾ ಅಭಿವೃದ್ಧಿಗಾಗಿ 65 ಕೋಟಿ ರೂ ವೆಚ್ಚದಲ್ಲಿ ಬೆಂಗ್ರೆಯಲ್ಲಿ ಜೆಟ್ಟಿ ನಿರ್ಮಾಣ ನಡೆಯಲಿದ್ದು, ಅನೇಕ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

    ಪ್ರವಾಸೋದ್ಯಮ ಬೆಳವಣಿಗಾಗಿ ನೇತ್ರಾವತಿ ನದಿ ತೀರದಿಂದ ಸುಲ್ತಾನ್ ಭತ್ತೇರಿ ತನಕ ರಿವರ್ ಫಂಟ್ ಯೋಜನೆ ಕೂಡ ಜಾರಿಗೆ ಬರಲಿದೆ.ತುಳುನಾಡಿನ ಸಂಸ್ಕೃತಿ, ಆಚಾರಗಳನ್ನು ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಹುಲಿವೇಷದೊಂದಿಗೆ ಕುಣಿತ, ಪ್ರವಾಸೋದ್ಯಮ ಬೆಳವಣಿಗೆ ಬೀದಿಆಹಾರ ಉತ್ಸವ ಕೂಡ ಮಾಡಿದ್ದು ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಚುನಾವಣಾ ಉಸ್ತುವಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ,ಪ್ರಮುಖರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಾಜಿ ಮೇಯರ್ ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ,  ರೂಪಾ ಡಿ ಬಂಗೇರ, ಸುರೇಂದ್ರ ಜೆ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 16, 2026

    ಸೆ.18ರಂದು ‘ಅಮರ್ಥ’ ಕನ್ನಡ ಚಿತ್ರ ಬಿಡುಗಡೆ

    Local News September 15, 2026

    ಬಂಟ್ಸ್ ಹಾಸ್ಟೆಲ್ : ಗಣೇಶೋತ್ಸವ ಉದ್ಘಾಟನೆ

    Local News September 14, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    Local News September 13, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    Local News September 12, 2026

    ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Comments are closed.

    Demo
    Don't Miss
    Local News September 16, 2026

    ಸೆ.18ರಂದು ‘ಅಮರ್ಥ’ ಕನ್ನಡ ಚಿತ್ರ ಬಿಡುಗಡೆ

    ಮಂಗಳೂರು, ಸೆ.16 : ಪಂಚರಂಗಿ ಬ್ಯಾನರ್ ಅಡಿಯಲ್ಲಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ಅವರ ನಿರ್ಮಾಣದ…

    ಬಂಟ್ಸ್ ಹಾಸ್ಟೆಲ್ : ಗಣೇಶೋತ್ಸವ ಉದ್ಘಾಟನೆ

    September 15, 2026

    ಬಂಟ್ಸ್ ಹಾಸ್ಟೇಲ್ : ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

    September 14, 2026

    ಸೆಪ್ಟೆಂಬರ್ 18 ರಂದು “ಟಾಸ್” ತುಳು ಚಿತ್ರ ತೆರೆಗೆ

    September 13, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.