Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ
    Local News

    ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ

    adminBy adminMay 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 06 : ಉತ್ತರ ಕ್ಷೇತ್ರದಲ್ಲಿ ಹಿಂದೂ ಭವನ ಸ್ಥಾಪನೆ ಮಾಡಿ ಅಲ್ಲಿ ಬಡವರ ಮದುವೆಗೆ ಕಡಿಮೆ ವೆಚ್ಚದಲ್ಲಿ ಸಭಾಂಗಣ ಒದಗಿಸುವುದು, ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಐಟಿ ಹಬ್ ನಿರ್ಮಾಣ, ಆಯುಷ್ ವನ ನಿರ್ಮಾಣ, ಅಲೆಮಾರಿ ಗೋವುಗಳಿಗೆ ಗೋಶಾಲೆ, ಕಡಲಕಿನಾರೆಯಲ್ಲಿ ಜಲಕ್ರೀಡೆ, ಆಹಾರ ಮಳಿಗೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಒತ್ತು ಸಹಿತ ದೂರದೃಷ್ಟಿ, ಅಭಿವೃದ್ಧಿ, ರಾಷ್ಟ್ರೀಯತೆಗೆ ಆದ್ಯತೆ ನೀಡಿ ಮುಂದಿನ ಅವಧಿಗೆ ಕ್ಷೇತ್ರದಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನು ಒಳಗೊಂಡ 30 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಅಭ್ಯರ್ಥಿ,  ಡಾ. ಭರತ್ ಶೆಟ್ಟಿ ವೈ ಬಿಡುಗಡೆಗೊಳಿಸಿದರು.

    ಡಾ. ಭರತ್ ಶೆಟ್ಟಿ ಅವರು ಕಾವೂರು ಸೊಸೈಟಿ ಸಭಾಂಗಣದಲ್ಲಿರುವ ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ಉನ್ನತೀಕರಣ, ಆಡಳಿತ/ ಐಐಟಿ, ಐಐಎಂ ವ್ಯಾಸಂಗ ಮಾಡುವವರಿಗೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು, ಗ್ರಾಮೀಣ ಭಾಗದಲ್ಲಿ ಕ್ಯಾಂಪ್ಕೊ ಮಾದರಿಯಲ್ಲಿ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಹಕಾರಿ ಸಂಸ್ಥೆಗಳ ಸ್ಥಾಪನೆ, ಸರಕಾರಿ ಕಚೇರಿಗಳಲ್ಲಿ ಸರಕಾರದ ಸೌಲಭ್ಯ ಪಡೆಯಲು ಸರಳೀಕರಣ ವ್ಯವಸ್ಥೆ, ಸ್ತ್ರೀಶಕ್ತಿ ಮಾದರಿಯಲ್ಲಿ ಯುವಕರಿಗಾಗಿ ಯುವಶಕ್ತಿ ಗುಂಪುಗಳ ರಚನೆ, ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಕ್ರಮ, ಇನ್ನಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ತಂಗಲು ಮಂಗಳೂರು ಉತ್ತರದಲ್ಲಿ ವಿಶ್ರಾಂತಿ ಶಿಬಿರ ಹೀಗೆ ಹಲವು ಯೋಜನೆಗಳನ್ನು ಅನುಷ್ಟಾನಕ್ಕೆ ತರಲಾಗುವುದು ಎಂದರು.

    ಕಳೆದ ಅವಧಿಯಲ್ಲಿ ಕೋರೊನಾದ ಎರಡು ವರ್ಷಗಳನ್ನು ಮತ್ತು ಒಂದು ವರ್ಷ ವಿಪಕ್ಷದಲ್ಲಿದ್ದರೂ ಉಳಿದ 2 ವರ್ಷಗಳಲ್ಲಿ 2,250 ಕೋಟಿ ರೂಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ನಡೆಸಲಾಗಿದೆ. ಕ್ಷೇತ್ರದ ಹೆಚ್ಚಿನ ಪ್ರಮುಖ ರಸ್ತೆಗಳು, ಒಳರಸ್ತೆಗಳು ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಯಾಗಿವೆ. ಪ್ರಮುಖ ಜಂಕ್ಷನ್ ಗಳು, ಕೆರೆ, ಉದ್ಯಾನವನ, ವೃತ್ತ, ರಾಜಕಾಲುವೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಹೆಚ್ಚಿನವು ಪೂರ್ಣಗೊಂಡಿವೆ. ಹಲವು ಪ್ರಗತಿಯಲ್ಲಿವೆ. ದೇವಾಲಯ, ದೈವಸ್ಥಾನಗಳಿಗೆ ಅನುದಾನ ನೀಡಿ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಬೀಚ್ ಅಭಿವೃದ್ಧಿ, ಬ್ಲೂಫ್ಲಾಗ್ ಹೆಗ್ಗಳಿಕೆ, ಕಾಲೇಜಿಗೆ ನ್ಯಾಕ್ ಸ್ಥಾನಮಾನ, ಹಾಸ್ಟೆಲ್ ಗಳ ಅಭಿವೃದ್ಧಿ, ಶಾಲೆಗಳಿಗೆ ಹೊಸ ಕೊಠಡಿ, ಪಿಠೋಪಕರಣಗಳ ಪೂರೈಕೆ ಸಹಿತ ವಿವಿಧ ಯೋಜನೆಗಳು ಆಗಿವೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ವೇಗದಲ್ಲಿ ಕೆಲಸಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಶರತ್ಚಂದ್ರ ಶೆಟ್ಟಿ, ರಾಜೇಶ್ ಕೊಠಾರಿ,ಕೃಷ್ಣ ಶೆಟ್ಟಿ ಕಡಬ ಹಾಗೂ ಬಿಜೆಪಿ ಮುಖಂಡರಉಪಸ್ಥಿತರಿದ್ದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    Local News February 1, 2026

    ಫೆ.1- 6 : ಉಳ್ಳಾಲ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

    Local News January 29, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    Local News January 28, 2026

    ಮೂಡುಬಿದಿರೆ : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

    Comments are closed.

    Demo
    Don't Miss
    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    ಮಂಗಳೂರು, ಫೆ. 06 : ಮಂಗಳೂರು ಧರ್ಮಕ್ಷೇತ್ರದಲ್ಲಿ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ (SSVP) ಸ್ಥಾಪನಾ ಶತಮಾನೋತ್ಸವ ಸಮಾರೋಪ…

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    February 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.