ಮಂಗಳೂರು, ಜು. 20 : ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬುಧವಾರ ಮಂಗಳೂರಿನಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ.
ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು,ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.