ಮಂಗಳೂರು, ಜು. 21: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತಪಟ್ಟಿರುವ ಮಗು ಎಂದು ಹೇಳಲಾಗಿದೆ. ಬುಧವಾರ ಸಂಜೆ ಮಗು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.