ಸುಳ್ಯ ಜು.23: ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿಯ ಸುತ್ತುಕೋಟೆ ಬಳಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು(65) ಮೃತಪಟ್ಟವರು.
ರಾಮಚಂದ್ರ ಪ್ರಭು ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯೆ ಸುತ್ತುಕೋಟೆ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ರಾಮಚಂದ್ರರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.