Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನೈರೋಬಿ :ಕೀನ್ಯಾದ ಕ್ವಾಲೆಯಲ್ಲಿ ವಿಮಾನ ಪತನ; ಎಲ್ಲಾ 12 ಪ್ರವಾಸಿಗರು ಮೃತಪಟ್ಟಿರುವ ಶಂಕೆ

    October 28, 2025

    ಮಂಗಳೂರು: ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಉದ್ಘಾಟಿನೆ

    October 27, 2025

    ಪುತ್ತೂರು : ದ್ವೇಷ ಭಾಷಣ ಆರೋಪ ;ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

    October 26, 2025

    Subscribe to Updates

    Get the latest creative news from FooBar about art, design and business.

    What's Hot

    ನೈರೋಬಿ :ಕೀನ್ಯಾದ ಕ್ವಾಲೆಯಲ್ಲಿ ವಿಮಾನ ಪತನ; ಎಲ್ಲಾ 12 ಪ್ರವಾಸಿಗರು ಮೃತಪಟ್ಟಿರುವ ಶಂಕೆ

    October 28, 2025

    ಮಂಗಳೂರು: ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಉದ್ಘಾಟಿನೆ

    October 27, 2025

    ಪುತ್ತೂರು : ದ್ವೇಷ ಭಾಷಣ ಆರೋಪ ;ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

    October 26, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ
    Local News

    ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ

    adminBy adminJuly 30, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜು.30 : ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿದ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ.
    ಅವರು ಮಾತನಾಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು.

    ಭಾರತೀಯ ವಾಯು ಸೇನೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ಲಭಿಸಿದ್ದು, ಅದರ ಅನುಭವ ವಿಭಿನ್ನ . ಪದವಿ ಮುಗಿದು ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಾಯು ಸೇನೆಗೆ ಆಯ್ಕೆಯಾಗಿದ್ದೆ ಎಂದರು.

    ವಾಯು ಸೇನೆಯ ತರಬೇತಿಯ ನಂತರ ಗೌಹಾಟಿಯಲ್ಲಿ ವೃತ್ತಿ ಜೀವನ ಆರಂಭಗೊಂಡಿತು. ವಿವಿಧ ಕರ್ತವ್ಯಗಳನ್ನು ನಿರ್ವಹಿಸಿ ಹಂತಹಂತವಾಗಿ ಭಡ್ತಿ ಪಡೆದು ಗ್ರೂಪ್ ಕ್ಯಾಪ್ಟನ್ ಆಗಿ ನಿವೃತ್ತಿಯಾದೆ. ವಿಶ್ವದ ಅತಿ ದೊಡ್ಡ ಹೆಲಿಕಾಪ್ಟರ್‌ನಲ್ಲಿ ಕೆಲಸ ಮಾಡುವ ಅವಕಾಶ ದೊರಕಿತ್ತು. ಈ ಹೆಲಿಕಾಪ್ಟರ್‌ನಲ್ಲಿ ಬುಲ್ಡೋಜರ್ ಕೊಂಡೊಯ್ದು ಈಶಾನ್ಯ ಭಾರತದ ಕೆಲವು ದುರ್ಗಮ ಪ್ರದೇಶಗಳಲ್ಲಿ ರಸ್ತೆ ಮಾಡಲು ಸಾಧ್ಯವಾಯಿತು. ಅಸ್ಸಾಂ, ಅರುಣಾಚಲ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಜನರನ್ನು ರಕ್ಷಣೆ ಮಾಡಿದ್ದೆವು. ಈ ಸಂದರ್ಭ ಸಂತ್ರಸ್ತರಿಂದ ಸಿಗುತ್ತಿದ್ದ ಪ್ರಶಂಸೆ ವೃತ್ತಿ ಜೀವನನದ ಮರೆಯಲಾಗದ ಕ್ಷಣಗಳು ಎಂದು ಅವರು ವಿವರಿಸಿದರು.

    ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ರಾಮಕೃಷ್ಣ ಆರ್. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

    ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕೋಶಾಧಿಕಾತಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 27, 2025

    ಮಂಗಳೂರು: ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಉದ್ಘಾಟಿನೆ

    Local News October 26, 2025

    ಪುತ್ತೂರು : ದ್ವೇಷ ಭಾಷಣ ಆರೋಪ ;ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

    Local News October 25, 2025

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿ- ಕಾರಿನಲ್ಲಿದ್ದ ಯುವಕ ಮೃತ್ಯು

    Local News October 24, 2025

    ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ

    Local News October 23, 2025

    ಬ್ರಹ್ಮಾವರ : ಬೈಕ್‌ಗೆ ಡಿಕ್ಕಿ ಹೊಡೆದು ಚಿರತೆ ಸಾವು – ಸವಾರನಿಗೆ ಗಂಭೀರ ಗಾಯ

    Local News October 22, 2025

    ಮಂಗಳೂರಿನ ಎಮ್.ಸಿ.ಸಿ. ಬ್ಯಾಂಕಿನಲ್ಲಿ ದೀಪಾವಳಿ ಆಚರಣೆ

    Comments are closed.

    Demo
    Don't Miss
    National or International news October 28, 2025

    ನೈರೋಬಿ :ಕೀನ್ಯಾದ ಕ್ವಾಲೆಯಲ್ಲಿ ವಿಮಾನ ಪತನ; ಎಲ್ಲಾ 12 ಪ್ರವಾಸಿಗರು ಮೃತಪಟ್ಟಿರುವ ಶಂಕೆ

    ನೈರೋಬಿ, ಅ. 28 : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ 12 ಮಂದಿ…

    ಮಂಗಳೂರು: ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಉದ್ಘಾಟಿನೆ

    October 27, 2025

    ಪುತ್ತೂರು : ದ್ವೇಷ ಭಾಷಣ ಆರೋಪ ;ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

    October 26, 2025

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿ- ಕಾರಿನಲ್ಲಿದ್ದ ಯುವಕ ಮೃತ್ಯು

    October 25, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.