Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    July 18, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026

    Subscribe to Updates

    Get the latest creative news from FooBar about art, design and business.

    What's Hot

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    July 18, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಒಡಿಯೂರು : ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವ
    Local News

    ಒಡಿಯೂರು : ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವ

    adminBy adminAugust 9, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ವಿಟ್ಲ ಆ. 9 : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ  ಸಮಿತಿ ವತಿಯಿಂದ ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವ ಕಾರ್ಯಕ್ರಮವು ಗುರುವಾರ ಜರಗಿತು.

    ಈ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗಳು ಆಶೀರ್ವಚನ ನೀಡಿ, ಆಧ್ಯಾತ್ಮದ ಜತೆ ಲೋಕಹಿತದ ಕಾರ್ಯ ಮಾಡಿದಾಗ ಆನಂದ ಲಭ್ಯವಾಗುತ್ತದೆ. ಗುರುಸೇವೆಯೆಂದರೆ ತತ್ವದ ಆರಾಧನೆ. ಜನ, ಧನ ಶಾಶ್ವತವಲ್ಲ. ಜನಸೇವೆ, ಸಮಾಜಸೇವೆ ಮೂಲಕ ಜೀವನ ಸಾರ್ಥಕಗೊಳಿಸಬೇಕು ಎಂದು ಸ್ವಾಮೀಜಿ ನುಡಿದರು.

    ಮಾಣಿಲ ಶ್ರೀಧಾಮ – ಶ್ರೀ ದುರ್ಗಾ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಒಡಿಯೂರು ಶ್ರೀಗಳ ಗ್ರಾಮವಿಕಾಸ ಆದರ್ಶವಾಗಿದೆ. ಸಮಾಜಕ್ಕೆ ಉಪಯುಕ್ತವಾಗಿದೆ. ಯೋಜನೆಯಿಂದ ಅನೇಕ ಬಡ ದೀನ ದಲಿತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.

    ಶ್ರೀ ಗುರುದೇವದತ್ತ ಸಂಸ್ಥಾನಮ್ ಇಲ್ಲಿನ ಸಾಧ್ವೀ ಶ್ರೀ ಮಾತಾನಂದಮಯೀ ಅವರು ಆಶೀರ್ವಚನ ನೀಡಿ, ಒಡಿಯೂರು ಶ್ರೀಗಳವರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಸಹಕಾರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಶಾಲೆಗಳನ್ನು ತೆರೆದು ಸಂಸ್ಕಾರ, ಸಂಸ್ಕೃತಿಗಳ ಮೂಲಕ ನೈತಿಕ ಶಿಕ್ಷಣ ನೀಡುತ್ತಿದ್ದಾರೆ. ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಶ್ರೀ ಮಾತಾನಂದಮಯೀ ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗಳು ನಿಡುವಡೆ ಮಹಾಬಲೇಶ್ವರ ಭಟ್ (ಪಾಮರ) ಸಂಕಲನದ ‘ಶ್ರೀಮದ್ಭಗವದ್ಗೀತಾ ತ್ರಿಭಾಷಾ’ ಶಬ್ದಾರ್ಥ ಕೋಶ ಕೃತಿಯನ್ನು ಬಿಡುಗಡೆಗೊಳಿಸಿದರು. ಅರ್ಹ ಫಲಾನುಭವಿಗಳಿಗೆ ಸಹಾಯಹಸ್ತ ವಿತರಿಸಲಾಯಿತು. ಜನ್ಮದಿನೋತ್ಸವ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾರತ ಸರಕಾರದ ಎನ್.ಐ.ಎ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕಡಂದಲೆ ಪರಾರಿ ಪ್ರಕಾಶ್ ಎಲ್. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ನಿವೃತ್ತ ಜಮಾ ಉಗ್ರಾಣ ಮುತ್ತದ್ದಿ ಭುಜಬಲಿ ಧರ್ಮಸ್ಥಳ, ಯು.ಎ.ಇ. ಮತ್ತು ಒಮನ್‌ನಲ್ಲಿನ ಆಕ್ಟ್ ಬಿಲ್ಡಿಂಗ್ ಮೆಟೀರಿಯಲ್ಸ್ ಟ್ರೇಡಿಂಗ್ ಕಂಪೆನಿ ಎಂ.ಡಿ. ಹರೀಶ್ ಶೇರಿಗಾರ್, ದುಬ್ಬಾ ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಗುರುಗಳು ಆಡಳಿತ ನಿರ್ದೇಶಕ ಪ್ರವೀಣ್ ಶೆಟ್ಟಿ ವಕ್ವಾಡಿ, ಮುಂಬಯಿ ಹೈಟೆಕ್ ಎಲೆಕ್ಟಿಫಿಕೇಶನ್ ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ರವಿನಾಥ್ ಶೆಟ್ಟಿ, ಅಂಕ್ಲೇಶ್ವರ, ಒಡಿಯೂರಿನ ಮಹಾರಾಷ್ಟ್ರ ಸಮಿತಿ ಅಧ್ಯಕ್ಷ ವಾದಯ್ಯ ಬಿ.ಶೆಟ್ಟಿ, ಮುಂಬಯಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ, ಜನ್ಮದಿನೋತ್ಸವ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷ ಎ.ಸುರೇಶ್ ರೈ, ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಕಾರ್ಯಾಧ್ಯಕ್ಷ ಚನೆಯಡ್ಕ ಲಿಂಗಪ್ಪ ಗೌಡ ಉಪಸ್ಥಿತರಿದ್ದರು.

    ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪೇಟೆಮನೆ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ  ಕಾರ್ಯಕ್ರಮವನ್ನು ನಿರೂಪಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಗ್ರಾಮವಿಕಾಸ ಯೋಜನೆಯ ವರದಿ ಮಂಡಿಸಿದರು. ಬೆಳಗ್ಗೆ ಶ್ರೀ ಗಣಪತಿ ಹವನ, ಮಹಾಪೂಜೆ, ರವಿರಾಜ್ ಶೆಟ್ಟಿ ಮತ್ತು ಬಳಗದವರಿಂದ ನಾಮಸಂಕೀರ್ತನೆ, ಶ್ರೀಗಳಿಗೆ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ ನಡೆಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 18, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    Local News July 16, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    Local News July 9, 2026

    ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ- 6 ಮಂದಿಗೆ ಗಾಯ

    Local News July 8, 2026

    ಬೋಳಂಗಡಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು

    Uncategorized July 7, 2026

    ಬಜಪೆ ವಲಯದ ಬಂಟರ ಸಂಘದಿಂದ ತಾರಿಕಂಬ್ಳದ ಮುಂಡಾರಿನಲ್ಲಿ ಬಂಟರ ಭವನಕ್ಕೆ ಶಿಲಾನ್ಯಾಸ

    Comments are closed.

    Demo
    Don't Miss
    Local News July 18, 2026

    ಜು.19 : ಅಂಬುರುಹ ಯಕ್ಷ ಕಲಾ ಕೇಂದ್ರ ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ

    ಮಂಗಳೂರು, ಜು. 18 : ಅಂಬುರುಹ ಯಕ್ಷ ಕಲಾ ಕೇಂದ್ರ, ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ ಕಾರ್ಯಕ್ರಮವು…

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    July 17, 2026

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಮೃತ್ಯು

    July 16, 2026

    ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ

    July 14, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.