Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    June 1, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    June 1, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಉದ್ಘಾಟನೆ
    Local News

    ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಉದ್ಘಾಟನೆ

    adminBy adminSeptember 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪಡುಬಿದ್ರಿ,ಸೆ.11 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿಕ ಶಾಖೆಯು ಸೋಮವಾರ ಉದ್ಘಾಟನೆಗೊಂಡಿತು.

    ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎಸ್.ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು.

    ನಂತರ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಸಹಕಾರಿ ಸಂಸ್ಥೆಗಳು ಜನರೊಂದಿಗೆ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಅವರು ಹೇಳಿದರು.

    ಪಡುಬಿದ್ರಿ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಸೈಟಿಯು ರೈತರ ನೆರವಿಗಾಗಿ ರಸಗೊಬ್ಬರ ಖರೀದಿಗೆ ಶೇ.15 ರಿಯಾಯಿತಿ ನೀಡುವ ಮೂಲಕ ಪ್ರಥಮ ಸ್ಥಾನಿಯಾಗಿದೆ. ಪಡುಬಿದ್ರಿ ಸೊಸೈಟಿಯ ಎಲ್ಲ 5 ಶಾಖೆಗಳು ಹವಾನಿಯಂತ್ರಿಕ ವ್ಯವಸ್ಥೆ ಹೊಂದಿವೆ ಎಂದರು.

    ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಸ್ಥೆಯ ಬಗ್ಗೆ ಹೆಮ್ಮೆಯಾಗುತ್ತದೆ. ಭಾರತದ ಬಲಿಷ್ಠ ಹಣಕಾಸು ಸಂಸ್ಥೆಯಾಗಿ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

    ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪಲಿಮಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಡುಪ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಕಾರ್ಯಕ್ರಮದಲ್ಲಿ ಮಾತನಾಡಿದರು.

    ಈ ಸಂದರ್ಭದಲ್ಲಿ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಗುತ್ತಿನಾ ಶೇಖರ ಶೆಟ್ಟಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕ ಶರಣ್ ಕುಮಾರ್ ಮಟ್ಟು, ಕಟ್ಟಡದ ಗುತ್ತಿಗೆದಾರರರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ತಾ.ಪಂ. ಮಾಜಿ ಸದಸ್ಯರಾದ ಲಕ್ಷ್ಮಣ್ ಶೆಟ್ಟಿ, ದಿನೇಶ್ ಕೋಟ್ಯಾನ್, ಡಾ.ಪ್ರಭಾ ನಂಬಿಯಾರ್, ಹಾಜಿ ಎಂ.ಪಿ.ಶೇಖಬ್ಬ ಪಲಿಮಾರು, ಉದ್ಯಮಿ ದಿನೇಶ್ ಪ್ರಭು, ನಿರ್ದೇಶಕರಾದ ಶಿವರಾಮ ಶೆಟ್ಟಿ, ಮಾಧವ ಆಚಾರ್ಯ, ರಾಜಾರಾಮ್ ರಾವ್, ವೈ.ಜಿ. ರಸೂಲ್, ಸ್ಪ್ಯಾನಿ ಕ್ವಾಡ್ರಸ್, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ಯಶವಂತ ಪಿ.ಬಿ, ಸುಚರಿತಾ ಎಲ್. ಅಮೀನ್, ಕುಸುಮಾ ಎಂ. ಕರ್ಕೇರ, ಕಾಂಚನಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಸಿಇಒ ನಿಶ್ಮಿತಾ ಪಿ.ಎಚ್, ಶಾಖಾ ಪ್ರಬಂಧಕಿ ಶೋಭಾ ಪುತ್ರನ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 1, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    Local News May 31, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    Local News May 30, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    Local News May 28, 2026

    ಮಂಗಳೂರು : ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

    Local News May 27, 2026

    ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Comments are closed.

    Demo
    Don't Miss
    Local News June 1, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    ಮಂಗಳೂರು, ಜೂ. 01 : ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ ಬಹುತೇಕ ಸ್ಥಗಿತಗೊಳ್ಳಲಿವೆ. ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ.…

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    May 31, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    May 30, 2026

    ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

    May 29, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.