Subscribe to Updates
Get the latest creative news from FooBar about art, design and business.
Author: admin
ಕಾಸರಗೋಡು, ಜು. 11 : ಕೆಎಸ್ಇಬಿ ಲೈನ್ಮ್ಯಾನ್ ಯೊಬ್ಬರು ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ನೀಲೇಶ್ವರ ಮಡಿಕೈನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಮಡಿಕೈ ಕಣಿಚ್ಚಿರಾ ಸೇತುವೆಯ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.ಕಣಿಚ್ಚಿರಾ ಪ್ರದೇಶದಲ್ಲಿ ವಿದ್ಯುತ್ ತಂತಿಯಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಲು ಭರತನ್ ಅವರು ವಿದ್ಯುತ್ ಕಂಬ ಹತ್ತಿದ್ದಾಗ ಅನಿರೀಕ್ಷಿತವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರು ಸೊಂಟಕ್ಕೆ ಸುರಕ್ಷತಾ ಬೆಲ್ಟ್ ಧರಿಸಿದ್ದರಿಂದ, ಶಾಕ್ ತಗುಲಿದ ಬಳಿಕ ಅವರ ಮೃತದೇಹ ಕಂಬದಲ್ಲೇ ಸಿಲುಕಿಕೊಂಡಿತ್ತು. ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಕೆಳಗಿಳಿಸಿದ್ದಾರೆ.
ಚಿಕ್ಕಬಳ್ಳಾಪುರ, ಜು. 10 : ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ನಡೆದಿದೆ. ಬೆಂಕಿಯು ಸಮೀಪದಲ್ಲಿದ್ದ ಮತ್ತೊಂದು ಹಾಲಿನ ಟ್ಯಾಂಕರ್ ಗೂ ವ್ಯಾಪಿಸಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ಇದೇ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್ ಗೂ ಬೆಂಕಿ ವ್ಯಾಪಿಸಿದ್ದು, ಎರಡೂ ವಾಹನಗಳು ಹೊತ್ತಿ ಉರಿದಿವೆ. ಎರಡೂ ಲಾರಿಗಳ ಚಾಲಕರು ವಾಹನಗಳಿಂದ ಹೊರಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ,ಜು. 09 : ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದವರಾದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55), ಯಾದಗಿರಿ ಜಿಲ್ಲೆಯ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ. ಅಪಘಾತದ ನಡೆದ ಸ್ಟಳದಲ್ಲಿ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ, ಜು. 08 : ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ. ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಅಶೋಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೈಕ್ ಸವಾರ ಒನ್-ವೇ ನಿಯಮವನ್ನು ಉಲ್ಲಂಘಿಸಿ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಜಪೆ ಜು. 07 : ಬಜಪೆ ವಲಯದ ಬಂಟರ ಸಂಘದಿಂದ ತಾರಿಕಂಬ್ಳದ ಮುಂಡಾರಿನಲ್ಲಿ ಬಂಟರ ಭವನಕ್ಕೆ ಶಿಲಾನ್ಯಾಸ ,ಸಾಧಕರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ನಡೆಯಿತು. 10 ಕೋ.ರೂ. ವೆಚ್ಚದಲ್ಲಿ ಬಜಪೆ ತಾರಿಕಂಬ್ಳದ ಮುಂಡಾರಿನಲ್ಲಿ ನಿರ್ಮಾಣವಾಗಲಿರುವ ನೂತನ ಬಂಟರ ಭವನದ ಶಿಲಾನ್ಯಾಸ ಎಂಆರ್ಜಿ ಗ್ರೂಪ್ಸ್ ನ ಸ್ಥಾಪಕ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ,ಇತರ ಗಣ್ಯರು ಸೇರಿ ನೆರವೇರಿಸಿದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿ.ಕೆ ಗ್ರೂಪ್ ಆಫ್ ಕಂಪೆನಿಸ್ ಇದರ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರು ಕಟ್ಟಡದ ನೀಲನಕ್ಷೆ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಎಂಆರ್ಜಿ ಗ್ರೂಪ್ಸ್ ಇದರ ಸ್ಥಾಪಕ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟ ಅವರು ಮಾತನಾಡಿ, ದಾನಿಗಳ ಸಹಾಯದಿಂದ ನಿರ್ಮಾಣವಾಗಲಿರುವ ಈ ಬಂಟರ ಭವನದಲ್ಲಿ ಬಡವರಿಗೆ,ಸಮಾಜ ಬಾಂಧವರಿಗೆ ನೆರವಾಗುವ ಕಾರ್ಯಕ್ರಮ…
ಮಂಗಳೂರು, ಜು.06 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 47 ನೇ ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿ 10ಲಕ್ಷ ರೂ ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಲಭ್ಯವಿರುವ ಅನುದಾನಗಳನ್ನು ಹೊಂದಿಸಿಕೊಂಡು ಈ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ರಾಮಮೂರ್ತಿ ಸೋಮನಹಳ್ಳಿ, ಪ್ರವೀಣ್ ನಿಡ್ಡೇಲ್, ಶಬರೀಶ್, ಮಂಜುನಾಥ್ ಅತ್ತಾವರ, ವಿನೋದ್ ಕುಮಾರ್, ಶರ್ಮಿಳಾ ಶೆಟ್ಟಿ, ಹರೀಶ್ ರಾವ್, ಸುರೇಶ್ ಕುಮಾರ್, ಜ್ಯೋತಿ ಯಲಬುರ್ಗಿ, ಎಂ.ಬಿ ರಾಜ, ಶೈಲ ಚಂದ್ರಹಾಸ್, ರಮಾಕಾಂತ್ ನಾಯಕ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಮಂಗಳೂರು, ಜು.05 : ಸಹಕಾರಿ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಮುಂದಕ್ಕೆ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಬೇಕು. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ತುಂಬಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ. ಇಂದು ಇಲ್ಲಿ ಪುರಸ್ಕಾರ ಪಡೆದಿರುವ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ, ಮಕ್ಕಳು ದೇಶಕಟ್ಟುವ ಕಾಯಕದಲ್ಲಿ ತೊಡಗಲಿ. ಮುಂದೆ ಕನಿಷ್ಠ ಇಬ್ಬರು ಮಕ್ಕಳಿಗಾದರೂ ನೆರವಾಗುವಂತಾಗಬೇಕು ಎಂದರು. ವೇದಿಕೆಯಲ್ಲಿ ಮಾಜಿ ಸಚಿವ ಜೆ.ಕೃಷ್ಣ ಪಾಲೇಮಾರ್, ಬ್ಯಾಂಕ್ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಕೋಟ್ಯಾನ್, ಬ್ಯಾಂಕ್ ಎಂ.ಡಿ.ಗೋಪಿನಾಥ್ ಭಟ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಂ.ಡಿ.ಪ್ರವೀಣ್ ನಾಯ್ಕ್, ಬ್ಯಾಂಕ್…
ಮಂಗಳೂರು, ಜು.04 : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವಿಗೀಡಾದ ಘಟನೆ ಕೂಳೂರು ರಾಷ್ಟ್ರೀಯ ಹೆದ್ದಾರಿ 66ರ ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಸದಾನಂದ ಶೆಟ್ಟಿಗಾರ್(46) ಎಂದು ಗುರುತಿಸಲಾಗಿದೆ. ಸದಾನಂದ ಶೆಟ್ಟಿಗಾರ್ ಕೊಟ್ಟಾರ ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸದಾನಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು, ಜು.03 : ಎಂಸಿಸಿ ಬ್ಯಾಂಕ್ ನ 22 ಶಾಖೆಯು ದೇರಳ ಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಟ್ಟಡದ ಸಂಕೀರ್ಣದಲ್ಲಿ ಜೂನ್ 28, ರವಿವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್ನ ಸುಪೀರಿಯರ್ ಜನರಲ್ ವಂ. ಸಿ. ಮಿಲ್ಲಿ ಫೆರ್ನಾಂಡಿಸ್ ಅವರು ಸೇಫ್ ರೂಂ ಅನ್ನು ಉದ್ಘಾಟಿಸಿದರು. ಫಾ. ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ (ಎಫ್ ಎಮ್ ಎಚ್ ಪಿಡಿ) ಆಡಳಿತಾಧಿಕಾರಿ ವಂ. ಫಾ. ನೆಲ್ಸನ್ ದೀರಜ್ ಪಾಯ್ಸ್ ಅವರು ಬ್ಯಾಂಕಿನ ಇ-ಸ್ಟಾಂಪ್ ಸೇವೆಗೆ ಚಾಲನೆ ನೀಡಿದರು. ಪಾಣೀರ್ನ ಅವರ್ ಲೇಡಿ ಆಫ್ ಮರ್ಸಿ ಚರ್ಚ್ನ ಧರ್ಮಗುರು ವಂ. ಫಾ. ವಿಕ್ಟರ್ ಡಿ‘ಮೆಲ್ಲೊ ಅವರು ನೂತನ ಶಾಖೆಗೆ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಮಂಗಳೂರು, ಜು.02 : ಬಂಟರ ಸಂಘ ಬಜಪೆ ವಲಯದ ಬಂಟರ ಭವನಕ್ಕೆ ಶಿಲಾನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ಜುಲೈ 5ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ವಲಯ ಅಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ ಅವರು ಜೂ.16,ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬಂಟರ ಭವನ ವು ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಈ ಬಂಟರ ಭವನದ ಶಿಲಾನ್ಯಾಸವನ್ನು ಎಂಆರ್ಜಿ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ನೆರವೇರಿಸುವರು. ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಸರ್ವಿಸಸ್ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಕೆ. ಶೆಟ್ಟಿ ದೀಪ ಪ್ರಜ್ವಲನೆ ಮಾಡುವರು. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸುವರು. ವಿಕೆ ಗ್ರೂಪ್ ಆಫ್ ಕಂಪೆನೀಸ್ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ನೀಲನಕ್ಷೆ ಬಿಡುಗಡೆ ಮಾಡುವರು. ಪೂನಾ ಬಂಟರ ಸಂಘ ಅಧ್ಯಕ್ಷ…












