Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಏ. 15 : ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಆಚರಿಸಿತು. ಬೆಂದೂರು ಕಾನ್ಫರೆನ್ಸ್ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ ಉಪಸ್ಥಿತರಿದ್ದರು. ನಿರ್ಗಮಿತ ಅಧ್ಯಕ್ಷರಾದ ಬ್ರದರ್ ಜ್ಯೊ ಕುವೆಲ್ಲೊ ಅವರು ತಮ್ಮ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಬೆಂಬಲ ಮತ್ತು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಅಲ್ಲದೆ, ನೂತನ ಅಧ್ಯಕ್ಷರಿಗೆ ಯಶಸ್ಸನ್ನು ಹಾರೈಸಿದ ಅವರು, ತಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ನೂತನ ಅಧ್ಯಕ್ಷರು ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ಮತ್ತು ಎಲ್ಲಾ ಸದಸ್ಯರ ಸಹಕಾರ ಹಾಗೂ ಬೆಂಬಲವನ್ನು…
ಮಂಗಳೂರು,ಏ. 14 : ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಅವರು ದೀಪ ಬೆಳಗಿಸಿ ಹಾಗೂ ಕಳಸದಲ್ಲಿದ್ದ ತೆಂಗಿನ ಸಿರಿಯನ್ನು ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ, ಯುಪಿಎಸ್ಸಿ ಮತ್ತು ಕೆಪಿಎಸ್ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ತೋರುತ್ತಿಲ್ಲ. ಸಮುದಾಯದ ವಿದ್ಯಾರ್ಥಿಗಳು ಇಂತಹ ಸ್ಪರ್ಧಾತ್ಮಕ ಪರೀಕ್ಷೆಯ ಕಡೆಗೆ ಆಸಕ್ತಿ ವಹಿಸುವುದು ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಸವಣೂರು ಹೇಳಿದರು. ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಡಾ. ಕೊಡಾಣ್ ನಾಗಪ್ಪ ಆಳ್ವ ಮತ್ತು ಶ್ರೀಮತಿ…
ಬಂಟ್ವಾಳ, ಎ.14 : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಶನಿವಾರ ಸಂಜೆ ಮಹಾರಥೋತ್ಸವ ನೆರವೇರಿತು. ರಥೋತ್ಸವದ ದಿನ ಬೆಳಗ್ಗೆ ದೇವರಿಗೆ ಪ್ರಾರ್ಥನೆ ನೆರವೇರಿತು. ಮಹಾಪೂಜೆ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ ವಿಶೇಷ ಪೂಜೆ ನಡೆದು ಸಂಜೆ ರಥದಲ್ಲಿ ದೇವರಿಗೆ ಪೂಜೆ ಬಳಿಕ ಗುತ್ತಿನವರು ಹಾಗೂ ಭಕ್ತರು ತೆಂಗಿನಕಾಯಿ ಒಡೆದು, ರಥ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಚೆಂಡಿನ ಗದ್ದೆಗೆ ಎಳೆಯಲಾಯಿತು. ಬಳಿಕ ಸುಡುಮದ್ದು ಪದರ್ಶನ ನಡೆಯಿತು. ಮಹಾರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕ ಮಾಧವ ಭಟ್, ಹಿರಿಯ ಪ್ರಧಾನ ಅರ್ಚಕರಾದ ಕೆ. ರಾಮ್ ಭಟ್, ಪರಮೇಶ್ವರ ಭಟ್, ಅರ್ಚಕರಾದ ಪದ್ಮನಾಭ ಭಟ್, ಆದರ್ಶ ಭಟ್, ಅನಂತ ಪದ್ಮನಾಭ ಭಟ್, ದೇಗುಲದ ಆಡಳಿತ ಮೊಕ್ತಸರ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊತ್ತೇಸರ ಚೇರಾ ಸೂರ್ಯನಾರಾಯಣ ರಾವ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿ, ವಿವಿಧ ಗುತ್ತಿನವರು, ಕಾರ್ಯನಿರ್ವಹಣಾಧಿಕಾರಿ ಕೆ.…
ಮಂಗಳೂರು,ಏ. 13 : ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಇದೇ ನವೆಂಬರ್ 03ರಿಂದ 15ರವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಶಕ್ತಿನಗರದ ಕಲಾಂಗಣದಲ್ಲಿ ಮಾರ್ಚ್ 10, ಶುಕ್ರವಾರ ನಡೆಯಿತು. ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತವನ್ನು ವೀಣೆಯ ಪ್ರತಿಕೃತಿ ಮೇಲಿರುವ 12 ವಿಭಿನ್ನ ರಂಗಿನ ದೀಪಗಳನ್ನು ಬೆಳಗಿಸಿ ಮತ್ತು ಹೂವಿನ ಮೊಗ್ಗಿನಿಂದ ಸಮಾವೇಶದ ಲಾಂಛನವನ್ನು ಬಿಡುಗಡೆಗೊಳಿಸಿದ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇವರು ಮಾತನಾಡಿ ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ…
ಮಂಗಳೂರು, ಏ. 12 : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ. 66ರ ನಂತೂರು-ಪಂಪ್ವೆಲ್ ಸರ್ವಿಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಮುಳಿಹಿತ್ಲು ನಿವಾಸಿ ಗೋಪಾಲ್ (29) ಎಂದು ಗುರುತಿಸಲಾಗಿದೆ. ಗೋಪಾಲ ಅವರು ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣವನ್ನು ದಾಖಲಿಸಿ,ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು, ಏ. 11 : ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾಕ್ಕೆ ಹಾಗೆನೇ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಟ ಅರ್ಜುನ್ ದೇವ್ ಮಾತಾಡಿ, 90 ಎಂ ಎಲ್ ಚಿತ್ರಕ್ಕೆ ಯಶಸ್ಸು ಸಿಗಲಿ ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಲಾಂಚುಲಾಲ್ ಕೆ.ಎಸ್. ಚಿತ್ರಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ಡೋಲ್ಪಿ ಡಿ ಸೋಜ, ಸ್ವರಾಜ್ ಶೆಟ್ಟಿ, ಸಿದ್ಧಾರ್ಥ್, ತ್ರಿಶೂಲ್ ಶೆಟ್ಟಿ, ಆನಂದ್ ಕುಂಪಲ, ಜಗನ್ನಾಥ ಶೆಟ್ಟಿ ಬಾಳ, ಮೋಹನ್ ಕೊಪ್ಪಲ, ವಿನೀತ್ ಕುಮಾರ್, ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಶೈಲಶ್ರೀ, ಧೃತಿ, ನಿರ್ದೇಶಕ ರಂಜಿತ್ ಸಿ ಬಜಾಲ್,…
ಮಂಗಳೂರು,ಏ. 10 : ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಏಪ್ರಿಲ್ 12, ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬಹಿರಂಗ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ನಗರದ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಸವಣೂರು ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಭಾಗವಹಿಸಲಿದ್ದಾರೆ. ಕೊಡ್ಮಾನ್ ಮೋಹನದೇವ್ ಆಳ್ವ ಮತ್ತು ಡಾ. ಎಮ್. ಕೆ. ಶೈಲಜಾ ಆಳ್ವ ಅವರು ಉಪಸ್ಥಿತರಿರುವರು ಎಂದರು. ಡಾ. ಕೊಡ್ಮಾನ್ ನಾಗಪ್ಪ ಆಳ್ವ ಮತ್ತು ಶ್ರೀಮತಿ ಕಲ್ಯಾಣಿ ಆಳ್ವ ಇವರ ಸ್ಮರಣಾರ್ಥವಾಗಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ವೈದ್ಯಕೀಯ ಕ್ಷೇತ್ರದಲ್ಲಿ ನಿಟ್ಟೆ…
ಮಂಗಳೂರು, ಏ. 09 : ಡಿಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಫಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ ತುಳು ಚಿತ್ರ ಎಪ್ರಿಲ್ 10 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರಾದ ಡೋಲ್ಫಿ ಡಿ ಸೋಜ ಅವರು ತಿಳಿಸಿದರು. ಚಿತ್ರದ ನಟ ವಿನೀತ್ ಕುಮಾರ್ ಅವರು ಮಾತಾಡಿ ,ಸಿನಿಮಾವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. 90 ಎಮ್ ಎಲ್ ಸಿನಿಮಾದಲ್ಲಿ ವಿನೀತ್ ಕುಮಾರ್, ರುಹಾನಿ ಶೆಟ್ಟಿ ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ನಮಿತ, ಶೈಲಾಶ್ರೀ, ಧೃತಿ ನಟಿಸಿದ್ದಾರೆ ಎಂದರು. 90 ಎಂಎಲ್ ತುಳು ಚಿತ್ರ ಮಂಗಳೂರು, ಉಡುಪಿ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಸುಳ್ಯ ದೇರಳಕಟ್ಟೆ, ಸುರತ್ಕಲ್, ಪಡುಬಿದ್ರಿ ಮೊದಲಾದೆಡೆ ಬಿಡುಗಡೆಗೊಳ್ಳಲಿದೆ. ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಕಲನ ಸಚಿನ್ ರಾಮ್, ಡಿಸೈನ್ ಆಚಾರ್ಯ,…
ಮಂಗಳೂರು,ಏ. 08 : ನಲ್ವತ್ತನೇ ವರ್ಷಾಚರಣೆ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ. ನವೆಂಬರ್ 03 –15 ರವರೆಗೆ ಮಂಗಳೂರಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಏ.10, ಶುಕ್ರವಾರ ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರು ಲುವಿ ಜೆ ಪಿಂಟೊ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಕರ್ನಾಟಕ ಸರಕಾರದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ಲಾಂಛನ ಬಿಡುಗಡೆಗೊಳಿಸುವರು. ಗೌರವ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಗೋವಾದ ಕಲಾವಿದ ಮೈಕಲ್…
ವಾಷಿಂಗ್ಟನ್, ಏ. 08 : ಮಧ್ಯಪ್ರಾಚ್ಯದಲ್ಲಿ ಕಳೆದ ಐದು ವಾರಗಳಿಂದ ಅಮೆರಿಕ ಹಾಗೂ ಇರಾನ್ ನಡುವಿನ ಕದನಕ್ಕೆ ಇದೀಗ ತಾತ್ಕಾಲಿಕ ವಿರಾಮ ಸಿಕ್ಕಿದೆ. ಇರಾನ್ ಮೇಲೆ ನಿರ್ಧರಿಸಲಾಗಿದ್ದ ಭಾರೀ ಸೈನಿಕ ದಾಳಿಯನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮ ಘೋಷಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಮನವಿಗೆ ಸ್ಪಂದಿಸಿದ ಟ್ರಂಪ್, ತುರ್ತು ರಾಜತಾಂತ್ರಿಕ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ದಾಳಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಬೆಳವಣಿಗೆ ಸಂಭವಿಸಿರುವುದು ಗಮನಾರ್ಹವಾಗಿದೆ. ಕಳೆದ ಐದು ವಾರಗಳಿಂದ ನಡೆದಿದ್ದ ಯುದ್ಧದ ಪರಿಣಾಮವಾಗಿ ಜಗತ್ತಿನ ತೈಲ ಸರಬರಾಜಿನ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿ ಬಂದ್ ಆಗಿತ್ತು. ಇದೀಗ, ಈ ಜಲಸಂಧಿಯನ್ನು ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಇರಾನ್ ಸಮ್ಮತಿಸಿದೆ. ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ವ್ಯಾಪಾರಕ್ಕೆ ದೊಡ್ಡ ಮಟ್ಟದ ಪರಿಹಾರ ಒದಗಿಸುವ ನಿರೀಕ್ಷೆಯಿದೆ. ಜಾಗತಿಕ…












