Author: admin

ಮಂಗಳೂರು,ಮೇ.26 : ಮಾತಾ ಅಮೃತಾನಂದಮಯಿ ದೇವಿ ಅವರು ಸಪ್ತ ವರ್ಷಗಳ ಬಳಿಕ ಮಂಗಳೂರಿಗೆ ಆಗಮಿಸುತ್ತಿದ್ದು, ಮೇ 28 ಮತ್ತು 29ರಂದು ನಡೆಯಲಿರುವ ‘ಅಮೃತಸಂಗಮ 2026’ ಹಾಗೂ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಅವರು ಬೋಳೂರಿನ ಮಠದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕೇರಳದ ಹೊರಗೆ ಕರ್ನಾಟಕದಲ್ಲಿ ಆಯ್ಕೆಯಾದ ಏಕೈಕ ಸ್ಥಳ ಮಂಗಳೂರು ಎಂಬುದು ವಿಶೇಷವಾಗಿದೆ. ಮಂಗಳೂರಿನ ಭಕ್ತರ ಮೇಲಿರುವ ಅಮ್ಮನವರ ಅಪಾರ ಮಮತೆಯ ಪ್ರತಿಫಲವೇ ಈ ಆಯ್ಕೆ ಎಂದು ಭಕ್ತರು ಅಭಿಪ್ರಾಯಪಡುತ್ತಿದ್ದಾರೆ ಎಂದರು. 25ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಹಲವು ಸಮಾಜಮುಖಿ ಹಾಗೂ ಮಾನವೀಯ ಸೇವಾ ಯೋಜನೆಗಳಿಗೆ ಚಾಲನೆ ನೀಡುವ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮಂಗಳೂರಿನ ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ 2 ದಿನಗಳ ಕಾಲ ಬೆಳಗ್ಗಿನಿಂದ ರಾತ್ರಿ ತನಕ ವಿವಿಧ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.…

Read More

ಮಂಗಳೂರು,ಮೇ.25  : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ರವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಸ್ಥಳೀಯರಿಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮ.ನ.ಪಾ ಸದಸ್ಯ ಮನೋಹರ್ ಶೆಟ್ಟಿ ಕದ್ರಿ, ಬೂತ್ ಅಧ್ಯಕ್ಷರಾದ ಸದಾಶಿವ, ಪ್ರವೀಣ್ ಭಟ್, ಜೀವನ್, ಜಯರಾಜ್ ಶೆಟ್ಟಿ, ವಾಸುದೇವ, ದೇವರಾಣಿ, ಕದ್ರಿ ಜಗದೀಶ್  ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು,ಮೇ.24 : ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ಮೇ 2026 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವುದು, ಬ್ಯಾಂಕಿಂಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಕಾರ್ಯಾಚರಣಾ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು. ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ 13 ಮಂದಿ ಆಡಳಿತ ಮಂಡಳಿಯ ಹಿರಿಯ ನಿರ್ದೇಶಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಮಾರಂಭವು ಎಂ.ಸಿ.ಸಿ. ಬ್ಯಾಂಕಿನ ಐಟಿ ವಿಭಾಗದ ಮುಖ್ಯಸ್ಥರಾದ ಅಲ್ವಿನ್ ಡಿಸೋಜಾ ಅವರ ನಿರೂಪಣೆಯಲ್ಲಿ ಸ್ವಾಗತದೊಂದಿಗೆ ಆರಂಭವಾಯಿತು. ಅವರು ಮಾತಾಡಿ,ಈ ಭೇಟಿ ಕೇವಲ ಅಧಿಕೃತ ಕಾರ್ಯಕ್ರಮವಷ್ಟೇ ಅಲ್ಲದೆ, ಎರಡೂ ಬ್ಯಾಂಕಿಂಗ್ ಸಂಸ್ಥೆಗಳ ನಡುವಿನ ಸಂಸ್ಥಾತ್ಮಕ ಸಹಕಾರ ಮತ್ತು ಪರಸ್ಪರ ಅರ್ಥೈಸಿಕೆಯನ್ನು ಬಲಪಡಿಸುವ…

Read More

ಮಂಗಳೂರು,ಮೇ.23  : ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನಗಳ ಕಾರ್ಯಕ್ರಮ ನಗರದ ಮೇರಿಹಿಲ್‌ನಲ್ಲಿರುವ ‘ಪಾಲೆಮಾರ್ ಕನೈನನ್ ಸೆಂಟರ್’ನಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ಮೇರಿಹಿಲ್ನ ಪಾಲೆಮಾರ್ ಕನೈನ್ಯನ್ ಸೆಂಟರ್, ಮೊರ್ಗನ್ಸ್ ಗೇಟ್ನ ಪಾಲೆಮಾರ್ ಗಾರ್ಡನ್, ಸುರತ್ಕಲ್ನ ಪಾಲೆಮಾರ್ ಫಾರ್ಮ್ಸ್ ಹಾಗೂ ಜೆಪ್ಪಿನಮೊಗರುವಿನ ನೇತ್ರಾವತಿ ಸಭಾಂಗಣಗಳನ್ನು ಆಂಧ್ರಪ್ರದೇಶದ ರಾಜ್ಯಪಾಲ ಜ| ಎಸ್. ಅಬ್ದುಲ್ ನಜೀರ್ ಅವರು ಏಕಕಾಲದಲ್ಲಿ ಉದ್ಘಾಟಿಸಿದರು. ಉದ್ಘಾಟನೆಯನ್ನು ನೆರವೇರಿಸಿದ ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಮಾತನಾಡಿ, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವೆಯನ್ನು ಶ್ಲಾಘಿಸಿದರು. ಅವರು ಉದ್ಯಮದ ಜತೆಗೆ ಶಿಕ್ಷಣ ಮತ್ತು ಇತರ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಹೇಳಿದರು. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಆಗುತ್ತದೆ. ಶಿಕ್ಷಣ ಪಡೆದವರು ಸ್ವಾವಲಂಬಿಗಳಾಗುತ್ತಾರೆ.ನಾಲ್ಕು ಸಭಾಂಗಣಗಳನ್ನು ಸಮಾಜಕ್ಕೆ ಅರ್ಪಿಸಿದ ಅವರನ್ನು ಅಭಿನಂದಿಸುತ್ತೇನೆ. ಈ ನೂತನ…

Read More

ಮಂಗಳೂರು, ಮೇ 22 : ಕರಾವಳಿಯ ಸ್ಯಾಂಡಿಸ್ ಕಂಪೆನಿ’ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026  ಪ್ರದಾನ ಕಾರ್ಯಕ್ರಮ ಮೇ 24ರಂದು ಸಂಜೆ 3 ಗಂಟೆಗೆ ಮುಲ್ಕಿಯ ಕೊಲ್ನಾಡ್ ನ  ಸುಂದರರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ  ನಡೆಯಲಿದೆ ಎಂದು ಸ್ಯಾಂಡಿಸ್ ಕಂಪೆನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಂಗೀತ ನಿರ್ದೇಶಕ ಗುರುಕಿರಣ್ ನಿರ್ದೇಶಕ ತರುಣ್ ಸುಧೀರ್ , ನಟಿ ಸೋನಾಲ್ ಮಾಂತೆರೋ, ನಿರ್ಮಾಪಕಿ ಶಿಲ್ಪಾ ಗಣೇಶ್ ಹಾಗೂ ನಟ ತ್ರಿವಿಕ್ರಮ ಭಾಗವಹಿಸಲಿದ್ದಾರೆ ಎಂದರು. ಇವರೊಂದಿಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಮೈಂಡ್ ಮೆಕ್ಯಾನಿಸಂ ಸಂಸ್ಥಾಪಕ ಶ್ರೀನಾಥ್ ಶೆಟ್ಟಿ, ಆಸ್ತ್ರ ಗ್ರೂಪ್ ಸಂಸ್ಥಾಪಕ ಲಂಚುಲಾಲ್ ಕೆ.ಎಸ್. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸೇರಿದಂತೆ ತುಳು ಚಿತ್ರರಂಗದ ಕಲಾವಿದರು, ನಿರ್ಮಾಪಕರು…

Read More

ಮಂಗಳೂರು,ಮೇ.21  : ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಬುಧವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಹಾದಿಯ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ. ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ಯಶಸ್ವಿ ಉದ್ಯಮವನ್ನು ನಡೆಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳ ಗೊಂಡ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ ಮಾಡುತ್ತಿದೆ ಎಂದರು. ಪಾಲೆಮಾರ್ ಸಭಾಂಗಣಗಳ ಲೋಕಾರ್ಪಣಾ ಸಮಾರಂಭವು ಮೇ23ರಂದು ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರಿನ ಮೇರಿಹಿಲ್ನ ಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ.…

Read More

ಮಂಗಳೂರು,ಮೇ.20 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24ರಂದು ಬೆಳಗ್ಗೆ 10ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಸಮಾಜ ಸೇವಕ ದೀಪಕ್.ಜಿ.ಬೆಳ್ತಂಗಡಿ ಇವರಿಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ನ ಉಪ ಪೊಲೀಸ್ ಆಯುಕ್ತ ಎಚ್.ಎನ್.ಮಿಥುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶ ಬಿ.ಎ.ಖಾದರ್ ಶಾ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ…

Read More

ತಿರುವನಂತಪುರಂ, ಮೇ. 19: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಮೇ. 18, ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಹಾಗೂ 20 ಮಂದಿ ಸಚಿವರಿಗೆ ಪದ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ನ 11 ಮಂದಿಗೆ ಸ್ಥಾನ ದೊರೆತಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಐವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಕೇರಳ ಕಾಂಗ್ರೆಸ್-ಜೋಸೆಫ್ನ ಮಾನ್ಸ್ ಜೋಸೆಫ್, ಕೇರಳ ಕಾಂಗ್ರೆಸ್-ಜಾಕೋಬ್ನ ಅನೂಪ್ ಜಾಕೋಬ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಶಿಬು ಬೇಬಿ ಜಾನ್, ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷದ ಸಿಪಿ ಜಾನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ನಿಂದ ರಮೇಶ್ ಚೆನ್ನಿತ್ತಲ್, ಕೆ. ಮುರಳೀಧರನ್, ಸನ್ನಿ ಜೋಸೆಫ್, ಎ.ಪಿ. ಅನಿಲ್ ಕುಮಾರ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಪಿ.ಸಿ. ವಿಷ್ಣುನಾಥ್, ಎಂ. ಲಿಜು, ಟಿ. ಸಿದ್ದಿಕ್, ಕೆ.ಎ. ತುಳಸಿ ಮತ್ತು ಒ.ಜೆ. ಜನೀಶ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ…

Read More

ಮಂಗಳೂರು,ಮೇ.19 : ಮೇರಿಹಿಲ್ ನ  ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ಐಸಿಎಐನ ಮಂಗಳೂರು ಶಾಖೆಯಿಂದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಬಲವರ್ಧನೆ ಅಧಿಗಮ-ಜ್ಞಾನದ ಸಮಾವೇಶ ಮೇ 15, ಶುಕ್ರವಾರ  ನಡೆಯಿತು. ನಿಟ್ಟೆ ವಿಶ್ವವಿದ್ಯಾಲಯ ಸಹ ಕುಲಪತಿ  ಹಾಗೂ ಹಿರಿಯ ಎಲುಬುತಜ್ಞ ಡಾ| ಶಾಂತಾರಾಮ್ ಶೆಟ್ಟಿ ಅವರು ಸಮಾವೇಶವನ್ನು ಉದ್ಘಾಟಿಸಿ, ಮಾತಾಡಿದ ಅವರು,ಲೆಕ್ಕಪರಿಶೋಧಕರು, ಇಂಜಿನಿಯರುಗಳು, ವೈದ್ಯರು ಹಾಗೂ ಕೌಶಲಯುತ ವೃತ್ತಿಪರರು ನಮ್ಮ ದೇಶವನ್ನು ಸದೃಢವಾಗಿ ಮುನ್ನಡೆಸುವ ಕೆಲಸ ಮಾಡಬೇಕಾಗಿದೆ.ಭಾರತ ಈಗ ಮತ್ತೆ ಶಕ್ತಿಯುತವಾಗುತ್ತಿದೆ, ದೊಡ್ಡ ಕ್ರಾಂತಿಯನ್ನೇ ಎಲ್ಲಾ ಕ್ಷೇತ್ರಗಳಲ್ಲೂ ಎದುರಿಸುತ್ತಿದೆ, ಪ್ರಸ್ತುತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ, ಶೀಘ್ರ ಇದು ಬ್ರಿಟನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಹೋಗಲಿದೆ, ಈ ಬೆಳವಣಿಗೆಯಲ್ಲಿ ಲೆಕ್ಕಪರಿಶೋಧಕರ ದೊಡ್ಡ ಕೊಡುಗೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಐಸಿಎಐನ ಕೇಂದ್ರ ಮಂಡಳಿಯ ಸದಸ್ಯ ಸಿಎ ದಯಾನಿವಾಸ ಶರ್ಮಾ, ಸಿಎ ಪಂಕಜ್ ಶಾ, ಐಸಿಎಐನ ದಕ್ಷಿಣ ಭಾರತ ಪ್ರಾದೇಶಿ ಸಮಿತಿ ( ಎಸ್ ಐಆರ್ ಸಿ) ಕಾರ್ಯದರ್ಶಿ ಸಿಎ ಪ್ರಮೋದ್ ಹೆಗ್ಡೆ ಉಪಸ್ಥಿತರಿದ್ದರು.…

Read More

ಮಂಗಳೂರು,ಮೇ. 18  : ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಇದೇ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು ಅನುಕರಿಸುವ ಕರೆಯಾಗಿದ್ದು, ಪ್ರತಿಯೊಬ್ಬ ಗುರುವು ಬಲಿಪೀಠದ ಮುಂದೆ “ಯಾಜಕ ಮತ್ತು ಬಲಿಪಶು” ಆಗಿ ತನ್ನ ಜೀವನವನ್ನೇ ಬಲಿದಾನವಾಗಿ ಅರ್ಪಿಸಬೇಕು ಎಂದು ಕರೆ ನೀಡಿದರು. ಸಂತ ಪಾದ್ರೆ ಪಿಯೋ ಅವರ ಉದಾಹರಣೆಯನ್ನು ನೀಡುತ್ತಾ, ಗುರುಗಳು ಜನರೊಂದಿಗೆ ನಿಕಟವಾಗಿರಬೇಕು ಮತ್ತು ಪ್ರವಾದಿ ಎಲಿಜಾರಂತೆ ದೈವಿಕ ಉತ್ಸಾಹದೊಂದಿಗೆ ಆಧುನಿಕ ಕಾಲದ ಸುಗಮ ಮಾರ್ಗಗಳನ್ನು ಬಳಸಿ ಸುಸಂದೇಶ ಸಾರಬೇಕು ಎಂದು ಹೇಳಿದರು. ಸುಮಾರು 130…

Read More