Subscribe to Updates
Get the latest creative news from FooBar about art, design and business.
Author: admin
ಮಂಜೇಶ್ವರ,ಮಾ. 09 : ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್, 8 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಗಣ್ಯ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಪರಿಸರ ಜಾಗೃತಿಯನ್ನು ಪ್ರತಿಬಿಂಬಿಸುವಂತೆ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿದರು. ವ್ಯಸನಮುಕ್ತಿ ಕೇಂದ್ರದ ವ್ಯವಸ್ಥಾಪಕರಾದ ರಾಕೇಶ್ ಲೋಬೋ ಅವರು ಸ್ವಾಗತ ಭಾಷಣ ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾದ ಅಜಿತಾ ಕೆ. ಮತ್ತು ಇರ್ಫಾನಾ ಇಕ್ಬಾಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ನ ಸ್ಥಾಪಕಿ ಮತ್ತು ನಿರ್ದೇಶಕಿ ಪ್ರೊಫೆಸರ್ ಹಿಲ್ಡಾ ರಾಯಪ್ಪನ್ ಅವರಿಗೆ ಸಮಾಲೋಚನೆ ಮತ್ತು ಸಾಮಾಜಿಕ ಸೇವೆಯಲ್ಲಿ ನೀಡಿದ ಕೊಡುಗೆಯನ್ನು ಗೌರವಿಸಿ ವಿಶೇಷ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅವರು ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿ, ಸ್ನೇಹಾಲಯದ ಸ್ಥಾಪಕರಾದ…
ಮಂಗಳೂರು,ಮಾ. 08 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನಲ್ಲಿ 5.28 ಕೋಟಿ ರೂ. ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಬೆಳೆಯುತ್ತಿರುವ ಮಂಗಳೂರು ಶಿಕ್ಷಣ ಕ್ಷೇತ್ರದಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ವಿದ್ಯಾರ್ಜನೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಇಂತಹ ವಸತಿ ನಿಲಯಗಳು ಹೆಚ್ಚಾದಷ್ಟು ದೂರದ ಊರಿನ ವಿದ್ಯಾರ್ಥಿಗಳಿಗೆ ಸದುಪಯೋಗವಾಗುತ್ತದೆ. ಶೀಘ್ರದಲ್ಲಿ ಈ ಕಾಮಗಾರಿ ಮುಗಿಯಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶ್ರೀಮತಿ ಶಕೀಲಾ ಕಾವ, ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಜಯಕುಮಾರ್, ಕಮಲಾಕ್ಷಿ, ಧೃತೇಶ್, ವೆಂಕಟೇಶ್ ಕದ್ರಿ, ಸುಂದರ ಶೆಟ್ಟಿ ಕದ್ರಿ, ಚೇತನಾ, ಶಿಲ್ಪಾ, ಗಂಗಾಧರ್ ಕದ್ರಿ, ಉಷಾ, ಗೀತಾ, ಭಾಸ್ಕರ್, ಚಿನ್ನಪ್ಪ, ನವೀನ್, ಹರೀಶ್, ಚಂದ್ರಕಾಂತ್, ಹರಿಣಾಕ್ಷ ,…
ವಿಟ್ಲ,ಮಾ. 07 : ಸೈಕಲ್ ನಿಂದ ಬಿದ್ದ ಬಾಲಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಎಂದು ಗುರುತಿಸಲಾಗಿದೆ ಸ್ಥಳೀಯರ ಮಾಹಿತಿ ಪ್ರಕಾರ, ಆಸೀಪ್ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್ನಲ್ಲಿ ಹಿಂತಿರುಗುವ ಸಂದರ್ಭ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸೈಕಲ್ನಿಂದ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆಸಿಫ್ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದರು.
ಬೆಂಗಳೂರು, ,ಮಾ. 06 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಉಪ್ಪು, ಸಕ್ಕರೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ ಒಟ್ಟು 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು. ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಉಪ್ಪು ,ಸಕ್ಕರೆ ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈ ಸಾಲಿನಲ್ಲಿ 6,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.
ಮಂಗಳೂರು, ಮಾ.5 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನಲ್ಲಿ ಸುಮಾರು ಒಂದು ಕೋಟಿ ರೂ. ವಿಶೇಷ ಅನುದಾನದಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯು ಸಮಗ್ರ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಭಾನುಮತಿ ಪಿ.ಎಸ್, ಶೈಲೇಶ್ ಶೆಟ್ಟಿ, ಮಂಡಲದ ಉಪಾಧ್ಯಕ್ಷರಾದ ದೀಪಕ್ ಪೈ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಸಾದ್ ಬೋಳಾರ್, ಪ್ರಮುಖರಾದ ಅಮಿತ್ ಶೆಟ್ಟಿ, ದಿನೇಶ್ ಕರ್ಕೇರ, ಪ್ರವೀಣ್ ನಿಡ್ಡೆಲ್, ನಾಗರಾಜ್ ಆಚಾರ್ಯ, ಸಾತ್ವಿಕ್ ಭುವನ್, ಸುಜಾತ ಆಳ್ವ, ರೂಪ, ಜಯಶ್ರೀ, ಕೇಶವ್ ಶೆಟ್ಟಿ, ದಿನೇಶ್ ಶೆಟ್ಟಿ, ಸುರೇಶ, ಪುಂಡಲೀಕ ಸುವರ್ಣ, ದೇವದಾಸ್ ಶೆಟ್ಟಿ, ರವಿ ಆಚಾರಿ, ಪುಟ್ಟ, ಗಿರೀಶ್,ರಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು, ಮಾ.4 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಅಡಿಟೋರಿಯಂನಲ್ಲಿ “ಸಮನ್ವಯ 2026” ಎಂಬ ಶೀರ್ಷಿಕೆಯಲ್ಲಿ ಆಚರಿಸುತ್ತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಫಾತಿಮಾ ಡಿ ಸಿಲ್ವಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನವದೆಹಲಿ ಟೈನ್ ನರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾದ ಎವ್ಲಿನ್ ಪಿ.ಕಣ್ಣನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಸ್ ಟು ಬಿ ಯುನಿವರ್ಸಿಟಿಯ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷರಾದ ಪ್ರೊ. ಡಾ.ಗೋಪಾಲ್ ಮೊಗರಾಯ ವಹಿಸಲಿದ್ದಾರೆ. ವಾರ್ಷಿಕೋತ್ಸವದ ಪ್ರಯುಕ್ತ ಒಂದು ವಾರಪೂರ್ತಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯ ಪ್ರಮುಖರಾದ ಸಬಿತಾ ನಾಯಕ್ , ಪ್ರತಿಮಾ, ಜೆಸಿಂತಾ ವೇಗಸ್ , ಮಾಳವಿಕಾ ಮತ್ತಿತರರು ಉಪಸ್ಥಿತರಿದ್ದರು.
ಜಕಾರ್ತ, ಮಾ. 03 : ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭಿಸಿಲ್ಲ. ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ಹಲವಾರು ಟೆಕ್ಟೋನಿಕ್ ಪ್ಲೇಟ್ಗಳು ಒಮ್ಮುಖವಾಗುವ ಕಾರಣದಿಂದಾಗಿ ಆಗಾಗ್ಗೆ ಭೂಕಂಪನ ಚಟುವಟಿಕೆಯನ್ನು ಅನುಭವಿಸುವ ಪ್ರದೇಶವಾದ ಸುಮಾತ್ರಾ ಬಳಿಯ ನೀರಿನಲ್ಲಿ ಕಂಪನ ಸಂಭವಿಸಿದೆ.
ಟೆಹ್ರಾನ್, ಮಾ. 02 : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ನ ಸರ್ಕಾರಿ ಮಾಧ್ಯಮಗಳು ಭಾನುವಾರ ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿವೆ. ಅಮೆರಿಕದ ಅತ್ಯಾಧುನಿಕ B-2 ಸ್ಟೈಲ್ ಬಾಂಬರ್ಗಳು ಮತ್ತು ಇಸ್ರೇಲ್ನ F-35 ಯುದ್ಧ ವಿಮಾನಗಳು ರೇಡಾರ್ಗಳ ಕಣ್ಣು ತಪ್ಪಿಸಿ ಇರಾನ್ನ ವಾಯುಗಡಿಯನ್ನು ಸದ್ದಿಲ್ಲದೆ ಪ್ರವೇಶಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಅವರು ಹತ್ಯೆಯಾಗಿದ್ದಾರೆ ಇರಾನ್ನ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ. ಅಮೇರಿಕಾ ಮತ್ತು ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಇರಾನ್ ಪ್ರತಿದಾಳಿಗಳನ್ನು ತೀವ್ರಗೊಳಿಸಿದ್ದು, ಇಸ್ರೇಲ್ ಜೊತೆಗೆ ಇತರೆ ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಮೆರಿಕದ ಸೈನಿಕ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.
ಸುಳ್ಯ , ಮಾ. 02 : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಇದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಜನ ಮಂಡಳಿಯ ಸದಸ್ಯೆ ರತ್ನಾವತಿ ಕುಸಿದು ಬಿದ್ದ ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಯಿತಾದರೂ,ಅಲ್ಲಿಗೆ ತಲುಪುವ ಮೊದಲೇ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವಾಷಿಂಗ್ಟನ್, ಮಾ. 01 : ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಿಸಿದ್ದಾರೆ. ಟ್ರೂತ್ ಸೋಶಿಯಲ್’ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಅವರು ಪ್ರಕಟಿಸಿದ ಸಂದೇಶದಲ್ಲಿ ಖಮೇನಿ ಅವರನ್ನು “ವಿಶ್ವ ಇತಿಹಾಸದ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬ” ಎಂದು ಕರೆದಿದ್ದಾರೆ. ಖಮೇನಿ ಸಾವಿನಿಂದ ಇರಾನ್ ಜನತೆಗೆ ತಮ್ಮ ದೇಶವನ್ನು ಮರಳಿ ಪಡೆಯುವ ಅವಕಾಶ ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಗುಪ್ತಚರ ಸಂಸ್ಥೆಗಳ ಸಮನ್ವಯದಿಂದ ನಡೆದ ನಿಖರ ಬಾಂಬ್ ದಾಳಿಯಲ್ಲಿ ಟೆಹ್ರಾನ್ನಲ್ಲಿರುವ ಖಮೇನಿ ನಿವಾಸವನ್ನು ಗುರಿಯಾಗಿಸಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಸರ್ಕಾರ ಇದುವರೆಗೆ ಅಧಿಕೃತವಾಗಿ ಖಮೇನಿ ಸಾವಿನ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ.












