Author: admin

ಬೆಂಗಳೂರು, ಆ. 05 : 19 ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸಚಿವರಾಗಿ ಆ. 03, ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,…

Read More

ಮಂಗಳೂರು,ಆ.04 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ಸಂದೀಪ್ ಬೆದ್ರ ನಿರ್ದೇಶನದ ‘ಪಿಕ್ಚರ್‘ಚಲನಚಿತ್ರವು ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಿಡಿ, ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ನಾಯಕನಟರಾಗಿ ನಟಿಸಿದ್ದಾರೆ. ನಾಯಕಿ ನಟಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ ಎಂದು ಹೇಳಿದರು. ಚಿತ್ರದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಸಾಯಿಕೃಷ್ಣ ಭೋಜರಾಜ್ ವಾಮಂಜೂರ್, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್ ಮುಂತಾದವರು ನಟಿಸಿದ್ದಾರೆ ಎಂದರು. ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ‘ಪಿಕ್ಚರ್’ ಚಲನಚಿತ್ರ ನಿರ್ಮಾಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶಿಲ್ಪಾ ಗಣೇಶ್ ಅವರೂ ಜಸ್ಕರಣ್ ಸಿಂಗ್ ಜೊತೆಗೂಡಿ ‘ಗೋಕುಲದ ರಾಧೆ’ ಎಂಬ ಹಾಡನ್ನು ಹಾಡಿದ್ದಾರೆ. ಚಿತ್ರದಲ್ಲಿ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಛಾಯಾಚಿತ್ರಗ್ರಹಣ, ರಾಜು ಆರ್ಯನ್…

Read More

ಮಂಗಳೂರು,ಆ.03 : ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯ ಕುರಿತಾದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಇಂದು ಬ್ಯಾಂಕ್ ನ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಿದರು. ಬಳಿಕ ಮಾತನಾಡಿದ ಡಾ.ರಾಜೇಂದ್ರ ಕುಮಾರ್ ಅವರು, ಬ್ಯಾಂಕಿನ ಪ್ರಧಾನ ಕಚೇರಿಯ ಸಿಬ್ಬಂದಿಯಾಗಿರುವ ಎಸ್. ಜಗದೀಶ್ಚಂದ್ರ ಅಂಚನ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಮೊಳಹಳ್ಳಿ ಶಿವರಾವ್ ಅವರು ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಲೇ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜೀವನಗಾಥೆ ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿ ಎಂಬ ನಿಟ್ಟಿನಲ್ಲಿ ಈ ಕೃತಿಯನ್ನು ರಚಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ನಬಾರ್ಡ್ನ ಜಿಎಂ ಸಂಗೀತ, ಅಶೋಕ್ ಕುಮಾರ್ ಶೆಟ್ಟಿ, ರಮೇಶ್,…

Read More

ಲಿಮಾ, ಆ. 02 : ಪೆರುವಿನ ನಾಜ್ಕಾ ನಗರದ ಹೊರ ವಲಯದಲ್ಲಿ ಪ್ರವಾಸಿಗರಿದ್ದ ವಿಮಾನವೊಂದು ಪತನಗೊಂಡು 13 ಮಂದಿ ಸಾವನ್ನಪ್ಪಿದ ಘಟನೆ  ನಡೆದಿದೆ. ಪೆರುವಿನ ನಾಝ್ಕಾ ಲೈನ್ಸ್ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸಣ್ಣ ವಿಮಾನ ಶನಿವಾರ ನಾಝ್ಕಾ ನಗರದ ಹೊರವಲಯದ ಪತನಗೊಂಡಿದೆ. ವಿಮಾನದಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಲಿಮಾದಿಂದ ದಕ್ಷಿಣಕ್ಕೆ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಪಿಸ್ಕೋ ವಿಮಾನ ನಿಲ್ದಾಣದಿಂದ ವಿಮಾನವು ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 11 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Read More

ಕಡಬ, ಆ.01 : ಮಳೆ ಮತ್ತು ಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ನಡೆದಿದೆ. ಮೃತರನ್ನು ಯಾದವ ಗೌಡ (66) ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೀಸಿದ ಮಳೆ ಮತ್ತು ಗಾಳಿಗೆ ಅಡಿಕೆಮರ ಮುರಿದು ಬಿದ್ದು ಯಾದವ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು. 31 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸ ಲಾಗುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ -2026 ಉದ್ಯೋಗ ಮೇಳ ಆ. 7 ಮತ್ತು 8ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐಎಸ್, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಉತ್ಪಾದನಾ ವಲಯ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ ಸೇರಿದಂತೆ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. 2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಉದ್ಯೋಗ…

Read More

ಉಡುಪಿ, ಜು. 30   : ಕಾಂಗ್ರೆಸ್‌ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕೊಡವೂರು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಜುಲೈ 29 ರ ಬುಧವಾರ ಸಂಜೆ, ಉಡುಪಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಸುವರ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ  ಅವರು  ನೋಟಿಸ್‌ ಸ್ವೀಕರಿಸಿದ್ದಾರೆ. ನಗರದಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಯಶ್ ಪಾಲ್ ಸುವರ್ಣ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ದ್ವೇಷ ಭಾಷಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Read More

ಟೋಕಿಯೋ, ಜು. 29 : ಜಪಾನ್ ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಸನೇ ತಕೈಚಿ ಮಾಹಿತಿ ನೀಡಿದ್ದಾರೆ. ಈ ಪ್ರಬಲ ಭೂಕಂಪದಿಂದಾಗಿ ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ ಹಲವೆಡೆ ಕಟ್ಟಡಗಳು ಕುಸಿದಿದ್ದು, ಸೇತುವೆಗಳು ಜಖಂಗೊಂಡಿವೆ ಮತ್ತು ಗೂಡ್ಸ್ ರೈಲುಗಳು ಉರುಳಿಬಿದ್ದಿವೆ. ಭೂಕಂಪದ ನಂತರ ಪರಮಾಣು ಸ್ಥಾವರಗಳಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ಪರಮಾಣು ನಿಯಂತ್ರಣ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಜಪಾನ್ ಸರಕಾರವು ಕ್ಯುಶು ದ್ವೀಪದ ಕುಮಮೊಟೊ, ಕಾಗೋಶಿಮಾ,ನಾಗಸಾಕಿ, ಫುಕುವೋಕಾ, ಸಾಗಾ, ಓಯಿತಾ ಮತ್ತು ಮಿಯಾಝಾಕಿ ಪ್ರಾಂತ್ಯಗಳಿಗೆ ತುರ್ತು ಭೂಕಂಪನದ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ..

Read More

ಬಜ್ಪೆ, ಜು. 28 :: ಬಸ್ ಮತ್ತು ಬೈಕ್ ಮುಖಾ-ಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎಕ್ಕಾರು ಬಳಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಬಜ್ಪೆ ನಿವಾಸಿ ಮಹಮ್ಮದ್ ಬಶೀರ್ ಕಿನ್ನಿಗೋಳಿ (45) ಎಂದು ಗುರುತಿಸಲಾಗಿದೆ. ಕಟೀಲು ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಬಸ್ ಹಾಗೂ ಬಜಪೆ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಎಕ್ಕಾರು ಬೋಲೋಡಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಶೀರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬಜೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು. 27 : ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್ನಲ್ಲಿ ‘ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಜುಲೈ 25, ಶನಿವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ ರಾವ್ ವಹಿಸಿದ್ದರು. ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಡಾ. ಎ. ಶ್ರೀನಿವಾಸ ರಾವ್ ಅವರು, ಈ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಣೆಯ ಮೂಲಕ ಆಟಿ ತಿಂಗಳ ಮಹತ್ವ ಹಾಗೂ ಆಟಿ ತಿಂಗಳ ವಿಶೇಷ ತಿನಿಸುಗಳ ಮಹತ್ವವನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಆಟಿ ತಿಂಗಳ ಸಾಂಸ್ಕೃತಿಕ ಮಹತ್ವ ದೇಶದ ಜನತೆಗೆ ತಿಳಿಯಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ಆಟಿಡೊಂಜಿ ದಿನ ಕಾರ್ಯಕ್ರಮವು ಹಿಂದಿನ ಕಾಲದ ಜೀವನ ಪದ್ಧತಿ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉತ್ತಮ ಕಾರ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆ ಪ್ರೊ. ಇರ್.…

Read More