Author: admin

ಮಂಗಳೂರು,ಮಾ.22 : ಮಂಗಳೂರಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಐಎಂಐಟಿ (AIMIT) ಕೇಂದ್ರದ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ನ ಎಂಬಿಎ (MBA) ವಿಭಾಗವು, ಮಾರ್ಚ್ 16 ರಂದು ಬೀರಿಯಲ್ಲಿರುವ ಎಐಎಂಐಟಿ ಕೇಂದ್ರದ ಆರ್ಥರ್ ಶೆಣಯ್ ಸಭಾಂಗಣದಲ್ಲಿ ತನ್ನ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಅನ್ನು ಆಯೋಜಿಸಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಜೀವನ್ ಡೆರಿಕ್ ಡಿಸೋಜ ಅವರು, ಮಾನವ ಸಂಪನ್ಮೂಲ ನಿರ್ವಹಣೆಯ ಮೇಲೆ ಜನರೇಟಿವ್ ಎಐ ಮತ್ತು ಏಜೆಂಟಿಕ್ ಎಐನಂತಹ ಉದಯೋನ್ಮುಖ ತಂತ್ರಜ್ಞಾನಗಳ ಪರಿವರ್ತಕ ಪ್ರಭಾವದ ಕುರಿತು ಮಾತಾಡಿದರು. ಭವಿಷ್ಯದ ವೃತ್ತಿಜೀವನವನ್ನು ರೂಪಿಸುವಲ್ಲಿ ವೃತ್ತಿಪರ ನೆಟ್‌ವರ್ಕಿಂಗ್ನ ಪ್ರಾಮುಖ್ಯತೆಯನ್ನು ಅವರು ಒತ್ತಿಹೇಳಿದರು. ನಿರ್ದೇಶಕರಾದ ಡಾ. ಫಾದರ್ ಕಿರಣ್ ಕೊತಾ ಅವರು ತಮ್ಮ ಭಾಷಣದಲ್ಲಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಲು ಮತ್ತು ಫಲಿತಾಂಶಗಳನ್ನು ಲೆಕ್ಕಿಸದೆ ತಮ್ಮನ್ನು ತಾವು ವಿಜೇತರೆಂದು ಪರಿಗಣಿಸಲು ಒತ್ತಾಯಿಸಿದರು. ಜೆಸ್ಯೂಟ್ ಮಿಷನ್ ಮತ್ತು ಆದರ್ಶಗಳು ಇಂದಿನ ಜವಾಬ್ದಾರಿಯುತ ಮ್ಯಾನೇಜ್‌ಮೆಂಟ್ ಅಭ್ಯಾಸಗಳ ಕೇಂದ್ರಬಿಂದುವಾಗಿರುವ ‘ಟ್ರಿಪಲ್ ಬಾಟಮ್ ಲೈನ್’ (ಜನರು, ಭೂಮಿ ಮತ್ತು…

Read More

ಕಾರ್ಕಳ, ಮಾ. 21 : ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಗುರುವಾರ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು,ತೀವ್ರವಾಗಿ ಗಾಯಗೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಮಾ. 20 : ರಂಜಾನ್ ಮಾಸದ ಅಂತ್ಯದ ಅಂಗವಾಗಿ ಮುಸ್ಲಿಂ ಬಾಂಧವರು ಶುಕ್ರವಾರ ನಗರದ ವಿವಿಧ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಒಟ್ಟುಗೂಡಿ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು.ರಂಜಾನ್ ಹಬ್ಬ ಆಚರಣೆ ಮಾಡುವ ಮೂಲಕ 30 ದಿನಗಳ ಉಪವಾಸ ಅಂತ್ಯವಾಗಿದೆ. ಈ ಸಂದರ್ಭದಲ್ಲಿ ನಮಾಜ್ ಸಲ್ಲಿಸಲು ಮಸೀದಿಗಳು ಮತ್ತು ತೆರೆದ ಪ್ರಾರ್ಥನಾ ಮೈದಾನಗಳಲ್ಲಿ ಭಕ್ತರು ಜಮಾಯಿಸಿದರು. ಮಂಗಳೂರಿನ ಲೈಟ್ ಹೌಸ್ ಹಿಲ್ ರಸ್ತೆಯ ಈದ್ಗಾ ಮಸೀದಿ, ಕುದ್ರೋಳಿಯ ಜಾಮಿಯಾ ಮಸೀದಿ ಸೇರಿದಂತೆ ನಗರದ ಪ್ರಮುಖ ಮಸೀದಿಗಳಲ್ಲಿ ಈದ್ ಪ್ರಾರ್ಥನೆಗಳು ಜರುಗಿದವು. ಸಾಂಪ್ರದಾಯಿಕ ಉಡುಗೆ ತೊಟ್ಟ ಮುಸ್ಲಿಂ ಬಾಂಧವರು, ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾ ಹಬ್ಬದ ಸಡಗರದಲ್ಲಿ ಪಾಲ್ಗೊಂಡರು.

Read More

ಮಂಗಳೂರು.ಮಾ. 19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಅದರ ಭೂಮಿ ಪೂಜೆಯು ಇತ್ತೀಚಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಬಿ ಶೆಟ್ಟಿ , ಹಿರಿಯ ಕಾರ್ಯಕರ್ತರಾದ ಪುಂಡಲೀಕ ಸುವರ್ಣ, ದೇವದಾಸ್ ಶೆಟ್ಟಿ, ಚಂದ್ರಹಾಸ್ ಕೊಟ್ಟಾರಿ, ವಾರ್ಡ್ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಬೂತ್ ಅಧ್ಯಕ್ಷರುಗಳಾದ ಗಣೇಶ್ ಕೊಟ್ಟಾರಿ, ಪ್ರಮೋದ್ ಕೊಟ್ಟಾರಿ, ದಿನೇಶ್ ಕುಲಾಲ್, ಸೋಮಶೇಖರ್, ಗಣೇಶ್, ಕಾರ್ಯದರ್ಶಿ ಲೋಕೇಶ್, ನಾರಾಯಣ ಕುಂದರ್, ಪ್ರಮುಖರಾದ ಪ್ರವೀಣ್ ನಿಡ್ಡೆಲ್, ಲಲಿತಾ, ಪ್ರೀತಾ ಕಾಮತ್, ತರುಣ್, ಪೂಜಾ, ಪ್ರೇಮಲತಾ ನಾಯ್ಕ, ಲೋಲಾಕ್ಷಿ, ನಟೇಶ್, ಸೀತಾರಾಮ್ ಶೆಟ್ಟಿ, ಯೋಗೀಶ್, ಮುರಳೀಧರ, ಪುರುಷೋತ್ತಮ್, ಪ್ರಿಯತ್, ನಳಿನಿ, ಪೂರ್ವಿ, ಶರತ್, ಶಶಿಕಲಾ, ಕುಶಾಲ, ಚೈತ್ರ, ನಮ್ರತ, ಮೀರಾ, ಜೀವಿತ್, ಸಂಭ್ರಮ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು, ಮಾ.18 : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್‌ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆ ವೇದಿಕೆಯಲ್ಲಿ ಮಾ. 21ರಂದು ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಪೂರ್ವದಲ್ಲಿ 45 ನಿಮಿಷಗಳ ಕಾಲ ಸಭಾ ಕಾರ್ಯಕ್ರಮ ನಡೆಯಲಿದ್ದು,ಕಾರ್ಯಕ್ರಮವನ್ನು ದ.ಕ. ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸಲಿರುವರು. ಶಾಸಕರಾದ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ. ಎನ್. ವಿನಯ ಹೆಗ್ಡೆಯವರಿಗೆ ಅರ್ಪಿಸಲಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ,…

Read More

ಬೆಳ್ತಂಗಡಿ,ಮಾ.17 : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ಆದೇಶದಂತೆ, 6 ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾರ್ಚ್ 16ರಂದು ಆದೇಶ ಹೊರಡಿಸಿದ್ದಾರೆ.ಗಡಿಪಾರು ಅವಧಿಯು ಮಾರ್ಚ್16ರಿಂದ ಸೆಪ್ಟಂಬರ್ 16ರವರೆಗೆ 6 ತಿಂಗಳು ಕಾಲಾವಧಿಯನ್ನು ಹೊಂದಿದೆ . ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಹೊಸ ಆದೇಶ ಹೊರಡಿಸಲು 3 ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

Read More

ಮಂಗಳೂರು,ಮಾ.16 : ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ ಇದರ ವಿವಿಧ ಅಭಿವೃದ್ಧಿ ಯೋಜನೆಗಗಳಿಗೆ ಆಧಾರವಾಗಿ ಸಂಗೀತಗಾರ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ . ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ = ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.

Read More

ಬ್ರಹ್ಮಾವರ, ಮಾ. 15 : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ಮಾ.13, ಶುಕ್ರವಾರ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ. ಮಾ.13ರಂದು ಮಧ್ಯಾಹ್ನ ವೇಳೆ ಶಿರೂರು ಮೂರು ಕೈ ಕಡೆಯಿಂದ ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ನಾಯಿ ಅಡ್ಡ ಬಂದಿದ್ದು, ಚಾಲಕ ನರಸಿಂಹ ಪೂಜಾರಿ ರಿಕ್ಷಾವನ್ನು ಒಮ್ಮೆಲೆ ಎಡಕ್ಕೆ ಚಲಾಯಿಸಿದ್ದರಿಂದ, ರಿಕ್ಷಾದ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.14ರಂದು ಮೃತಪಟ್ಟರು ಎಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು.ಮಾ.14 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 57ನೇ ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿಗೊಳ್ಳಲಿದ್ದು, ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಇತ್ತೀಚಿಗೆ ಗುದ್ದಲಿ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ರೇವತಿ ಶ್ಯಾಂ ಸುಂದ‌ರ್ ಶೆಟ್ಟಿ, ಪ್ರಮುಖರಾದ ದೀಪಕ್ ಪೈ, ಅಮಿತ್, ಶಬರಿ ಶೆಟ್ಟಿ, ಶೈಲೇಶ್ ಶೆಟ್ಟಿ, ಅರುಣ್ ಕೊಟ್ಟಾರಿ, ಅನಿಲ್ ಕೊಟ್ಟಾರಿ, ಜಯಶ್ರೀ ಕೊಟ್ಟಾರಿ, ದೀಪಕ್ ಸುವರ್ಣ, ಉಷಾ, ಗಾಯತ್ರಿ, ಶೈಲೇಶ್ ಶೆಟ್ಟಿ, ಸುರೇಶ್, ಪ್ರವೀಣ್ ನಿಡ್ಡೆಲ್, ಲಲಿತಾ ಕೊಟ್ಟಾರಿ, ನಿತಿನ್, ವಿಖ್ಯಾತ್ ಶೆಟ್ಟಿ, ವಿನಯ್, ಸೇರಿದಂತೆ ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಬೆಳ್ತಂಗಡಿ, ಮಾ. 13 : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟಿನ ಗುಂಡ್ಯ ಸಮೀಪ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧರ್ ಮರಕಡ, ಜನಾರ್ದನ ಕೆರಿಮಾರ್ ಸಾವನ್ನಪ್ಪಿದ್ದು ಸುರೇಶ್ ಎಂಬವರು ಗಂಭೀರವಾಗಿ ಗಾಯಗೊಂಡ ದ್ದು ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More