Author: admin

ಕಠ್ಮಂಡು, ಫೆ. 23 : ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಉರುಳಿ ಬಿದ್ದಿರುವುದರಿಂದ 18 ಜನ ಸಾವನ್ನಪ್ಪಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ. ಈ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಧಾಡಿಂಗ್ ಜಿಲ್ಲೆಯ ಗಜುರಿ ಸಮೀಪ ತ್ರಿಶೂಲಿ ನದಿಗೆ ಪ್ರಯಾಣಿಕರ ಬಸ್ ಉರುಳಿದೆ. ಪೋಖರಾದಿಂದ ಕಠ್ಮಂಡುವಿಗೆ ಬರುತ್ತಿದ್ದ ಬಸ್ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಪೃಥ್ವಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಇಳಿಜಾರಿನಲ್ಲಿ ಉರುಳಿ ನದಿಯ ದಡದಲ್ಲಿ ಬಿದ್ದಿದೆ. ಬಸ್‌ನಲ್ಲಿ ಒಟ್ಟು 40 ರಿಂದ 45 ಪ್ರಯಾಣಿಕರು ಇದ್ದರು.ಅಪಘಾತ ಸ್ಥಳದಿಂದ 18 ಮೃತದೇಹಗಳನ್ನು ಹೊರತೆಗೆದಿರುವುದಾಗಿ ನೇಪಾಳ ಸಶಸ್ತ್ರ ಪೊಲೀಸ್ ಪಡೆ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ ಮಾಹಿತಿ ನೀಡಿದ್ದಾರೆ. ಬಸ್ಸಿನಿಂದ 28 ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನೇಪಾಳ ಸೇನೆ, ನೇಪಾಳ ಸಶಸ್ತ್ರ ಪೊಲೀಸ್…

Read More

ಮಂಗಳೂರು,ಫೆ.22 : ಫೆ.27ರಂದು ಬಿರ್ದ್ ದ ಕಂಬುಲ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಸಿನಿಮಾ ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮಾತಾಡಿ, ನಾನು 50 ಸಿನಿಮಾಗಳನ್ನು ಎಲ್ಲ ಭಾಷೆಯಲ್ಲೂ ಮಾಡಿದ್ದೆ. ನನಗೆ ಒಮ್ಮೆ ಗುಣಪಾಲ ಕಡಂಬ ಅವರು ಪುತ್ತೂರು ಕಂಬಳಕ್ಕೆ ಕರೆದಿದ್ರು. ಈ ವೇಳೆ ಕಂಬಳ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡ್ಬೇಕು ಅಂತ ಯೋಚನೆ ಬಂತು. ಹೀಗಾಗಿ ಅರುಣ್ ರೈ ಅವರಲ್ಲಿ ಸಿನಿಮಾ ಬಗ್ಗೆ ಹೇಳಿದ್ದೆ. ಅಲ್ಲಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಪರ್ಕಿಸಿ ಸಿನಿಮಾಕ್ಕೆ ಸಂಭಾಷಣೆ ಬರೆಯಲು ಹೇಳಿದೆವು. ಅಲ್ಲಿಂದ ಶುರುವಾದ ಈ ಸಿನಿಮಾ ಜರ್ನಿ ಈಗ…

Read More

ಮಂಗಳೂರು, ಫೆ.21: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್.ನಾಯಕ್ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ ಗಾಯನ ಜುಗಲ್‌ಬಂಧಿ ’ ಮತ್ತು ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮಗಳು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ ಎಂದರು. ಪೂರ್ವಾರ್ಧದಲ್ಲಿ ಯಲ್ಲಾಪುರದ ವಿಭಾ ಹೆಗ್ಡೆ ಮತ್ತು ಬೆಂಗಳೂರಿನ ಶಿವಾನಿ ಮಿರಾಜ ಇವರಿಂದ ಶಾಸ್ತ್ರೀಯ ಗಾಯನ ‘ಜುಗಲ್ ಬಂಧಿ’ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಹಾರ್ಮೋನಿಯಂನಲ್ಲಿ ಮಂಗಳೂರಿನ ಮೇಧಾ ಜಿ ಭಟ್ ಮತ್ತು ಭೋಪಾಲ್ನ ವಿಜೇತಾ ಹೆಗ್ಡೆ ಅವರು ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು. ಉತ್ತಾರಾರ್ಧದಲ್ಲಿ ಮುಂಬೈನ ಡಾ.ಸಂಗೀತ ಶಂಕರ್, ರಾಗಿಣಿ ಶಂಕರ್ ಮತ್ತು ನಂದಿನಿ ಶಂಕರ್ ಅವರಿಂದ ‘ವಯೋಲಿನ್ ಟ್ರಿಯೋ’…

Read More

ಮಂಗಳೂರು, ಫೆ.20 : ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಲಿದೆ ಎಂದುm ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರದಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆ. 24ರಂದು ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅಭಿವಂದನಾ ಭಾಷಣ ಮಾಡಲಿದ್ದಾರೆ, ಶಾಸಕ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ…

Read More

ಮಂಗಳೂರು, ಫೆ. 20 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ನಿ ಅಸೋಸಿಯೇಶನ್ ವತಿಯಿಂದ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ’ಸ್ಮತಿ ಸಂಗಮ 2026′ ಅನ್ನು ಮಾ.1ರಂದು ಮಂಗಳಗಂಗೋತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜಾರಾಮ್ ರಾವ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ,ಬೆಳಗ್ಗೆ 8.30ರಿಂದ 10.30ರವರೆಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎ.ಎಂ. ಖಾನ್, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು. 11.45ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಬಹುಮಾನ ವಿತರಣೆ ಮತ್ತುಸಮಾರೋಪ ಕಾರ್ಯಕ್ರಮ, ಅಪರಾಹ್ನ 3.30ರಿಂದ ಸಂಜೆ 4.30ರವರೆಗೆ ಹಳೆ ವಿದ್ಯಾರ್ಥಿಗಳ ವಿಭಾಗವಾರು ಸಂವಾದ ನಡೆಯಲಿದೆ.…

Read More

ಮಂಗಳೂರು,ಫೆ.19 : ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುತ್ತಿರುವ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆಯಾಗಿರುವ ‘ನಾವು ವಿಶ್ವ ಕನ್ನಡಿಗರು (ನಾವಿಕ)’ ಇದರ ಆಶ್ರಯದಲ್ಲಿ 2027ರ ಸೆಪ್ಟೆಂಬರ್ 3 ರಿಂದ 5 ನೇ ತಾರೀಕಿನವರೆಗೆ ಅಮೇರಿಕಾದ ಅಟ್ಲಾಂಟಾ ರಾಜ್ಯದ, ಸೌತ ಕನ್ವೆನ್ಸನ್ ಸೆಂಟರ್ ಅಟ್ಲಾಂಟಾದಲ್ಲಿ,”ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ ನಡೆಯಲಿದೆ ಎಂದು ನಾವಿಕ ಸಂಘಟನೆಯ ಅಧ್ಯಕ್ಷೆಯಾದ ಡಾ|ಅನ್ನಪೂರ್ಣ ಭಟ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾವಿಕ ಸಂಘಟನೆಯು ಈ ವರ್ಷದ ನವೆಂಬರ್ ತಿಂಗಳಿನಲ್ಲಿ ದುಬೈಯಲ್ಲಿ ಕನ್ನಡ ಸಮ್ಮೇಳನವನ್ನು ನಡೆಸಲು ಈಗಾಗಲೇ ರೂಪುರೇಷೆಯನ್ನು ಹಾಕಲಾಗಿದೆ ಎಂದರು. ಸಂಘವು ವಿಶ್ವದ ಬೇರೆ ಬೇರೆ ಭಾಗಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ, ಆರ್ಥಿಕತೆ, ಸಾಮಾಜಿಕ ಸುಧಾರಣೆ, ಉದ್ಯಮಶೀಲತೆ, ಪರಿಸರ, ಶಿಕ್ಷಣ, ಮುಂತಾದ ಕ್ಷೇತ್ರಗಳಲ್ಲಿ ದುಡಿದು ಅನುಭವ ಮತ್ತು ಆಲೋಚನೆ ಇರುವ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕನ್ನಡ ಮತ್ತು ಕನ್ನಡಿಗರ ಭವಿಷ್ಯದ ಕಾರ್ಯಸೂಚಿಯನ್ನು ಸಿದ್ಧಪಡಿಸುವ ಉದ್ದೇಶವಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಐಎಂಎ ಜಿಲ್ಲಾ…

Read More

ಬೆಂಗಳೂರು, ಫೆ. 18 : ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವು ತನ್ನ ಮೊಟ್ಟಮೊದಲ ವಿದ್ಯಾರ್ಥಿವೇತನ ದಿನಾಚರಣೆಯಾದ “ರೂಟ್ಸ್ ಟು ವಿಂಗ್ಸ್” ಅನ್ನು ಶುಕ್ರವಾರದಂದು ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮರ್ಕ್ ಕೆಜಿಎಎ ಸಂಸ್ಥೆಯ ಆರ್ ಅಂಡ್ ಡಿ ವಿಭಾಗದ ಮುಖ್ಯಸ್ಥರಾದ ಡಾ. ಮಾರ್ಕಸ್ ಓಬ್ಕಿರ್ಚರ್ ಅವರು ಮಾತನಾಡುತ್ತಾ, ವಿದ್ಯಾರ್ಥಿವೇತನವು ವಿದ್ಯಾರ್ಥಿಗಳ ಮೇಲಿಟ್ಟಿರುವ ನಂಬಿಕೆಯಾಗಿದ್ದು, ಬುದ್ಧಿವಂತಿಕೆ ಮತ್ತು ಪ್ರಾಮಾಣಿಕತೆಯಿಂದ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಅವರು ಕರೆ ನೀಡಿದರು. ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರೆ. ಫಾದರ್ ಡಯೋನಿಶಿಯಸ್ ವಾಜ್ ಅವರು ಅಧ್ಯಕ್ಷೀಯ ಭಾಷಣ ದಲ್ಲಿ, ವಿದ್ಯಾರ್ಥಿಗಳನ್ನು ಮೌಲ್ಯಾಧಾರಿತ ಶಿಕ್ಷಣದ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು ಸಂಸ್ಥೆಯ ಧ್ಯೇಯ ವಾಗಿದೆ ಎಂದು ಹೇಳಿದರು. ಕುಲಪತಿಗಳಾದ ಡಾ. ಫಾದರ್ ವಿಕ್ಟರ್ ಲೋಬೋ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಸಂಚಾಲಕರು ಹಾಗೂ ಹಣಕಾಸು ಅಧಿಕಾರಿಗಳಾದ ಫಾದರ್ ಅರುಣ್ ಪ್ರಶಾಂತ್ ಡಿಸೋಜಾ ಅವರು ವಂದನಾರ್ಪಣೆ ಸಲ್ಲಿಸಿದರು. ಈ ವಿಶೇಷ ದಿನದಂದು ವಿವಿಧ ವರ್ಗಗಳ…

Read More

ಮಂಗಳೂರು,ಫೆ.17: ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮಾತಾಡಿ, ನಮ್ಮ ಬ್ಯಾಂಕ್ ಬೇರೆ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು ಹಿಂದಿನ ವರ್ಷಗಳಲ್ಲಿ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಾ ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರು ಮಾತಾಡಿ, ಐಎಂಪಿಎಸ್ ಮೂಲಕ ಶೀಘ್ರವಾಗಿ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ…

Read More

ಮಂಗಳೂರು, ಫೆ.16 : ಮಂಗಳೂರಿನ ಶಕ್ತಿನಗರದ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ವು ಫೆ.18 ರಿಂದ 24 ರವರೆಗೆ ನಡೆಯಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯರು ಹಾಗು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ಮೋನಪ್ಪ ಭಂಡಾರಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.22 ರಂದು ಶಕ್ತಿನಗರದ ಮುತ್ತಪ್ಪ ಕ್ಷೇತ್ರದಲ್ಲಿ ತಂತ್ರಿ ಬ್ರಹ್ಮಶ್ರೀ ಪೂಂತೋಟತ್ತಿಲ್ ಪುಡವರ್ ಪರಮೇಶ್ವರನ್ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು. ಫೆ.18 ರಂದು ಬೆಳಿಗ್ಗೆ 9 ಗಂಟೆಗೆ ಉಗ್ರಾಣದಲ್ಲಿ ಗಣಹೋಮ, ಸಾಯಂಕಾಲ 4 ಗಂಟೆಗೆ ಹಸಿರು ಹೊರೆಕಾಣಿಕೆ, ಸಾಯಂಕಾಲ 6.15 ಕ್ಕೆ ಉಗ್ರಾಣ ಉದ್ಘಾಟನೆ, 6.30 ಕ್ಕೆ ಕುಣಿತ ಭಜನೆ,6.45 ಕ್ಕೆ ದ್ವಾರ ಉದ್ಘಾಟನೆ ಮತ್ತು 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಒಡಿಯೂರ್ ಗುರುದೇವದತ್ತ ಸಂಸ್ಥಾನಮ್ ನ…

Read More

ಬೆಂಗಳೂರು,ಫೆ. 15 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವಾದಲ್ಲಿ ಐದು ಮಂದಿ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ನಡೆದಿದೆ. ಅತೀ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 43 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ಅಪಘಾತವಾದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲದ ಜಿಂದಾಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತವಾದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಲಲಿತ್ (22) ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವರನ್ನು ತಕ್ಷಣ ನೆಲಮಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.…

Read More