Author: admin

ಉಪ್ಪಿನಂಗಡಿ, ಮೇ. 10 : ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇ 9, ಶನಿವಾರ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ. ಮೃತರನ್ನು ಬಿಹಾರ ಮೂಲದ ರಾಮಚಂದ್ರ ಶಿಕಾರಿ (55) ಎಂದು ಗುರುತಿಸಲಾಗಿದೆ. ಗಾಂಧಿಪಾರ್ಕ್ ಬಳಿ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ರಸ್ತೆ ಬದಿ ಮಲಗಿದ್ದ, ಅವರು ಮಲಗಿರುವುದು ಅರಿವಿಗೆ ಬಾರದೆ ಆತನ ಮೇಲೆ ರೋಡ್ ರೋಲರ್ ಚಲಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲ್ಕತ್ತಾ, ಮೇ. 09 : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಯ ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ಅಗ್ನಿಮಿತ್ರಾ ಪೌಲ್, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.

Read More

ಕಡಬ, ಮೇ. 08 : ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ(15) ಹಾಗೂ ಸುನೀತಾ(21) ಎಂದು ಗುರುತಿಸಲಾಗಿದೆ. ರಜೆ ಇರುವುದರಿಂದ ಸ್ನೇಹಿತರ ತಂಡದೊಂದಿಗೆ ನದಿಗೆ ಆಗಮಿಸಿದ್ದ 5 ಮಂದಿ ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದಾರೆ.ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ಮುಳುಗಿ ಸಾವನ್ನಪ್ಪದ್ದಾರೆ ಎಂದು ವರದಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ.

Read More

ಮಂಗಳೂರು, ಮೇ o7: : ಮೊಗೇರ ಸಂಘ (ರಿ) ಮಂಗಳೂರು ತಾಲೂಕು ಇದರ ನೇತೃತ್ವದಲ್ಲಿ ನಗರದ ಕೂಳೂರು ಪಂಜಿಮೊಗರುವಿನ ಮುಖ್ಯ ರಸ್ತೆಯ ಪಕ್ಕದಲ್ಲಿ ನಿರ್ಮಾಣಗೊಂಡಿರುವ “ಮೊಗೇರ ಸೌಧ” ಬಹುಮಹಡಿಗಳ ಕಟ್ಟಡವು 2026 ಮೇ 10 ರಂದು ಉದ್ಘಾಟನೆಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಮೊಗೇರ ಸಂಘದ ಅಧ್ಯಕ್ಷರಾದ ಸೀತಾರಾಮ ಕೊಂಬಾಡಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದಲ್ಲಿ ಸಮಾಜ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದು, ಸಮುದಾಯ ಭವನದ ಉದ್ಘಾಟನೆಯನ್ನು ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್, ಮೊಗೇರ ಸೌಧ ಬಹುಮಹಡಿ ಕಟ್ಟಡ ಸಂಕೀರ್ಣದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ, ಸ್ವ ಉದ್ಯೋಗ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ನಾರಾಯಣ ಸ್ವಾಮಿ. ಸಂಘದ ನೂತನ…

Read More

ಮಂಗಳೂರು, ಮೇ 6: ಮೂಡುಬಿದಿರೆಯ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ಡರ್ಟ್ ಫೆಸ್ಟ್ 2026 ಮೇ 10ರಂದು ಮೂಡುಬಿದಿರೆಯ ಸ್ವರಾಜ್ ಮೈದಾನದ ಫಾರ್ಚೂನ್ ಮೈದಾನದಲ್ಲಿ ನಡೆಯಲಿದೆ ಎಂದು  ಕೆಟಿಸಿ ನಝೀರ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 4ನೇ ವರ್ಷದ ಸ್ಪರ್ಧೆ ನಡೆಯದ್ದು ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ಗೋವಾದಿಂದ ಸುಮಾರು 60ರಿಂದ 100 ಕಾರುಗಳು ಭಾಗವಹಿಸಲಿವೆ ಎಂದರು. ಪ್ರವೇಶ ಶುಲ್ಕ 2,500 ರೂ. ಇರಲಿದೆ. ವಿಜೇತರಿಗೆ ನಗದು ಹಾಗೂ ಟ್ರೋಫಿಗಳನ್ನು ನೀಡಲಾಗುತ್ತದೆ. ಫುಡ್ ಸ್ಟಾಲ್ ಗಳು,ಮನೋರಂಜನೆಯ ಕಾರ್ಯಕ್ರಮಗಳು ಸೇರಿದಂತೆ ಹಲವು ವಿಶೇಷತೆಗಳು ಇರಲಿವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ  ಮಹಮ್ಮದ್ ತಲ್ಲ ಉಪಸ್ಥಿತರಿದ್ದರು.

Read More

ಸುರತ್ಕಲ್, ಮೇ 06 : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು  ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನವಾಗಿ ರೂ. 1,00,005 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 50,005 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಆಕರ್ಷಕ ಟ್ರೋಫಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ…

Read More

ಮಂಗಳೂರು, ಮೇ. 04  : ಪುತ್ತೂರು ಬ್ರದರ್ಸ್ ಎಂಟರ್ಟೇನ್ಮೆಂಟ್ ರವರ ಸಸ್ಪೆನ್ಸ್ ಥ್ರಿಲ್ಲರ್ ಕನ್ನಡ ಚಲನಚಿತ್ರ ‘ಮಂಗಮಾಯ’ ಇದೇ ಮೇ 8 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಪ್ರಸಾದ್ ಕೆ.ಎಸ್.ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾವಿದರಿಗೆ ಯಾವುದೇ ಮೇಕಪ್ ಇಲ್ಲದೆ, ಹೀರೋಯಿನ್ ಇಲ್ಲದೆ ಒಂದೇ ಲೊಕೇಶನ್ ನಲ್ಲಿ 43 ದಿನಗಳ ಕಾಲ ಒಂದೇ ಶೆಡ್ಯೂಲ್ ನಲ್ಲಿ ಚಿತ್ರೀಕರಿಸಲಾದ ಸಿನೆಮಾವಾಗಿದೆ ಎಂದರು. ಈ ಚಿತ್ರದಲ್ಲಿ ರಾಧೇಶ್ ಶೆಣೈ, ರಂಜನ್ ಶೆಟ್ಟಿ, ಪ್ರಕಾಶ್ ಶೆಣೈ, ಪ್ರಸನ್ನ ಪುತ್ತೂರು, ಮಹಮ್ಮದ್ ಹನೀಫ್, ಅಕ್ಷತ್ ಅಮಿನ್ ,ಚಂದನ್ ಕುಮಾರ್, ಬಿ.ಅರುಣ್ ಶೆಣೈ, ಚೇತನ್ ಪುತ್ತೂರು, ವಿಜಯಲಕ್ಷ್ಮಿ ಎಮ್, ಮಂಜುನಾಥ್ ಎಂ.ಎನ್, ಸಿದ್ದು ಮತ್ತಿತರರು ನಟಿಸಿದ್ದಾರೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಸನ್ನ ಪುತ್ತೂರು, ರಾಧೇಶ್ ಶೆಣೈ ಉಡುಪಿ,ಅಕ್ಷತ್ ಅಮೀನ್ ಉಪಸ್ಥಿತರಿದ್ದರು.

Read More

ನವದೆಹಲಿ, ಮೇ. 03 : ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ರವಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ 2ನೇ ಮಹಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ಹರಡಿತ್ತು. ಕಟ್ಟಡದ 2ನೇ ಮಹಡಿಯಲ್ಲಿ ನಸುಕಿನ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ 14 ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ. ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕಟ್ಟಡದ ಹಲವು ಭಾಗಗಳು ಸುಟ್ಟುಹೋಗಿ, ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿತ್ತು. ಕಟ್ಟಡದಿಂದ ಹಲವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಕಠ್ಮಂಡು, ಮೇ. 02 : ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ಏ.30ರಂದು ನಡೆದಿದೆ. ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ತೆರಳುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡಚನೆಯುಂಟಾಗಿದೆ. ಈ ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

Read More

ಮಂಗಳೂರು,ಮೇ. 01 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 38ನೇ ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.1.88 ಕೋಟಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು ಈ ಸಂದರ್ಭದಲ್ಲಿ ಜೆಸೆಲ್ ಡಿಸೋಜ, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ನವೀನ್ ಡಿಸೋಜ, ಪ್ರವೀಣ್ ಶೇಟ್ ಬೆಂದೂರ್ ವೆಲ್, ದಯಾನಂದ ಶೆಟ್ಟಿ, ನವೀನ್ ಶೆಣೈ, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Read More