Author: admin

ಮಂಗಳೂರು, ಜೂ. 20 : ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯ 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯು ಹತ್ತು ಹಲವು ಯೋಜನೆಗಳ ಅನುಷ್ಠಾನ, ಪ್ರಸ್ತುತ ದಾಖಲಿರುವ 375 ನಿವಾಸಿಗಳ ಅಗತ್ಯತೆಗಳು, ಮನೋರೋಗ ಚಿಕಿತ್ಸೆ ಡಿ ಎ ಡಿಕ್ಷನ್ ಹಾಗೂ ವಿಶೇಷ ಅಗತ್ಯವುಳ್ಳ ಕುಟುಂಬ ಸದಸ್ಯರ ಶಿಕ್ಷಣ ಹಾಗೂ ಇತರ ಯೋಜನೆಗಳ ಸಹಾಯಾರ್ಥ ಕಾರ್ಯಕ್ರಮದ ರೂವಾರಿ ಕೆವಿನ್ ಮಿಸ್ಕಿತ್ ಅವರ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಇದೇ ಭಾನುವಾರ 21-6-2026 ರಂದು ಮಂಗಳೂರಿನ ಟಾನ್ ಹಾಲ್ ನಲ್ಲಿ ಸಂಜೆ 6.00 ಘಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು,ಜೂ. 20  : ಕಲ್ಕೂರ ಪ್ರತಿಷ್ಠಾನ, ಮಂಗಳೂರು, ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ ಮಾವು – ಹಲಸು ಮೇಳ ಜೂ. 20 ಶನಿವಾರ ಹಾಗೂ 21 ಆದಿತ್ಯವಾರದಂದು 2 ದಿನಗಳ ಕಾಲ ಮುಂಜಾನೆ 7ರಿಂದ ಸಂಜೆ 7ರ ವರೆಗೆ ಕದ್ರಿ ಕಂಬಳ, ಮಲ್ಲಿಕಾ ಬಡಾವಣೆಯಲ್ಲಿರುವ “ಮಂಜು ಪ್ರಸಾದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆರಂಭದ ದಿನ ಸಭಾಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಶ್ರೀ ಶ್ರೀ ಜಿತಕಾಮಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ ದೀಪ ಪ್ರಜ್ವಲನೆ ಮಾಡಲಿರುವರು. ಡಾ| ಎಂ.ಬಿ. ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಜೀವರಾಜ ಸೊರಕೆಯವರು ಉದ್ಘಾಟನೆ ಮಾಡಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಿರುವರು ಎಂದರು. ಎರಡನೇ ದಿನದ ಕಾರ್ಯಕ್ರಮದ ಅಂಗವಾಗಿ…

Read More

ಮಂಗಳೂರು,ಜೂ. 19  : ಕರ್ನಾಟಕ ನಾಯರ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯಕುಮಾರ್ , ಉಪಾಧ್ಯಕ್ಷರಾಗಿ ವಾಸಂತಿ ನಾಯರ್, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್, ಬೋರ್ಡ್ ಮೆಂಬರುಗಳಾಗಿ ವಿಜಯಕುಮಾರ್, ಎಮ್.ವಿ. ರಾಜನ್, ಎ.ಎಸ್.ಮೋಹನ್ ರವರು, ಸಮಿತಿಯ ಸದಸ್ಯರಾಗಿ ಜೋತಿಷ್ ಕುಮಾರ್, ಜಯಲಕ್ಷ್ಮೀ ಚಂದ್ರಮೋಹನ್ , ಮಣಿಕಂಠನ್, ವಿನೋದ್‌ವಿನೋದ್‌ರಾಜ್, ಹರೀಶ್ ಗೋವಿಂದ್, ದೇವರಾಜ್ , ವಿನಯನ್ ನಾಯರ್ ಆಯ್ಕೆಗೊಂಡರು. ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಜಾತಾ ನಾಯರ್, ಕಾರ್ಯದರ್ಶಿಯಾಗಿ ಶ್ರೀಜಾ ನಂಬಿಯಾರ್, ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್, ಜತೆಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್, ಉಡುಪಿ ಅವರು…

Read More

ವಿಟ್ಲ, ಜೂ. 18 : ಲಾರಿಯ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಚಾಲಕ ಮಹೇಶ್ ಅವರು ಲಾರಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ವೈಫಲ್ಯವನ್ನು ಸರಿಪಡಿಸಲು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದೆ ಚಲಿಸಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕೂಡಲೇ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಸೇರಿ ಲಾರಿಯ ಅಡಿಯಿಂದ ಮೃತದೇಹವನ್ನು ತೆರವುಗೊಳಿಸಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾನೂನು ಪ್ರಕ್ರಿಯೆ ಮುಂದುವರೆದಿದೆ.

Read More

ಮಂಗಳೂರು,ಜೂ. 17 :  ನಿರ್ದೇಶಕ ಪಿ.ವಿ. ಪ್ರದೀಪ್ ಕುಮಾರ್ ಅವರ ಕಲ್ಪನೆ ಹಾಗೂ ಸಾರಥ್ಯದಲ್ಲಿ ಮೂಡಿಬಂದಿರುವ ಎಐ  ನಿರ್ಮಿತ ಕಿರುಚಿತ್ರ ‘ಅದಿತಿ’ ಇದರ ಪ್ರೀಮಿಯರ್ ಶೋ ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಪಿ.ವಿ. ಪ್ರದೀಪ್ ಕುಮಾರ್ ಅವರು ಮಾತಾಡಿ, ‘ಅದಿತಿ’ ಚಿತ್ರವು ಒಂದು ವಿಭಿನ್ನ ಶೈಲಿಯ ಸಸ್ಪೆನ್ಸ್, ಆಕ್ಷನ್ ಹಾಗೂ ಎಮೋಷನಲ್ ಲವ್ ಸ್ಟೋರಿಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಸ್ಪೆನ್ಸ್ ಮತ್ತು ರಹಸ್ಯಗಳ ಜೊತೆಗೆ ಪ್ರೇಮಕಥೆಯೂ ಇದೆ ಎಂದರು. ‘ಅದಿತಿ’ ಚಿತ್ರದ ಮೂಲಕ ದೊಡ್ಡ ಮಟ್ಟದ ಚಿತ್ರರಂಗದ ಪ್ರಯಾಣಕ್ಕೆ ಹೆಜ್ಜೆ ಇಡುತ್ತಿದ್ದೇನೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ, ಹೊಸ ತಂತ್ರಜ್ಞಾನವಾದ ಎ ಐ ಸಹಾಯದೊಂದಿಗೆ ಈ ಚಿತ್ರದ ದೃಶ್ಯಗಳನ್ನು ಕಲ್ಪಿಸಿಕೊಳ್ಳಲಾಗಿದೆ. ಕಥೆಗಾರನೊಬ್ಬನ ಕಲ್ಪನೆಗೆ ತಂತ್ರಜ್ಞಾನ ಸಾಥ್ ನೀಡಿದಾಗ ‘ಅದಿತಿ’ ಹೇಗೆ ಮೂಡಿಬಂದಿದ್ದಾಳೆ ಎಂಬುದನ್ನು ಮಾಧ್ಯಮಗಳ ಮುಂದೆ ತರಲು ಹೆಮ್ಮೆಯಾಗುತ್ತಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಪತ್ರಿಕಾ ಭವನದ ಅಧ್ಯಕ್ಷರು ಪಿಬಿ ಹರೀಶ್ ರೈ, ಮಂಗಳೂರು ಪಿಂಗಾರ ಪತ್ರಿಕೆಯ…

Read More

ಉಡುಪಿ, ,ಜೂ. 16 : ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ , ರಸ್ತೆ ಮಧ್ಯೆ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಸೋಮವಾರ ಬೆಳಗ್ಗೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಬಸ್ ಚಾಲನೆಯಲ್ಲಿರುವಾಗಲೇ ಅಸ್ವಸ್ಥಗೊಂಡು ಅವರು ತಕ್ಷಣ ಬಸ್ಸನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದರು. ಪರಿಸ್ಥಿತಿಯನ್ನು ಅರಿತ ಅವರು ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಆದರೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿ ಗಳು ಅಪಾಯದಿಂದ ಪಾರಗಿದ್ದಾರೆ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಶಾಲಾ ಸಿಬ್ಬಂದಿ ತಕ್ಷಣ ಚಾಲಕನಿಗೆ ಸಹಾಯ ಮಾಡಲು ಧಾವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು.

Read More

ಮಂಗಳೂರು, ಜೂ.15: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್ ಸಿಎ) ವತಿಯಿಂದ ನಡೆಯುವ ಪ್ರೀಮಿಯರ್ ಟಿ-20 ಕ್ರಿಕೆಟ್ ಪಂದ್ಯಾಟ ‘ಮಹಾರಾಜ ಟ್ರೋಫಿ-2026’ ಇದರಲ್ಲಿ ಪಾಲ್ಗೊಳ್ಳುವ ಕೋಸ್ಟಲ್ ಕಿಂಗ್ಸ್ ಮಂಗಳೂರು ಕ್ರಿಕೆಟ್ ತಂಡದ ಜೆರ್ಸಿ ಮತ್ತು ತಂಡದ ಗೀತೆ ಬಿಡುಗಡೆ ಕಾರ್ಯಕ್ರಮವು ಕೆಎಸ್ ಸಿಎ ಆಶ್ರಯದಲ್ಲಿ ಭಾನುವಾರ ನಗರದ ಹೋಟೆಲ್ ಸಭಾಂಗಣವೊಂದರಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಕ್ರಿಕೆಟ್ ತಂಡದ ನಾಯಕನಾಗಿ ಕರುಣ್ ನಾಯರ್ ಮತ್ತು ಉಪನಾಯಕನಾಗಿ ಶ್ರೇಯಸ್ ಗೋಪಾಲ್‌ನ್ನು ಆಯ್ಕೆ ಮಾಡಲಾಯಿತು. ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಮಾಲಕತ್ವವನ್ನು ಮಾನ್ಯತಾ ಡೆವಲಪರ್ ಪಡೆದುಕೊಂಡಿದೆ.ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯತಾ ಡೆವಲಪರ್ಸ್ ಮಾಲೀಕ ವಿನೋದ್ ನಾಯ್ಡು ಇದು ಕರಾವಳಿಯನ್ನು ಪ್ರತಿನಿಧಿಸುವ ತಂಡ ಆದ್ದರಿಂದ ಈ ತಂಡಕ್ಕೆ ಕೋಸ್ಟಲ್ ಕಿಂಗ್ಸ್ ಎಂದು ಹೆಸರು ಇಡಲಾಗಿದೆ ಎಂದರು. ಕೆಎಸ್ ಸಿಎ ವತಿಯಿಂದ ಜೂನ್ ಮತ್ತು ಜುಲೈನಲ್ಲಿ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯ ಮೈದಾನಗಳಲ್ಲಿ ಪಂದ್ಯಾಟಗಳು ನಡೆಯಲಿದೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮಂಗಳೂರು ವಲಯದ ಅಧ್ಯಕ್ಷ…

Read More

ಮಂಗಳೂರು,ಜೂ. 14  : ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು, ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದರು. ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್‌ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ. ಬ್ಯಾಂಕ್ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ ಅಗತ್ಯವೆಂದು…

Read More

ನವದೆಹಲಿ,ಜೂ. 13 : ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30ರಂದು ನಿವೃತ್ತರಾದ ನಂತರ ಧೀರಜ್ ಸೇಠ್ ಅವರು ಭಾರತೀಯ ಸೇನೆಯ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Read More

ನವದೆಹಲಿ, ಜೂ. 12 : ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಮುಂಜಾನೆ ಸುಮಾರು 2:30ರ ವೇಳೆಗೆ ತುಘಲಕಾಬಾದ್ನ ಐದು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ನೆಲಮಹಡಿಯಲ್ಲಿ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದಾಗಿ ಒಳಭಾಗದಲ್ಲಿ ದಟ್ಟ ಹೊಗೆ ಆವರಿಸಿತು. ಇದರಿಂದ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬರಲಾಗದೇ ಅಲ್ಲೇ ಸಿಲುಕಿಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ…

Read More