Subscribe to Updates
Get the latest creative news from FooBar about art, design and business.
Author: admin
ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ.ಸ್ಥಳೀಯ ನಿವಾಸಿಗಳು ಮತ್ತು ಅಗ್ನಿಶಾಮಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಜಾವಗಲ್ ನಿಂದ ಕುಂದಾಪುರಕ್ಕೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ಮೂಲಕ ಹಾದುಹೋಗುವಾಗ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಲಾರಿಯಲ್ಲಿದ್ದ ಚಾಲಕ ಮತ್ತು ವಾಹನದಲ್ಲಿದ್ದ ಇಬ್ಬರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು, ಜ.09 : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜ. 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಿಎ.ಜಗನ್ನಾಥ್ ಕಾಮತ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ 5ಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದೆ ಎಂದರು. ಜನವರಿ 11 ರಂದು ಭಾನುವಾರ ಜನ್ಮಶತಾಬ್ದಿಯ ಮಂಗಳೋತ್ಸವ ನಡೆಯಲಿದ್ದು, ಮಧ್ಯಾಹ್ನ 3.30 ಕ್ಕೆ ಶ್ರೀ ಕಾಶೀಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಊರ, ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ,ಅಲ್ಲಿಂದ ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಯು ಕೊಂಚಾಡಿಯಿಂದ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ,ಬಿಜೈ, ಕೆಎಸ್ ಆರ್ ಟಿಸಿ, ಲಾಲ್ ಭಾಗ್, ಎಂ.ಜಿ.ರಸ್ತೆ, ಪಿ.ವಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ…
ಬಿಕರ್ನಕಟ್ಟೆ, ಜ.07 : ಇನ್ಫೆಂಟ್ ಜೀಸಸ್ ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ, ಜನವರಿ 7 ಬುಧವಾರದಂದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿತ್ತು. ನೇತ್ರಶಾಸ್ತ್ರಜ್ಞರಾದ ಡಾ. ಕ್ರಿಸ್ಮಾ, ಡಾ. ವಿಜಿತಾ ಮತ್ತು ಡಾ. ಮಹೇಶ್ ಸೇರಿದಂತೆ ಮಂಗಳೂರಿನ ಡಾ. ಅಗರ್ವಾಲ್ ಐ ಕ್ಲಿನಿಕ್ ನ ವೈದ್ಯರ ತಂಡವು ತಮ್ಮ ಸಹಾಯಕ ಸಿಬ್ಬಂದಿಯೊಂದಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ ಫಲಾನುಭವಿಗಳಿಗೆ ಸೂಕ್ತ ಸರಿಪಡಿಸುವ ಕ್ರಮಗಳನ್ನು ಸೂಚಿಸಿತು. ಸಂಪರ್ಕದ ಭಾಗವಾಗಿ, ದೃಷ್ಟಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ 150 ಜೋಡಿ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಶಿಬಿರವನ್ನು ಸೇಂಟ್ ಜೋಸೆಫ್ ಮಠದ ಸುಪೀರಿಯರ್ ರೆವರೆಂಡ್ ಫಾದರ್ ಮೆಲ್ವಿನ್ ಡಿ’ಕುನ್ಹಾ ಮತ್ತು ಇತರ ಗಣ್ಯರು ಸಾಂಕೇತಿಕವಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ರೆವರೆಂಡ್ ಫಾದರ್ ವಿಲಿಯಂ ಮಿರಾಂದಾ ಅವರು ಸಭೆಯನ್ನು ಸ್ವಾಗತಿಸಿ,ಸಭೆಯನ್ನುದ್ದೇಶಿಸಿ…
ಮಂಗಳೂರು,ಜ.07 : ಮನಪಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರ ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ಸುಮಾರು 16.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆಯು ಮಂಜೂರಾಗಿದ್ದು ಇದೀಗ ಉದ್ಘಾಟನೆಗೊಳ್ಳುತ್ತಿರುವುದು ಸಂತಸ ತಂದಿದೆ. ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಕಲಿಯುವ ಮಕ್ಳಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಅರ್ಷಾದ್ ಪೋಪಿ, ಮಾಜಿ ಕಾರ್ಪೋರೇಟರ್ ಗಳಾದ ಶಂಸುದ್ದಿನ್, ಅಝೀಜ್ ಕುದ್ರೋಳಿ, ಪ್ರಮುಖರಾದ ದಿನೇಶ್ ಕಾಮತ್, ಅಮರ್ ಸುವರ್ಣ, ಕಬೀರ್ ಬಂದರ್, ಅಂಗನವಾಡಿ ಕೇಂದ್ರದ ಸಿಬ್ಬಂದಿಗಳು, ವಿವಿಧ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಮಂಗಳೂರು,ಜ. 06 : ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ.3, ಶನಿವಾರ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ಕೊರ್ಡೆಲ್ ಚರ್ಚ್ ನ ಸಹಾಯಕ ಧರ್ಮಗುರು ವಂ. ವಿಜಯ್ ಮೊಂತೆರೋ ಅವರು ಆಶೀರ್ವಾದ ನೀಡಿದರು. ಕೊರ್ಡೆಲ್ ಚರ್ಚ್ ನ ಉಪಾಧ್ಯಕ್ಷೆ ರೂತ್ ಕ್ಯಾಸ್ಟೆಲಿನೊ ಅವರು ಮೆರವಣಿಗೆಗೆ ಧ್ವಜ ಹಾರಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾಮಾಜಿಕ ಸೌಹಾರ್ದತೆ ಯನ್ನು ಉತ್ತೇಜಿಸುವ “ಸಹಬಾಳ್ವೆ” ಕಾರ್ಯಕ್ರಮ ಪುಣ್ಯಕ್ಷೇತ್ರದ ಆಂಗಣದಲ್ಲಿ ನಡೆಯಿತು. ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ , ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೇಟ್ ಪಿಂಟೊ ಹಾಗೂ ಮಾನವ ಹಕ್ಕುಗಳ ಹೋರಾಟಗಾರ, ವಕೀಲರು ದಿನೇಶ್ ಹೆಗಡೆ, ಉಳೇಪಾಡಿ ಭಾಗವಹಿಸಿದರು. ಸಮಾಜದಲ್ಲಿ ಸಹೋದರತ್ವ ಮತ್ತು ಏಕತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಸಂತ ಅಲೋಶಿಯಸ್ ವಿಶ್ವ ವಿದ್ಯಾನಿಲಯ…
ಬೈಕಂಪಾಡಿ, ಜ. 05 : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲೈವುಡ್ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರಿಯಲ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಎಂಬ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಕಂಪೆನಿಯಲ್ಲಿದ್ದ ಪ್ಲೈವುಡ್ಗಳು ಸುಟ್ಟು ಭಸ್ಮವಾಗಿದ್ದು, ಸುಮಾರು 1ಕೋ.ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಬೆಂಕಿ ಅವಘಡ ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ.ಪಣಂಬೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು, ಜ. 04 : ಧರ್ಮಪ್ರಾಂತ್ಯ ದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆಯು ಜ. 7, ಭಾನುವಾರ ನಗರದ ಮಿಲಾಗ್ರಿಸ್ ಚರ್ಚ್ ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ಚರ್ಚ್ ತನಕ ನಡೆಯಿತು. ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅವರು ಪ್ರವಚನ ನೀಡುತ್ತಾ, ಪರಮ ಪವಿತ್ರ ಪ್ರಸಾದದಲ್ಲಿ ನಾವು ಜಗತ್ತಿನ ಜ್ಯೋತಿಯಾಗಲು ಶಕ್ತಿಯನ್ನು ಪಡೆಯುತ್ತೇವೆ ಮತ್ತು ನಮ್ಮ ಜೀವನದ ಪ್ರತಿಯೊಂದು ಹಂತದಲ್ಲೂ ಕ್ರಿಸ್ತನ ಪ್ರೀತಿಯನ್ನು ಪ್ರತಿಬಿಂಬಿಸಲು ನಮಗೆ ಪ್ರೇರಣೆ ಸಿಗುತ್ತದೆ ಎಂದು ಹೇಳಿದರು. ಬಲಿಪೂಜೆಯ ನಂತರ, ಪವಿತ್ರ ಪ್ರಸಾದವನ್ನು ಹೊತ್ತ ಅಲಂಕೃತ ವಾಹನವು ನಗರದ ಹಂಪನಕಟ್ಟೆ, ಕ್ಲಾಕ್ ಟವರ್ ವೃತ್ತ, ಎ.ಬಿ. ಶೆಟ್ಟಿ ವೃತ್ತ ಮತ್ತು ನೆಹರು ವೃತ್ತದ ಮೂಲಕ ಸಾಗಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡರು, ರೊಸಾರಿಯೂ ಕೆಥೆಡ್ರಲ್ನಲ್ಲಿ ನಡೆದ ಆರಾಧನೆ ಮತ್ತು ಪ್ರಾರ್ಥನಾ ವಿಧಿಯನ್ನು…
ಮಂಗಳೂರು,ಜ.03 : ಉರ್ವ,ಹೊಗೆಬೈಲು ಬೈಕಾಡಿ ಪ್ರತಿಷ್ಠಾನ (ರಿ.) ವತಿಯಿಂದ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5 ರಂದು ಸೋಮವಾರ ಸಂಜೆ 4 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಭರತ್ ರಾಜ್ ಬೈಕಾಡಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೈಕಾಡಿ ಜನಾರ್ದನ ಆಚಾರ್ ಅವರ ಧೈಯೋದ್ದೇಶಗಳನ್ನು ಮುಂದುವರಿಸಿಕೊಂಡು ಹೋಗುವ ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ಸಮಾಜಸೇವೆ ಹಾಗೂ ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 5 ಜನವರಿ 2021ರಲ್ಲಿ ಬೈಕಾಡಿ ಪ್ರತಿಷ್ಠಾನವನ್ನು ಹುಟ್ಟು ಹಾಕಲಾಯಿತು. ಪ್ರತಿ ವರ್ಷದಂತೆ ಬೈಕಾಡಿಯವರ ಹುಟ್ಟುಹಬ್ಬದಂದು “ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ವಿವಿಧ ಕ್ಷೇತ್ರಗಳಲ್ಲಿ ಕೃಷಿಗೈದ ಪ್ರತಿಭಾವಂತರಿಗೆ ಬೈಕಾಡಿ ಪ್ರತಿಷ್ಠಾನವು ನೀಡುತ್ತಾ ಬಂದಿದೆ. ಇದೇ ಜನವರಿ 5, 2026ರಂದು ಬೈಕಾಡಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ಈ ಬಾರಿ ಹಿರಿಯ ಜನಪದ ಕಲಾವಿದ ರಮೇಶ್…
ಮೂಡುಬಿದಿರೆ,ಜ.02 : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಮಾರೂರು ಹೊಸಂಗಡಿ ಬಳಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕನನ್ನು ಹೊಸಂಗಡಿ ನಿವಾಸಿ ನಝೀರ್ ಎಂಬವರ ಪುತ್ರ ಝಾಹಿರ್ (13) ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಜ.01 : ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಅವರು ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ ರಾಗಿರುತ್ತಾರೆ. ವಿನಯ ಹೆಗ್ಡೆ ಅವರು 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಮಂಗಳೂರಿನ ನಿಟ್ಟೆ ಶಿಕ್ಷಣ ಸಂಸ್ಥೆಗಳು ಬೆಂಗಳೂರು ಮತ್ತು ನಿಟ್ಟೆಯಲ್ಲಿ ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳು ಸೇರಿವೆ. ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.












