Author: admin

ಮಂಗಳೂರು,ಮೇ. 18  : ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಇದೇ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು ಅನುಕರಿಸುವ ಕರೆಯಾಗಿದ್ದು, ಪ್ರತಿಯೊಬ್ಬ ಗುರುವು ಬಲಿಪೀಠದ ಮುಂದೆ “ಯಾಜಕ ಮತ್ತು ಬಲಿಪಶು” ಆಗಿ ತನ್ನ ಜೀವನವನ್ನೇ ಬಲಿದಾನವಾಗಿ ಅರ್ಪಿಸಬೇಕು ಎಂದು ಕರೆ ನೀಡಿದರು. ಸಂತ ಪಾದ್ರೆ ಪಿಯೋ ಅವರ ಉದಾಹರಣೆಯನ್ನು ನೀಡುತ್ತಾ, ಗುರುಗಳು ಜನರೊಂದಿಗೆ ನಿಕಟವಾಗಿರಬೇಕು ಮತ್ತು ಪ್ರವಾದಿ ಎಲಿಜಾರಂತೆ ದೈವಿಕ ಉತ್ಸಾಹದೊಂದಿಗೆ ಆಧುನಿಕ ಕಾಲದ ಸುಗಮ ಮಾರ್ಗಗಳನ್ನು ಬಳಸಿ ಸುಸಂದೇಶ ಸಾರಬೇಕು ಎಂದು ಹೇಳಿದರು. ಸುಮಾರು 130…

Read More

ಬೆಳ್ತಂಗಡಿ, ಮೇ. 18 : ಪಡಂಗಡಿಯ ಕನ್ನಡಿಕಟ್ಟೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ  ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್ ನ ಮಾಲಕ ಪ್ರಗತಿಪರ ಕೃಷಿಕ ಅನಿಲ್ ಭಟ್) ಅವರ ಪತ್ನಿ ಶೈಲಜಾ (35) ಎಂದು ಗುರುತಿಸಲಾಗಿದೆ ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಶೈಲಜಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪೋಲಿಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಮೇ 16: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್ ಪ್ರೀಮಿಯರ್ ಶೋ ಮೇ 15, ಶುಕ್ರವಾರ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ ಬೆಳಗಿಸುವ ಮೂಲಕ ಪ್ರೀಮಿಯರ್ ಶೋ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮಕ್ಕೆ ಶುಭಕೋರಿದರು.ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ ಅವರು ಮಾತಾಡಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಕೆ. ಹರೀಶ್ ಕುಮಾರ್,ಮಾಜಿ ರೋಟರಿ ಜಿಲ್ಲಾ ಗವರ್ನರ್ ಡಾ. ದೇವದಾಸ್ ರೈ,ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ ,  ಶ್ರೇಯಸ್ ಕುಮಾರ್ ಫರಂಗಿಪೇಟೆ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದೇವಿ ಪ್ರಸಾದ್ ಕೊಂಚಾಡಿ, ದಿನೇಶ್ ಕೋಟ್ಯಾನ್, ಅಭಿನವ್ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ15 : ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟರ್ಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಎಂಬ ಶೀರ್ಷಿಕೆಯಡಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷರಾದ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯೆರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಂಚಾಡಿ ಮೆರಿಹಿನಲ್ಲಿರುವ ‘ ಪಾಲೆಮಾರ್ ಕನ್ವೆನ್ಸನ್ ಸೆಂಟರ್’ನಲ್ಲಿ ಮೇ 15 ಮತ್ತು 16 ರಂದು ಈ ಬೃಹತ್ ಸಮ್ಮೇಳನ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೃತ್ತಿಪರರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ವೃತ್ತಿಯಲ್ಲಿನ ಉದಯೋನ್ಮುಖ ಬೆಳವಣಿಗೆಗಳು, ತಂತ್ರಜ್ಞಾನ ಆಧಾರಿತ ರೂಪಾಂತರ ಮತ್ತು ಪ್ರಸಕ್ತ ಹಣಕಾಸು ನಿಯಂತ್ರಣ ಬದಲಾವಣೆಗಳ ಬಗ್ಗೆ ವೃತ್ತಿಪರರನ್ನು ಸಜ್ಜುಗೊಳಿಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ ಎಂದರು. ಮೇ 15ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಸಹ-…

Read More

ಮಂಗಳೂರು, ಮೇ 15: ಪತ್ರಕರ್ತ, ಸಾಹಿತಿ ರೇಮಂಡ್ ಡಿಕುನ್ಹಾ ತಾಕೋಡೆ ಅವರು ಬರೆದಿರುವ, ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿರುವ ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿಯು ಪತ್ರಿಕಾಭವನದಲ್ಲಿ ಗುರುವಾರ ಬಿಡುಗಡೆಗೊಂಡಿತು. ಸಮಾಜ ಸೇವಕ ಮೈಕಲ್ ಡಿಸೋಜಾ ಕೃತಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ, ವಿಷನ್ ಕೊಂಕಣ ಸಂಸ್ಥೆಯ ಮುಖಾಂತರ ಮಾತಭಾಷೆಯಲ್ಲಿ ಕೃತಿ ಪ್ರಕಟಿಸುವ ಬರೆಹಗಾರರ ಪುಸ್ತಕವನ್ನು ಮುದ್ರಣ ಮಾಡಲು ಸಹಾಯ ಮಾಡುತ್ತಿದ್ದೇನೆ. ಈಗ ಬಿಡುಗಡೆಗೊಂಡಿರುವ ಪುಸ್ತಕ ಸಂಸ್ಥೆಯ 42ನೇ ಪುಸ್ತಕವಾಗಿದೆ. ಮುಂದಿನ 5 ವರ್ಷಗಳಲ್ಲಿ 100 ಪುಸ್ತಕಗಳನ್ನು ಹೊರತರುವ ಗುರಿ ಹೊಂದಲಾಗಿದೆ. ಕೃತಿಯನ್ನು ರಚಿಸಿ ಅದನ್ನು ಮುದ್ರಿಸಲು ಅನುದಾನದ ಕೊರತೆ ಎದುರಿಸುತ್ತಿರುವ ಕೃತಿಕಾರರಿಗೆ ಸಹಾಯ ಮಾಡಲು ವಿಷನ್ ಕೊಂಕಣಿ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು. ವಿಷನ್ ಕೊಂಕಣಿ ಮುಖ್ಯಸ್ಥ ಮುಖ್ಯಸ್ಥ ಹೆನ್ರಿ ಮೆಂಡೋನ್ಸಾ ಪೆರ್ನಾಲ್ ಮಾತನಾಡಿ, ಮೈಕಲ್ ಡಿಸೋಜ ಅವರು ತಮ್ಮ ವಿಷನ್ ಕೊಂಕಣಿ ಮೂಲಕ ಸಾಹಿತಿಗಳಿಗೆ ಸಹಾಯ ಮಾಡುತ್ತಿದ್ದಾರೆ. 40 ಲಕ್ಷಕ್ಕೂ ಮಿಕ್ಕಿದ ನೆರವಿನ ಪಂಚವಾರ್ಷಿಕ ಯೋಜನೆ ಇದಾಗಿದೆ. ನಮ್ಮಲ್ಲಿ…

Read More

ಮಂಗಳೂರು, ಮೇ 14: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್ ಪ್ರೀಮಿಯರ್ ಪ್ರದರ್ಶನ ಮೇ 15ರಿಂದ 17ರ ವರೆಗೆ ಮಂಗಳೂರಿನ ಭಾರತ್ ಸಿನೆಮಾಸ್ನಲ್ಲಿ ನಡೆಯಲಿದೆ. ಎಂದು ಚಿತ್ರದ ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ  ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು ಡ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಕಥೆಯನ್ನು ಶ್ರೇಯಸ್ ಕುಮಾರ್ ಫರಂಗಿಪೇಟೆ ಬರೆದಿದ್ದು ಮಂಗಳೂರಿನ ಸುತ್ತಮುತ್ತಲಲ್ಲಿ ಚಿತ್ರೀಕರಣಗೊಂಡಿದೆ. ರಂಗಿತರಂಗ ಖ್ಯಾತಿಯ ಕಾರ್ತಿಕ್ ವಿ.ಆರ್., ಯಜೇಶ್ ಬರ್ಕೆ ಈ ಟೆಲಿಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ, ಶ್ರೇಯಸ್ ಕುಮಾರ್ ಫರಂಗಿಪೇಟೆ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದೇವಿ ಪ್ರಸಾದ್ ಕೊಂಚಾಡಿ, ದಿನೇಶ್ ಕೋಟ್ಯಾನ್, ಅಭಿನವ್ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅವರು ಮೇ. 13,ಬುಧವಾರ ನಿಧನರಾದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಹಾಗೆನೇ ಅವರು ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್  ಸಂಸ್ಥೆಗಳನ್ನು ಹೊಂದಿದ್ದರು ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್‌ಗಳು, 4 ಮಸೀದಿಗಳು ಮತ್ತು 3 ದೇವಾಲಯಗಳನ್ನು ನಿರ್ಮಿಸಿ ದ್ದಾರೆ. ಹಾಗೆನೇ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ನಿರ್ಮಿಸಿದ್ದರು. ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು, ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್ ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ಅವರ  ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್‌ಕೆಸಿಎ…

Read More

ಮಂಗಳೂರು,ಮೇ. 13 : 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭವು ಮೇ 15, ಶುಕ್ರವಾರ ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ಅವರುಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಭಿನಂದನಾ ಸಮಿತಿಯ ಸಂಚಾಲಕರಾದ ಮೆಲ್ವಿನ್ ರೊಡ್ರಿಗಸ್ ಅವರ ನೇತೃತ್ವದಲ್ಲಿ ಬಹಳ ಆಯೋಜಿಸಲಾಗಿದೆ.ಅನಿವಾಸಿ ಉದ್ಯಮಿ ಮೈಕಲ್ ಡಿಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಕನ್ನಡ ಕವಿ ಮತ್ತು ಸಾಹಿತಿ ಜಯಂತ್ ಕಾಯ್ಕಿಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಸಂಜೆ 5.30ಕ್ಕೆ ಕಾರ್ಯಕ್ರಮವು ಆರಂಭವಾಗಲಿದ್ದು, 5:45ಕ್ಕೆ ಉಸ್ತಾದ್ ರಫೀಕ್ ಖಾನ್ ಮತ್ತು ಅವರ ಸಂಗಾತಿಗಳಿಂದ ‘ಸಿತಾರ್ ಪ್ಯೂಷನ್’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಎಡ್ಡಿ ಸಿಕೇರ್ ಮತ್ತು ಮುಹಮ್ಮದ್ ಮುಆದ್ ಜಿ.ಎಂ. ಅವರಿಂದ ಎಚ್.ಎಂ. ಪೆರ್ನಾಲ್ ಅವರ ಕವಿತೆಗಳ ಸಾದರೀಕರಣದ ಮೂಲಕ…

Read More

ಮಂಗಳೂರು, ಮೇ. 12: ಮಕ್ಕಳ ಪ್ರತಿಭೆ, ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪಾರ್ಕ್ ಟ್ರೀ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ಸಂಸ್ಥೆಯ ಸೌಜನ್ಯ ಹೆಗ್ಡೆ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ಮಕ್ಕಳಿಗೆ ಕಲಿಕೆ, ಆಟೋಟ, ಸೃಜನಾತ್ಮಕ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಾಗಾರಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶೇಷ ಆಕರ್ಷಣೆಯಾಗಿ ಮೊದಲ ಬಾರಿಗೆ ಮಕ್ಕಳಿಗಾಗಿ ‘ಕಿಡ್ಸ್ ಮ್ಯಾರಥಾನ್’ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರೀತಮ್ ಪೊನ್ನಪ್ಪ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ 12 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಸಂಸ್ಥಾಪಕರ ಕುಟುಂಬ ಸದಸ್ಯರು ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ಭಾವಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಅಧ್ಯಕ್ಷರಾದ ಅನಿಲ್ ಲೋಬೊ ಅವರು ಸ್ವಾಗತ ಭಾಷಣದಲ್ಲಿ, ಸಂಸ್ಥಾಪಕರ ದೃಷ್ಟಿಕೋನ ಮತ್ತು ಧ್ಯೇಯವನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥಾಪಕರ ದಿನಾಚರಣೆಯನ್ನು ಪ್ರಾರಂಭಿಸಲಾಗಿದೆ.2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ.24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16ರಿಂದ 21ಕ್ಕೆ ಏರಿಕೆಯಾಗಿದೆ.ಬ್ಯಾಂಕಿನ ಒಟ್ಟು ವ್ಯವಹಾರ ರೂ.500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆಯಾಗಿದ್ದು, ಠೇವಣಿಗಳು ರೂ.300 ಕೋಟಿಯಿಂದ ರೂ.875 ಕೋಟಿಗೆ ಹೆಚ್ಚಳವಾಗಿವೆ ಎಂದರು. ಬ್ಯಾಂಕ್ ರೂ.13 ಕೋಟಿ ಲಾಭ ದಾಖಲಿಸಿದೆ ಎಂದು ಹೇಳಿದರು. ವಂ. ಡಾ| ಪ್ರವೀಣ್ ಮಾರ್ಟಿಸ್ ಅವರು ತಮ್ಮ ಭಾಷಣದಲ್ಲಿ, ಅಧ್ಯಕ್ಷರಾದ…

Read More